ಕೆಂಪೇಗೌಡ-2 ! ಕೋಮಲ್‌ ನಾಯಕ 


Team Udayavani, Apr 16, 2017, 3:14 PM IST

6554.jpg

ಕೋಮಲ್‌ ಸ್ಲಿಮ್‌ ಆಗಿದ್ದಾರೆ. ಆದರೂ ಯಾಕೆ ಸಿನಿಮಾ ಮಾಡುತ್ತಿಲ್ಲ. ಅವರ ಉದ್ದೇಶವೇನು, ಯಾಕಾಗಿ ಸುಮ್ಮನಿದ್ದಾರೆ ಎಂಬೆಲ್ಲಾ ಪ್ರಶ್ನೆಗಳು ಎದ್ದಿದ್ದವು. ಆದರೆ, ಕೋಮಲ್‌ ಮಾತ್ರ ಏನೂ ಮಾತನಾಡದೇ ಹೊಸ ಮನೆಯಲ್ಲಿ ಖುಷಿ ಖುಷಿಯಾಗಿದ್ದರು. ಆ ಖುಷಿಯೊಳಗೆ “ಕೆಂಪೇಗೌಡ-2′ ಕೂಡಾ ಸೇರಿತ್ತು. “ಕೆಂಪೇಗೌಡ-2′ ಸಿನಿಮಾ ಲಾಂಚ್‌ ಆಗಿದ್ದು, ಕೋಮಲ್‌ ನಾಯಕರಾಗಿ ನಟಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೋಮಲ್‌ ಇಲ್ಲಿ ಮಾತನಾಡಿದ್ದಾರೆ … 

ಒಂದೂವರೆ ವರ್ಷದ ಗ್ಯಾಪ್‌ನಲ್ಲಿ ಏನೇನ್‌ ಮಾಡಿದ್ರಿ?
– ಒಂದಷ್ಟು ಕಮಿಟ್‌ಮೆಂಟ್‌ಗಳಿದ್ದವು. ಅವೆಲ್ಲವನ್ನು ಮುಗಿಸಿಕೊಂಡೆ. ಜೊತೆಗೆ ಸಾಕಷ್ಟು ವಕೌìಟ್‌ ಮಾಡಿ ಫಿಟ್‌ ಆದೆ. 21 ಕೆಜಿ ತೂಕ ಇಳಿಸಿಕೊಂಡೆ. ಶಂಕರೇ ಗೌಡ್ರು, ಶಂಕರ್‌ ರೆಡ್ಡಿ ಸಿಕ್ಕಿದ್ರು. ನನ್ನನ್ನು ನೋಡಿ ಅವರಿಗೆ ಶಾಕ್‌ ಆಯಿತು. ಆ ವೇಳೆ ಸಿನಿಮಾ ಮಾತುಕತೆಯಾಗಿ 6-7 ತಿಂಗಳು ಕಥೆಯಲ್ಲಿ ಕುಳಿತುಕೊಂಡೆವು. ಈಗ ಸಿನಿಮಾ ಸೆಟ್ಟೇರಿದೆ.

 “ಕೆಂಪೇಗೌಡ-2′ “ಸಿಂಗಂ-2′ ರೀಮೇಕ್‌ ಅಲ್ವಾ?
– ಇದು ರೀಮೇಕ್‌ ಸಿನಿಮಾ ಅಲ್ಲ. ಪಕ್ಕಾ ಒರಿಜಿನಲ್‌ ಸಿನಿಮಾ. ಅದೇ ಕಾರಣಕ್ಕೆ ಚಿತ್ರಕ್ಕೆ
“ಪಕ್ಕಾ ಒರಿಜಿನಲ್‌’ ಎಂಬ ಟ್ಯಾಗ್‌ಲೈನ್‌ ಇದೆ. ಸಹಜವಾಗಿ, ಸಿನಿಮ್ಯಾಟಿಕ್‌ ಇಲ್ಲದೇ ಈ
ಸಿನಿಮಾ ಮೂಡಿಬರುತ್ತದೆ.

