ಕಿರಿಕ್‌ ಲವ್‌ಸ್ಟೋರಿಯ ಹಾಡು ಬಂತು


Team Udayavani, Jan 28, 2019, 5:40 AM IST

kirik-love-story.jpg

ಮಲಯಾಳಂ ಭಾಷೆಯ “ಒರು ಅಢಾರ್‌ ಲವ್‌’ ಚಿತ್ರ ಕನ್ನಡದಲ್ಲಿ “ಕಿರಿಕ್‌ ಲವ್‌ಸ್ಟೋರಿ’ ಹೆಸರಲ್ಲಿ ಫೆಬ್ರವರಿ 14 ರ ಪ್ರೇಮಿಗಳ ದಿನದಂದು ಬಿಡುಗಡೆಯಾಗುತ್ತಿರುವುದು ಗೊತ್ತೇ ಇದೆ. ಆ ಚಿತ್ರದ ಬಗ್ಗೆ ಈಗಾಗಲೇ ಎಲ್ಲೆಡೆ ಕುತೂಹಲವೂ ಇದೆ. ಕನ್ನಡದಲ್ಲಿ ತೆರೆಗೆ ಬರುತ್ತಿರುವ ಆ ಚಿತ್ರದ ಕುರಿತು ಮಾತನಾಡಲು ತಮ್ಮ ಚಿತ್ರತಂಡದೊಂದಿಗೆ ಪತ್ರಕರ್ತರ ಮುಂದೆ ಆಗಮಿಸಿದ್ದರು ನಿರ್ದೇಶಕ ಒಮರ್‌ ಲುಲು.

ಮೊದಲು ತಮ್ಮ “ಕಿರಿಕ್‌ ಲವ್‌ ಸ್ಟೋರಿ’ ಕುರಿತು ಅವರು ಹೇಳಿದ್ದಿಷ್ಟು. “ಇದೇ ಮೊದಲ ಬಾರಿಗೆ ಮಲಯಾಳಂ ಸಿನಿಮಾವೊಂದು ನಾಲ್ಕು ಭಾಷೆಯಲ್ಲಿ ತೆರೆ ಕಾಣುತ್ತಿದೆ. ಚಿತ್ರದ ನಾಯಕಿ ಪ್ರಿಯಾ ವಾರಿಯರ್‌ ಅವರ ಒಂದೇ ಒಂದು ಕಣ್ಸನ್ನೆ ಮಾಡುವ ಟೀಸರ್‌ ಒಂದು ಜೋರು ಸದ್ದು ಮಾಡಿ, ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಕೆರಳಿಸಿದ್ದು ಗೊತ್ತೇ ಇದೆ. ಇಡೀ ಸಿನಿಮಾ ಕೂಡ ಹಾಗೆಯೇ ಮೂಡಿಬಂದಿದೆ.

ಇದೊಂದು ಟೀನೇಜ್‌ ಲವ್‌ಸ್ಟೋರಿ. ಪಕ್ಕಾ ಮ್ಯೂಸಿಕಲ್‌ ಲವ್‌ಸ್ಟೋರಿಯನ್ನು ಇಲ್ಲಿ ಕಾಣಬಹುದು. ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ತಮ್ಮ ಶಾಲಾ ದಿನಗಳು ನೆನಪಾಗುವಷ್ಟರ ಮಟ್ಟಿಗೆ ಚಿತ್ರ ಮೂಡಿಬಂದಿದೆ. ಹಾಸ್ಯ, ಪ್ರೀತಿ, ಸೆಂಟಿಮೆಂಟ್‌ನೊಂದಿಗೆ ಒಂದು ಸಂದೇಶವೂ ಇಲ್ಲಿದೆ’ ಎಂಬುದು ನಿರ್ದೇಶಕರ ಮಾತು. ಇನ್ನು, “ಕಿರಿಕ್‌ ಲವ್‌ ಸ್ಟೋರಿ’ ಚಿತ್ರವನ್ನು ಕನ್ನಡದಲ್ಲಿ ದೇವೇಂದ್ರ ರೆಡ್ಡಿ ಅವರು ಬಿಡುಗಡೆ ಮಾಡುತ್ತಿದ್ದಾರೆ.

ಅವರಿಗೆ ಹಿತೇಶ್‌ರೆಡ್ಡಿ ಮತ್ತು ಬಿ.ರಾಮಕೃಷ್ಣ ಸಾಥ್‌ ನೀಡುತ್ತಿದ್ದಾರೆ. ಚಿತ್ರದ ಬಗ್ಗೆ ಹೇಳುವ ದೇವೇಂದ್ರ ರೆಡ್ಡಿ, “ಕನ್ನಡದಲ್ಲಿ ಈ ಚಿತ್ರವನ್ನು ವಿ ಮೂವೀಸ್‌ ಮೂಲಕ ವಿತರಣೆ ಮಾಡುತ್ತಿದ್ದು, ಸುಮಾರು 100 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಇದೊಂದು ಪಕ್ಕಾ ಮನರಂಜನೆ ಚಿತ್ರ. ಅದರಲ್ಲೂ ಸ್ಟುಡೆಂಟ್ಸ್‌ಗೆ ಇಷ್ಟವಾಗುವ ಸಿನಿಮಾ. ಕಥೆ ಈಗಿನ ಟ್ರೆಂಡ್‌ಗೆ ತಕ್ಕಂತೆ ಇದೆ. ಹಾಡುಗಳು ಸಹ ಹೊಸತನದಿಂದ ಕೂಡಿವೆ.

