ಕಿಚ್ಚನ ಅಭಿಮಾನಿಗಳು ಫುಲ್ ಆಕ್ಟೀವ್
Team Udayavani, Mar 30, 2020, 1:27 PM IST
ಈಗಾಗಲೇ ಕೋವಿಡ್ 19 ಎಫೆಕ್ಟ್ ನಿಂದಾಗಿ ಎಲ್ಲೆಡೆ ಸಾಕಷ್ಟು ಸಮಸ್ಯೆ ಎದುರಾಗಿದೆ. ಮೊದಲೇ ಸಂಕಷ್ಟದಲ್ಲಿದ್ದ ಬಡ ಕುಟುಂಬಗಳು ಇದೀಗ ಒಪ್ಪೊತ್ತಿನ ಊಟಕ್ಕೂ ಪರದಾಡುವಂತಹ ಸ್ಥಿತಿ ಬಂದೊದಗಿದೆ. ಈ ನಿಟ್ಟಿನಲ್ಲಿ ಹಲವು ಸಿನಿಮಾ ತಾರೆಯರು ಸಹಾಯಕ್ಕೆ ನಿಂತಿದ್ದಾರೆ. ಅವರಷ್ಟೇ ಅಲ್ಲ, ಅವರ ಅಭಿಮಾನಿಗಳೂ ಸಹ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ. ಹೌದು, ಸುದೀಪ್ ಅವರ ಅಭಿಮಾನಿಗಳು ಈಗ ಊಟವಿಲ್ಲದೆ, ಅಗತ್ಯ ವಸ್ತುಗಳಿಲ್ಲದೆ ಪರದಾಡುತ್ತಿರುವ ಜನರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ಪ್ಯಾಕ್ಗಳಲ್ಲಿ ಆಹಾರವನ್ನು ಸಿದ್ಧಪಡಿಸಿಕೊಂಡಿರುವ ಸುದೀಪ್ ಅಭಿಮಾನಿಗಳು, ಬೆಂಗಳೂರಿನ ಜೆ.ಜೆ.ನಗರ, ಬ್ಯಾಟರಾಯನಪುರ, ಗೋರಿಪಾಳ್ಯ, ಬಂಗಾರಪ್ಪ ನಗರ ಸೇರಿದಂತೆ ಅನೇಕ ಕಡೆ ಅವರ ಅಭಿಮಾನಿಗಳನ್ನು ಬಡವರಿಗೆ ತಲುಪಿಸುವ ಮೂಲಕ ಅವರ ಹಸಿವನ್ನು ನೀಗಿಸಲು ಮುಂದಾಗಿದ್ದಾರೆ.
ಸದ್ಯಕ್ಕೆ ಬೆಂಗಳೂರಿನ ಕೆಲವು ಹಿಂದುಳಿದಿರುವ ನಗರಗಳಲ್ಲಿ ಆಹಾರ ವಿತರಿಸುತ್ತಿರುವ ಸುದೀಪ್ ಅಭಿಮಾನಿಗಳು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಕಷ್ಟದಲ್ಲಿರುವ ಜನರಿಗೆ ಆಹಾರ ಒದಗಿಸುವ ಯೋಚನೆಯಲ್ಲಿದ್ದಾರೆ. ಈ ನಿಟ್ಟಿನಲ್ಲಿ ಸುದೀಪ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಒಂದಷ್ಟು ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Sandalwood: ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್ ಮ್ಯಾರೀಡ್” ಟೈಟಲ್
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್