“ಕೆಂಪೇಗೌಡ-2′ ಚಿತ್ರದ ವಿಶೇಷತೆ ಏನು?
– ಡಿಜಿಟಲ್‌ ಇಂಡಿಯಾದಲ್ಲಿ ಸೈಬರ್‌ ಕ್ರಿಮಿನಲ್‌ಗ‌ಳು ಕೂಡಾ ಜಾಸ್ತಿಯಾಗುತ್ತಿದ್ದಾರೆ. ಬೇರೆ ಕ್ರಿಮಿನಲ್‌ ಗಳಿಗಿಂತ ಆ ತರಹದ ಕ್ರಿಮಿನಲ್‌ಗ‌ಳನ್ನು ಹಿಡಿಯೋದು ಪೊಲೀಸ್‌ ಇಲಾಖೆಗೆ ಸವಾಲು. ಇಂತಹ ಸಂದರ್ಭದಲ್ಲಿ ನಾಯಕ ಯಾವ ತರಹ ಸೈಬರ್‌ ಕ್ರಿಮಿನಲ್‌ ಸೇರಿದಂತೆ ಇತರ ಕ್ರಿಮಿನಲ್‌ಗ‌ಳನ್ನು ಮಟ್ಟ ಹಾಕುತ್ತಾನೆ ಎಂಬುದು ಕಥೆ.

 ಪಾತ್ರಕ್ಕೆ ಸಿದ್ಧತೆ ಹೇಗಿತ್ತು?
– ಚಿತ್ರವನ್ನು ತುಂಬಾ ಸಹಜವಾಗಿ, ನೈಜತೆಯೊಂದಿಗೆ ಕಟ್ಟಿಕೊಡಲು ಪ್ರಯತ್ನಿಸುತ್ತಿದ್ದೇವೆ. ಅದು ನಟನೆಯಿಂದ ಹಿಡಿದು ಕಾನೂನು ಅಂಶಗಳವರೆಗೂ. ಹಾಗಾಗಿಯೇ ಪೊಲೀಸ್‌ ಆಫೀಸರ್‌ಗಳಲ್ಲಿ ಮಾತನಾಡಿ, ಚಿತ್ರಕ್ಕೆ ಪೂರಕವಾದ ಕಾನೂನಿನ ಅರಿವು, ಕೇಸ್‌ಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಯಾವುದೇ ಒಂದು ಅಂಶದಲ್ಲೂ ತಪ್ಪು ಕಾಣಬಾರದು. ಈಗ ಪ್ರೇಕ್ಷಕರು ತುಂಬಾ ಬುದ್ಧಿವಂತರು. ಏನೇ ತಪ್ಪಾದರೂ ಬೇಗನೇ ಗುರುತಿಸುತ್ತಾರೆ.

 ಇದು ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಸಿನಿಮಾನಾ?
– ಇಲ್ಲ, ಇದು ಔಟ್‌ ಅಂಡ್‌ ಔಟ್‌ ಕಾಪ್‌ ಸಿನಿಮಾ. ತುಂಬಾ ಸಹಜವಾಗುತ್ತದೆ. ನಾವು ದಿನನಿತ್ಯ ನೋಡುವ ಪೊಲೀಸ್‌ ಅಧಿಕಾರಿ ಹೇಗಿರುತ್ತಾನೆ ಅದೇ ರೀತಿ ಇಲ್ಲೂ ಇದೆ. ಸುಖಾಸುಮ್ಮನೆ ಚೇಸಿಂಗ್‌, ಹೊಡೆದಾಟವಿಲ್ಲ.

