‘ಕಬ್ಜ’ ಸೆಟ್‌ಗೆ ಸುದೀಪ್‌ ಎಂಟ್ರಿ: ಖಡಕ್‌ ಲುಕ್‌ ನಲ್ಲಿ ಭಾರ್ಗವ್‌ ಭಕ್ಷಿ


Team Udayavani, Dec 18, 2021, 11:23 AM IST

kabzaa

ಆರ್‌.ಚಂದ್ರು ನಿರ್ದೇಶನದ “ಕಬ್ಜ’ ಚಿತ್ರದ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ. ಕನ್ನಡ ಚಿತ್ರರಂಗದಿಂದ ತಯಾರಾಗುತ್ತಿರುವ ಮತ್ತೂಂದು ಬಿಗ್‌ ಬಜೆಟ್‌ ಪ್ಯಾನ್‌ ಇಂಡಿಯಾ ಸಿನಿಮಾವಾಗಿ ದಿನದಿಂದ ದಿನಕ್ಕೆ ಸಿನಿಮಾ ಪ್ರೇಮಿಗಳ ಗಮನ ಸೆಳೆಯುತ್ತಿದ್ದ “ಕಬ್ಜ’ಗೆ ಮತ್ತೂಬ್ಬ ಸ್ಟಾರ್‌ ನಟನ ಎಂಟ್ರಿಯಾಗಿರೋದು ನಿಮಗೆ ಗೊತ್ತೇ ಇದೆ. ಅದು ಸುದೀಪ್‌. ಈ ಮೂಲಕ ಸಿನಿಮಾದ ಕ್ರೇಜ್‌ ಕೂಡಾ ದುಪ್ಪಟ್ಟಾಗಿದೆ.

ಸುದೀಪ್‌ “ಕಬ್ಜ’ ಚಿತ್ರಕ್ಕೆ ಎಂಟ್ರಿಕೊಡುತ್ತಿದ್ದಂತೆ ಅವರ ಅಭಿಮಾನಿಗಳಲ್ಲಿ ಎದ್ದ ಪ್ರಶ್ನೆ ಎಂದರೆ, ಸುದೀಪ್‌ ಅವರ ಗೆಟಪ್‌ ಹೇಗಿರಬಹುದು ಎಂದು. ಈಗ ಸ್ವತಃ ಸುದೀಪ್‌ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದು, ಫೋಟೋವೊಂದನ್ನು ಟ್ವೀಟ್‌ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಈ ಮೂಲಕ ಮತ್ತೆ ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ.

ಚಿತ್ರದಲ್ಲಿ ಸುದೀಪ್‌ ಅವರ ಹೇರ್‌ ಸ್ಟೈಲ್‌ನಿಂದ ಹಿಡಿದು ಸಂಪೂರ್ಣ ಲುಕ್‌ ಬದಲಾಗಲಿದೆ. ಚಿತ್ರದಲ್ಲಿ ಸುದೀಪ್‌ ಭಾರ್ಗವ್‌ ಭಕ್ಷಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು,1947ರಿಂದ1986ರ ಕಾಲಘಟ್ಟದ ಪಾತ್ರವಾಗಿದ್ದು, ಮಾಫಿಯಾ ಕೊನೆಗೊಳಿಸಲು ಭಕ್ಷಿ ಹೊರಡುತ್ತಾನೆ ಎಂಬ ಕ್ಯಾಪ್ಶನ್‌ ಅನ್ನು “ಕಬ್ಜ’ ಚಿತ್ರದ ಪೋಸ್ಟರ್‌ನಲ್ಲಿ ನೀಡಲಾಗಿದೆ.

ಈಗಾಗಲೇ ಸುದೀಪ್‌ ಹಾಗೂ ಉಪೇಂದ್ರ “ಮುಕುಂದ ಮುರಾರಿ’ ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಈಗ “ಕಬ್ಜ’ದಲ್ಲಿ ಮತ್ತೂಮ್ಮೆ ನಟಿಸುತ್ತಿದ್ದಾರೆ. “ಕಬ್ಜ’ ಚಿತ್ರದಲ್ಲಿ ನಟಿಸುತ್ತಿರುವ ಬಗ್ಗೆ ಸ್ವತಃ ಸುದೀಪ್‌ ಟ್ವೀಟ್‌ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಈ ಚಿತ್ರವನ್ನು ಏಳು ಭಾಷೆಗಳಲ್ಲಿ ಬಿಡುಗಡೆ ಮಾಡಬೇಕು ಎಂಬುದು ಚಂದ್ರು ಆಸೆ. ಚಿತ್ರಕ್ಕಾಗಿ ಬೆಂಗಳೂರು ಮತ್ತು ಹೈದರಾಬಾದ್‌ನಲ್ಲಿ ವಿಶೇಷ ಸೆಟ್‌ಗಳನ್ನು ನಿರ್ಮಿಸಿ ಅದರಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಚಿತ್ರವನ್ನು ಆರ್‌ ಚಂದ್ರ, ಶ್ರೀಸಿದ್ಧೇಶ್ವರ ಎಂಟರ್‌ಪ್ರೈಸಸ್‌ ಬ್ಯಾನನರ್‌ಡಿ ನಿರ್ಮಿಸುತ್ತಿದ್ದು, ಉಪೇಂದ್ರ ಮತ್ತು ಸುದೀಪ್‌ ಅವರ ಜೊತೆಗೆ ರಾಹುಲ್‌, ಅನೂಪ್‌ ರೇವಣ್ಣ, ಜಾನ್‌ಕೊಕ್ಕಿನ್‌, ರಾಹುಲ್‌ ದೇವ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ರವಿ ಬಸ್ರೂರು ಸಂಗೀತ ಈ ಚಿತ್ರಕ್ಕಿದೆ.

