ಖನನ ಕುತೂಹಲ!

ಮೊದಲ ಚಿತ್ರದಲ್ಲೇ ಹೀರೋಗೆ ಐದು ಶೇಡ್‌

Team Udayavani, Apr 27, 2019, 5:00 AM IST

Khanana

ಕನ್ನಡದಲ್ಲಿ ಈಗಂತೂ ಹೊಸಬರ ಚಿತ್ರಗಳು ಗಮನಸೆಳೆಯುತ್ತಿವೆ. ಜೊತೆಗೆ ಒಂದಷ್ಟು ನಿರೀಕ್ಷೆಯನ್ನೂ ಹುಟ್ಟಿಸುತ್ತಿವೆ. ಹೊಸ ಪ್ರಯೋಗಗಳೊಂದಿಗೆ ಭರವಸೆ ಮೂಡಿಸುತ್ತಿರುವ ಚಿತ್ರಗಳಿಗೆ ಲೆಕ್ಕವಿಲ್ಲ. ಆ ಸಾಲಿಗೆ ಈಗ “ಖನನ’ ಚಿತ್ರ ಹೊಸ ಸೇರ್ಪಡೆ ಎನ್ನಬಹುದು. ಇದು ಸಂಪೂರ್ಣ ಹೊಸಬರ ಚಿತ್ರ. ನಾಯಕ ಆರ್ಯವರ್ಧನ್‌ ಅವರಿಗೆ ಇದು ಮೊದಲ ಚಿತ್ರ.

ಸಾಮಾನ್ಯವಾಗಿ ಮೊದಲ ಸಲ ತೆರೆ ಮೇಲೆ ಕಾಣಿಸಿಕೊಳ್ಳುವ ನಾಯಕ ನಟರು ಒಂದು ಪಾತ್ರವನ್ನು ನೀಟ್‌ ಆಗಿ ಮಾಡುವತ್ತ ಮಾತ್ರ ಗಮನಹರಿಸುತ್ತಾರೆ. ಆದರೆ, “ಖನನ’ ಮೂಲಕ ಆರ್ಯವರ್ಧನ್‌ ಅವರು ಮೊದಲ ಸಿನಿಮಾದಲ್ಲೇ ಅವರು ಒಂದಲ್ಲ, ಎರಡಲ್ಲ ಐದು ಶೇಡ್‌ ಇರುವ ಪಾತ್ರ ಮಾಡಿದ್ದಾರೆ ಎಂಬುದು ವಿಶೇಷ.

ಹೌದು, ನಿರ್ದೇಶಕ ರಾಧಾ ಅವರು ಆರ್ಯವರ್ಧನ್‌ ಅವರಿಗೆ ಇಂಥದ್ದೊಂದು ಪಾತ್ರ ಕೊಟ್ಟಿದ್ದಾರೆ. ಆ ಪಾತ್ರವನ್ನು ಅಷ್ಟೇ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ ಎನ್ನುವ ನಿರ್ದೇಶಕ ರಾಧಾ, ಆರ್ಯವರ್ಧನ್‌ ಅವರಿಗೆ ಸಿನಿಮಾ ಮೇಲೆ ಪ್ರೀತಿ ಇದೆ. ಅದರಲ್ಲೂ ಪಾತ್ರಕ್ಕೆ ತಯಾರಾದ ರೀತಿ ಮೆಚ್ಚಲೇಬೇಕು. ಅವರಿಲ್ಲಿ ಒಬ್ಬ ಆರ್ಕಿಟೆಕ್ಟ್ ಆಗಿಯೂ, ದೇಹದಾರ್ಢ್ಯ ಪಟುವಾಗಿಯೂ, ಸೈಕೋ ಪಾತ್ರದಲ್ಲೂ ಮಿಂಚಿದ್ದಾರೆ.

ಇನ್ನೂ ಎರಡು ಶೇಡ್‌ ಪಾತ್ರ ಯಾವುದು ಎಂಬುದಕ್ಕೆ ಸಿನಿಮಾದಲ್ಲೇ ನೋಡಬೇಕು. ಇನ್ನು, ಈ “ಖನನ’ ಶೀರ್ಷಿಕೆ ಬಗ್ಗೆ ವಿವರಿಸುವ ನಿರ್ದೇಶಕರು, ಇದು ಸಂಸ್ಕೃತ ಪದ. ಭೂಮಿಯನ್ನು ಅಗೆಯುವುದಕ್ಕೆ ಹಾಗೆ ಕರೆಯುತ್ತಾರೆ. ಆ ಖನನ ಶೀರ್ಷಿಕೆಯನ್ನೇ ಬದುಕಿಗೂ ಹೋಲಿಸಿರುವುದಾಗಿ ಹೇಳುವ ಅವರು, ಪ್ರತಿಯೊಬ್ಬರ ಬದುಕಲ್ಲಿ ಒಂದಲ್ಲ ಒಂದು ದಿನ ಖನನ ಮಾಡುವ ಪರಿಸ್ಥಿತಿ ಬಂದೇ ಬರುತ್ತದೆ.