ಚಿತ್ರದ ಟ್ರೇಲರ್‌ಗೆ ಮೆಚ್ಚುಗೆ ಸಿಕ್ಕಿದ್ದು, ಚಿತ್ರಕ್ಕೂ ಬೇಡಿಕೆ’ ಇದೆ ಎಂಬುದು ಅವರ ಮಾತು. ಕನ್ನಡದ “ಕಿರಿಕ್‌ ಲವ್‌ ಸ್ಟೋರಿ’ಗೆ ಸಂಭಾಷಣೆ ಬರೆದಿರುವ ಶ್ವೇತಾ ಎನ್‌.ಎ. ಶೆಟ್ಟಿ ಅವರಿಗೆ ಇದು ಗೆಲುವು ತಂದುಕೊಡುತ್ತೆ ಎಂಬ ನಂಬಿಕೆ ಇದೆಯಂತೆ. ಈ ಹಿಂದೆ “1098′ ಎಂಬ ಮಕ್ಕಳ ಚಿತ್ರ ನಿರ್ದೇಶಿಸಿದ್ದ ಅವರಿಗೆ ಇದು ಮೊದಲ ಸಂಭಾಷಣೆ ಬರೆದ ಚಿತ್ರ. ಈ ಬಗ್ಗೆ ಹೇಳುವ ಶ್ವೇತಾ, “ಚಿತ್ರದಲ್ಲಿ ಒಳ್ಳೆಯ ಸಂದೇಶವಿದೆ.

ವಿದ್ಯಾರ್ಥಿಗಳ ಬದುಕಲ್ಲಿ ಪ್ರೀತಿ ಹೇಗೆಲ್ಲಾ ಮುಖ್ಯ ಪಾತ್ರ ವಹಿಸುತ್ತೆ, ಆ ಮೂಲಕ ಎಷ್ಟೆಲ್ಲಾ ಹಾಸ್ಯ ಸಂಗತಿಗಳನ್ನೂ ಹೊರಹಾಕುತ್ತೆ ಎಂಬ ಅಂಶ ಇಲ್ಲಿದೆ. ಇದು ಎಲ್ಲಾ ಭಾಷೆಗೂ ಸಲ್ಲುವಂತಹ ಕಥೆ. ಮಲಯಾಳಂ ಸ್ಕ್ರಿಪ್ಟ್ ಹಿಡಿದು ಕನ್ನಡಕ್ಕೆ ಮಾತುಗಳನ್ನು ಪೋಣಿಸುವಾಗ ನಮ್ಮತನದ ಕಥೆಗೆ ಕೆಲಸ ಮಾಡುತ್ತಿರುವ ಖುಷಿಯಾಯ್ತು. ಸಂಭಾಷಣೆ ಹಿಂದೆ ಸಾಕಷ್ಟು ಜನರ ಸಹಕಾರವಿದೆ. ಚಿತ್ರಕ್ಕೆ ಶಾನ್‌ ರೆಹಮಾನ್‌ ಸಂಗೀತವಿದೆ. ವಿ.ಮನೋಹರ್‌, ನಾಗೇಂದ್ರ ಪ್ರಸಾದ್‌ ಗೀತೆ ರಚಿಸಿದ್ದಾರೆ.

ಅನುರಾಧಭಟ್‌, ಸಂತೋಷ್‌ ವೆಂಕಿ ಇತರರು ಹಾಡಿದ್ದಾರೆ. ಚಿತ್ರದಲ್ಲಿ ಅಂಬರೀಶ್‌ ಸರ್‌ ಅವರನ್ನು ನೆನಪಿಸುವ ಹಾಡೊಂದು ಇರಲಿದೆ. ತೆಲುಗಿನಲ್ಲಿ ಶ್ರೀದೇವಿ ಕುರಿತ ಹಾಡಿದೆ. ಇಲ್ಲಿ ಅಂಬರೀಶ್‌ ಅವರಿಗೊಂದು ಹಾಡಿದೆ. ಅದನ್ನು ಚಿತ್ರದಲ್ಲೇ ನೋಡಬೇಕು’ ಎಂಬುದು ಶ್ವೇತಾ ಮಾತು. ಇನ್ನು, ನಾಯಕಿ ಪ್ರಿಯಾ  ವಾರಿಯರ್‌, ನಾಯಕ ರೋಷನ್‌ ತಮ್ಮ ಪಾತ್ರ ಮತ್ತು ಚಿತ್ರದ ಅನುಭವ ಹಂಚಿಕೊಂಡರು. ಉಳಿದಂತೆ ಮ್ಯಾಥುÂ, ಅರುಣ್‌ ಇತರರು ಮಾತನಾಡಿದರು.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

Sapthami Gowda

Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

eltu mutta kannada movie

Eltu Mutta Movie; ಸಾವಿನ ಮನೆಯಲ್ಲಿ ಡೋಲು ಬಡಿಯುವವರ ಕಥೆ

karimani malika kannada movie

Kannada Cinema; ‘ಕರಿಮಣಿ ಮಾಲೀಕ’ನ ನಂಬಿ ಬಂದವರು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.