 ಕೋಮಲ್‌ ಕಾಮಿಡಿ ಇಲ್ಲಿ ಸಿಗಲ್ವಾ?
– ನಾವು ಉದ್ದೇಶಪೂರ್ವಕವಾಗಿ ಕಾಮಿಡಿ ಟ್ರ್ಯಾಕ್‌ ಇಟ್ಟಿಲ್ಲ. ಪೊಲೀಸರು ಕೂಡಾ ಮನುಷ್ಯರೇ. ಅವರಲ್ಲೂ ಹಾಸ್ಯಪ್ರಜ್ಞೆ ಇರುತ್ತದೆ. ಅವರು ತಮ್ಮ ಕುಟುಂಬದ ಜೊತೆ ದೇವಸ್ಥಾನ, ಕಾರ್ಯಕ್ರಮಗಳಿಗೆ ಹೋಗುತ್ತಾರೆ, ಫ್ರೆಂಡ್ಸ್‌ ಜೊತೆ ಪಾರ್ಟಿ ಮಾಡುತ್ತಾರೆ.ಆ ಸಂದರ್ಭದಲ್ಲಿ ಎಷ್ಟೋ ಜೋಕ್‌ ಹುಟ್ಟಿಕೊಳ್ಳುತ್ತವೆ. ಆ ತರಹದ ಕಾಮಿಡಿ ಸನ್ನಿವೇಶಗಳು ಚಿತ್ರದಲ್ಲಿರುತ್ತವೆ.

 ಇದು ನಿಮ್ಮ ಕಂಬ್ಯಾಕ್‌ ಸಿನಿಮಾ ಆಗುತ್ತಾ?
– ಅದು ಗೊತ್ತಿಲ್ಲ. ಆದರೆ, ನಾನು ತುಂಬಾ ಚೂಸಿ. ಸಿನಿಮಾ ಮಾಡಲೇಬೇಕೆಂಬ ಉದ್ದೇಶವಿದ್ದಿದ್ದರೆ ಇಷ್ಟೊತ್ತಿಗೆ ಸಾಕಷ್ಟು ಸಿನಿಮಾಗಳನ್ನು ಮಾಡುತ್ತಿದ್ದೆ. ಆದರೆ ನನಗೆ ಇಷ್ಟವಾದ ಕಥೆಗಳನ್ನಷ್ಟೇ ಮಾಡುತ್ತಾ ಬಂದಿದ್ದೇನೆ. ಇದು ಕೂಡಾ ನನಗೆ ಇಷ್ಟವಾದ ಕಥೆ, ಮಾಡುತ್ತಿದ್ದೇನೆ.

 “ಕೆಂಪೇಗೌಡ’ದಲ್ಲಿ ಸುದೀಪ್‌ ಇದ್ದರು. “ಕೆಂಪೇಗೌಡ-2’ನಲ್ಲಿ ನೀವು. ಈ ಬಗ್ಗೆ
ಏನಂತಿರಿ?

 ಆ ಚಿತ್ರವನ್ನು ಶಂಕರೇಗೌಡ ನಿರ್ಮಿಸಿದ್ದರು. ಈ ಚಿತ್ರವನ್ನು ಅವರೇ ನಿರ್ಮಿಸುತ್ತಿದ್ದಾರೆ. ಇಲ್ಲಿ ನಾನು ನಟಿಸುತ್ತಿದ್ದೇನೆ ಅಷ್ಟೇ. ಅದು ಬಿಟ್ಟು ಬೇರೇನೂ ಹೇಳಲಾರೆ. 

ಕೋಮಲ್‌ ರಿಂದ ಮುಂದೆ ಬೇರೆ ತರಹದ ಸಿನಿಮಾ ನಿರೀಕ್ಷಿಸಬಹುದಾ?
 ನಾವು ಏನೇ ಮಾಡುವುದಾದರೂ ಎಂಟರ್‌ಟೈನ್‌ಮೆಂಟ್‌ ಬಿಟ್ಟು ಮಾಡೋಕ್ಕಾಗಲ್ಲ. ಆ ಎಂಟರ್‌ಟೈನ್‌ ಮೆಂಟ್‌ನ ಬೇರೆ ತರಹ ತೋರಿಸಬಹು ದಷ್ಟೇ. ಆ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.