ಇದನ್ನೂ ಓದಿ:ಕನ್ನಡ ಭಾಷೆಯನ್ನು ನಾವು ಬಿಟ್ಟು ಕೊಡಬಾರದು… ರಚ್ಚು ಮಾತು

ಇನ್ನು ಸುದೀಪ್‌ ಅವರ “ವಿಕ್ರಾಂತ್‌ ರೋಣ’ ಫೆ.24ರಂದು ಚಿತ್ರ ಬಿಡುಗಡೆಯಾಗಲಿದೆ. “ವಿಕ್ರಾಂತ್‌ ರೋಣ’ ಆ್ಯಕ್ಷನ್‌ ಅಡ್ವೆಂಚರ್‌ ಶೈಲಿಯ ಚಿತ್ರವಾಗಿದ್ದು,55 ದೇಶಗಳಲ್ಲಿ,14 ಭಾಷೆಗಳಲ್ಲಿ3ಡಿ ಬಿಡುಗಡೆಯನ್ನುಕಾಣಲಿದೆ. ಅನೂಪ್‌ ಭಂಡಾರಿಯವರ ನಿರ್ದೇಶನ, ಜಾಕ್‌ ಮಂಜುನಾಥ್‌ ಹಾಗೂ ಶಾಲಿನಿ ಮಂಜುನಾಥ್‌ ರವರ ನಿರ್ಮಾಣ, ಅಲಂಕಾರ್‌ ಪಾಂಡಿಯನ್‌ ಅವರ ಸಹ-ನಿರ್ಮಾಣ ಈ ಚಿತ್ರಕ್ಕಿದೆ. ಚಿತ್ರಕ್ಕೆ ಬಿ.ಅಜನೀಶ್‌ ಲೋಕನಾಥ್‌ ಹಿನ್ನಲೆ ಸಂಗೀತ ಚಿತ್ರಕ್ಕಿದೆ. ಚಿತ್ರದಲ್ಲಿಕಿಚ್ಚ ಸುದೀಪ್‌ ಜೊತೆಗೆ ನಿರೂಪ್‌ ಭಂಡಾರಿ, ನೀತಾ ಅಶೋಕ್‌ ಹಾಗೂ ಜಾಕ್ವೆಲಿನ್‌ ಫ‌ರ್ನಾಂಡೀಸ್‌ ನಟಿಸಿದ್ದಾರೆ. ಜಾಕ್ವೆಲಿನ್‌ ಕೇವಲ ಹಾಡಿನಲ್ಲಷ್ಟೇಕಾಣಿಸಿಕೊಂಡಿಲ್ಲ. ಚಿತ್ರದ ಕೆಲವು ಪ್ರಮುಖ ದೃಶ್ಯಗಳಲ್ಲೂ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಜಾಕ್ವೆಲಿನ್‌ “ವಿಕ್ರಾಂತ್‌ ರೋಣ’ದಲ್ಲಿ ಒಂದು ಪಾತ್ರವಾಗಿದ್ದಾರೆ ಎನ್ನಬಹುದು. ಜಾಕ್ವೆಲಿನ್‌ಕಾಣಿಸಿಕೊಂಡಿರುವ ಹಾಡಿಗಾಗಿ ಸಖತ್‌ ಕಲರ್‌ಫ‌ುಲ್‌ ಸೆಟ್‌ ಹಾಕಿದ್ದು, ಬೆಂಗಳೂರು ಹೊರವಲಯದಲ್ಲಿ ಚಿತ್ರೀಕರಣ ನಡೆಸಲಾಗಿದೆ .

ಟಾಪ್ ನ್ಯೂಸ್

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.