ಅದನ್ನೇ ಚಿತ್ರದಲ್ಲಿ ಬೇರೆ ರೂಪದಲ್ಲಿ ಹೇಳಲಾಗಿದೆ’ ಎನ್ನುತ್ತಾರೆ ನಿರ್ದೇಶಕರು. ನಾಯಕ ಆರ್ಯವರ್ಧನ್‌ ಅವರಿಗೆ ಕಥೆ ಇಷ್ಟವಾಗಿದ್ದೇ ತಡ ಸಿನಿಮಾ ಪಾತ್ರಗಳಿಗೆ ಹೇಗೆ ನ್ಯಾಯ ಸಲ್ಲಿಸಬೇಕು ಎಂಬ ಸಣ್ಣ ಭಯ ಶುರುವಾಗಿದ್ದು ನಿಜವಂತೆ. ನಿರ್ದೇಶಕರು ಯಾವಾಗ, ಇಲ್ಲಿ ಐದು ಶೇಡ್‌ ಪಾತ್ರಗಳಲ್ಲಿ ಕಾಣಿಸಿಕೊಳ್ಳಬೇಕು ಅಂದಾಗ, ಎಲ್ಲಾ ಶೇಡ್‌ ಪಾತ್ರಗಳಲ್ಲಿ ಒಂದಕ್ಕಿಂತ ಒಂದು ಭಿನ್ನವಾದ ಪಾತ್ರ ಆಗಿದ್ದರಿಂದ ಅದಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಲು ಸಮಯ ಬೇಕೆಂಬುದು ಅರಿವಾಗಿದೆ.

ಒಂದೊಂದೇ ಶೇಡ್‌ನ‌ ಪಾತ್ರದೊಳಗಿನ ಮನಸ್ಥಿತಿ ಹೇಗಿರುತ್ತೆ ಎಂಬುದನ್ನು ನಿಧಾನವಾಗಿ ಅರ್ಥಮಾಡಿಕೊಂಡ ಬಳಿಕ ಅದಕ್ಕೆ ನ್ಯಾಯ ಸಲ್ಲಿಸಲು ಪ್ರಯತ್ನಪಟ್ಟಿದ್ದಾರಂತೆ. ಮೊದಲ ಚಿತ್ರದಲ್ಲೇ ಇಷ್ಟೊಂದು ಚಾಲೆಂಜ್‌ ಎದುರಿಸಿದ್ದು ಒಂದು ರೀತಿಯ ದೊಡ್ಡ ಅನುಭವ ಎನ್ನುವ ಆರ್ಯವರ್ಧನ್‌, ಇಲ್ಲಿ ಅನೇಕ ವಿಶೇಷತೆಗಳಿವೆ.

ಸಸ್ಪೆನ್ಸ್‌ ಮತ್ತು ಥ್ರಿಲ್ಲರ್‌ ಮಾದರಿಯ ಸಿನಿಮಾವಾಗಿದ್ದು, ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ತಯಾರಾಗಿದೆ ಎನ್ನುತ್ತಾರೆ. ಈ ಚಿತ್ರದಲ್ಲಿ ನಾಯಕಿ ಇಂಡೋ ಅಮೆರಿಕನ್‌ ಶೈಲಿಯ ಹುಡುಗಿ. ಆ ರೀತಿಯ ಪಾತ್ರಕ್ಕೆ ಎಲ್ಲೆಡೆ ಆಡಿಷನ್‌ ನಡೆಸಿದ ನಿರ್ದೇಶಕರಿಗೆ ಕೊನೆಗೆ ಸಿಕ್ಕಿದ್ದು, ಅಸ್ಸಾಂ ಚೆಲುವೆ.

ಕಥೆ ಹಾಗು ಪಾತ್ರಕ್ಕೆ ತಕ್ಕಂತೆ ಆ ನಾಯಕಿ ಕಾಣಿಸಬೇಕು ಎಂಬ ಕಾರಣಕ್ಕೆ ಅಸ್ಸಾಂನ ಕರಿಷ್ಮಾ ಬರುಹಾ ಅವರನ್ನು ಆಯ್ಕೆ ಮಾಡಿದ ಬಗ್ಗೆ ಹೇಳುತ್ತಾರೆ ನಿರ್ದೇಶಕ ರಾಧಾ. ಇನ್ನು, ಕರಿಷ್ಮಾ ಬರುಹಾ ಅವರಿಲ್ಲಿ ನೆಗೆಟಿವ್‌ ಪಾತ್ರ ಮಾಡಿದ್ದಾರಂತೆ. ಅಂದಹಾಗೆ, ಈ ಚಿತ್ರಕ್ಕೆ ಬಿ.ಶ್ರೀನಿವಾಸ್‌ರಾವ್‌ ನಿರ್ಮಾಪಕರು. ಮೇ ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡಲು ತಯಾರಿ ನಡೆಸಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.