ಪೋಲಂಡ್ ನಲ್ಲಿ ಕೋಟಿಗೊಬ್ಬ-3 ಚಿತ್ರ ತಂಡಕ್ಕೆ ವಂಚನೆ; ಜಗ್ಗೇಶ್ ಮಾಡಿದ್ದೇನು?


Team Udayavani, Oct 17, 2019, 10:03 PM IST

Kotigobba-3-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕತ್ವದಲ್ಲಿ ಮೂಡಿಬರುತ್ತಿರುವ ಕೋಟಿಗೊಬ್ಬ- 3 ಚಿತ್ರತಂಡ ದೂರದ ಪೋಲಂಡ್ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿ, ಬಳಿಕ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಮತ್ತು ನವರಸ ನಾಯಕ ಜಗ್ಗೇಶ್ ಅವರ ಸಹಾಯದಿಂದ ಸುಖಾಂತ್ಯ ಕಂಡಿರುವ ಪ್ರಕರಣವೊಂದು ವರದಿಯಾಗಿದೆ.

ಸೂರಪ್ಪ ಬಾಬು ಅವರು ನಿರ್ಮಾಪಕರಾಗಿರುವ ಈ ಚಿತ್ರದ ಶೂಟಿಂಗ್ ಯುರೋಪ್ ನ ಪೋಲಂಡ್ ದೇಶದಲ್ಲಿ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ಚಿತ್ರತಂಡಕ್ಕೆ ಸಹಾಯ ಮಾಡುವುದಾಗಿ ಏಜೆನ್ಸಿಯೊಂದನ್ನು ನಡೆಸುತ್ತಿರುವ ಅಜಯ್ ಪಾಲ್ ಮತ್ತು ಸಂಜಯ್ ಪಾಲ್ ಎಂಬಿಬ್ಬರು ನಿರ್ಮಾಪಕರಿಗೆ ಗಂಟುಬಿದ್ದಿದ್ದಾರೆ. ಮತ್ತು ಇದಕ್ಕಾಗಿ ಸುಮಾರು ಎರಡು ಕೋಟಿ ರೂಪಾಯಿಗಳನ್ನು ಇವರಿಗೆ ಪಾವತಿಸುವ ಕುರಿತು ಚಿತ್ರತಂಡ ಮತ್ತು ಇವರಿಬ್ಬರ ನಡುವೆ ಒಪ್ಪಂದವೂ ಆಗಿತ್ತು.

ಆದರೆ ಇವೆಲ್ಲದರ ನಡುವೆ ಅಜಯ್ ಮತ್ತು ಸಂಜಯ್ ಇನ್ನಷ್ಟು ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದಾರೆ. ಮತ್ತು ಚಿತ್ರತಂಡ ಅಲ್ಲಿಂದ ಕರ್ನಾಟಕಕ್ಕೆ ವಾಪಾಸಾದರೂ ಸೂರಪ್ಪ ಬಾಬು ಅವರ ಸಹಾಯಕರೊಬ್ಬರ ಪಾಸ್ ಪೋರ್ಟ್ ಅನ್ನು ಪಾಲ್ ಗಳು ತೆಗೆದಿರಿಸಿದ್ದರಿಂದ ಆತ ಪೋಲಂಡ್ ನಲ್ಲೇ ಉಳಿಯುವ ಸಂಕಷ್ಟಕ್ಕೆ ಸಿಲುಕಬೇಕಾಯಿತು. ಮತ್ತು ಈತನ ಪಾಸ್ ಪೋರ್ಟ್ ನೀಡಲು ಈ ಪಾಲ್ ಗಳಿಬ್ಬರು ಹೆಚ್ಚುವರಿ 95 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ.

ಇತ್ತ ಬೇರೆ ದಾರಿ ಕಾಣದೆ ಸೂರಪ್ಪ ಬಾಬು ಅವರು ಚಿತ್ರನಟ ಜಗ್ಗೇಶ್ ಅವರಿಗೆ ಈ ವಿಚಾರವನ್ನು ತಿಳಿಸಿದ್ದಾರೆ. ಜಗ್ಗೇಶ್ ಅವರು ಕೂಡಲೇ ಕೇಂದ್ರ ಸಚಿವ ಸದಾನಂದ ಗೌಡರಿಗೆ ಮಾಹಿತಿ ನೀಡಿ ಅಲ್ಲಿ ವಂಚಕರ ಕೈಯಲ್ಲಿ ಸಿಲುಕಿಕೊಂಡಿರುವ ನಿರ್ಮಾಪಕರ ಸಹಾಯಕನನ್ನು ಬಿಡಿಸಿಕೊಳ್ಳಲು ನೆರವು ಕೇಳಿದ್ದಾರೆ.

ಜಗ್ಗೇಶ್ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಸದಾನಂದ ಗೌಡ ಅವರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿ ಅವರ ಮೂಲಕ ಅಜಯ್ ಮತ್ತು ಸಂಜಯ್ ಪಾಲ್ ಅವರಿಗೆ ನೊಟೀಸು ಕೊಡಿಸಿದ್ದಾರೆ. ಇದರಿಂದ ಕಂಗಾಲಾದ ಪಾಲ್ ದ್ವಯರು ತಮ್ಮ ವಶದಲ್ಲಿದ್ದ ಚಿತ್ರತಂಡದ ವ್ಯಕ್ತಿಯ ಪಾಸ್ ಪೋರ್ಟ್ ಅನ್ನು ಆತನಿಗೆ ಮರಳಿಸಿ ಆತನನ್ನು ಭಾರತಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಇದೀಗ ಅಜಯ್ ಪಾಲ್ ಹಾಗೂ ಸಂಜಯ್ ಪಾಲ್ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ವಿವಿಧ ದಂಧೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಈ ವಂಚಕರು ಬೇರೆ ಬೇರೆ ಕಂಪೆನಿಗಳ ಹೆಸರಿನಲ್ಲಿ ಹಲವರಿಗೆ ವಂಚಿಸಿರುವ ಕುರಿತಾಗಿಯೂ ಇದೀಗ ಶಂಕೆ ವ್ಯಕ್ತವಾಗಿದೆ.

ಈ ಕುರಿತಾಗಿ ಟ್ವೀಟ್ ಒಂದನ್ನು ಮಾಡಿರುವ ಜಗ್ಗೇಶ್ ಅವರು ‘ನನ್ನ ರಂಗದವರಿಗೆ ಭುಜ ಕೊಡುವುದು ನನ್ನ ಕರ್ತವ್ಯ’ ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.