ಮರುಭೂಮಿಯಲ್ಲಿ ಕೃಷ್ಣನ್‌ ಹಾಡು!

ಕೃಷ್ಣಟಾಕೀಸ್‌ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್‌

Team Udayavani, Oct 17, 2019, 3:02 AM IST

Ajay-Rao

ಅಜೇಯ್‌ ರಾವ್‌ ಅಭಿನಯದ “ಕೃಷ್ಣ ಟಾಕೀಸ್‌’ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಎಲ್ಲೆಡೆಯಿಂದಲೂ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ, ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷ ವೀಕ್ಷಣೆಯಾಗಿರುವುದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ. ಸದ್ಯ ಚಿತ್ರೀಕರಣವನ್ನು ಮುಗಿಸುವ ಉತ್ಸಾಹದಲ್ಲಿರುವ ನಿರ್ದೇಶಕ ವಿಜಯಾನಂದ್‌, ಇತ್ತೀಚೆಗಷ್ಟೇ ಚಿತ್ರದ ಹಾಡೊಂದನ್ನು ರಾಜಸ್ಥಾನದ ಜೋದ್‌ಪುರ್‌ನಲ್ಲಿ ಚಿತ್ರೀಕರಿಸಿದ್ದಾರೆ.

ಅಲ್ಲಿನ ಮರುಭೂಮಿ ಹಾಗು ಕೋಟೆ ಸುತ್ತಮುತ್ತಲ ತಾಣದಲ್ಲಿ ನಿರ್ದೇಶಕ ವಿಜಯಾನಂದ್‌ ಅವರೇ ಬರೆದ “ಮನಮೋಹನ…’ ಹಾಡನ್ನು ಚಿತ್ರೀಕರಿಸಲಾಗಿದೆ. ಮೂರು ದಿನಗಳ ಕಾಲ ನಡೆದ ಆ ಹಾಡಿಗೆ ಮದನ್‌ ಹರಿಣಿ ಅವರ ನೃತ್ಯ ನಿರ್ದೇಶನವಿದೆ. ಈ ಹಾಡಲ್ಲಿ ಅಜೇಯ್‌ ರಾವ್‌ ಜೊತೆ ನಾಯಕಿ ಅಪೂರ್ವ ಹೆಜ್ಜೆ ಹಾಕಿದ್ದಾರೆ. ಚಿತ್ರಕ್ಕೆ ಒಂದು ಹಾಡು ಹಾಗು ಒಂದು ಫೈಟ್‌ ಮುಗಿದರೆ, ಚಿತ್ರೀಕರಣ ಮುಗಿಯಲಿದೆ ಎಂಬುದು ನಿರ್ದೇಶಕ ವಿಜಯಾನಂದ್‌ ಮಾತು.

ಚಿತ್ರದ ಬಗ್ಗೆ ಹೇಳುವ ನಿರ್ದೇಶಕರು, “ಇದೊಂದು ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರ. ಸುಮಾರು ವರ್ಷಗಳ ಹಿಂದೆ ಲಕ್ನೋದ ಚಿತ್ರಮಂದಿರವೊಂದರಲ್ಲಿ ನಡೆದ ನೈಜ ಘಟನೆಯನ್ನಾಧರಿಸಿ ಈ ಚಿತ್ರ ಮಾಡಲಾಗುತ್ತಿದೆ. ಚಿತ್ರ ಕ್ಷಣ ಕ್ಷಣವೂ ಕುತೂಹಲ ಹೆಚ್ಚಿಸುತ್ತಾ ಸಾಗಿ, ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎನ್ನುತ್ತಾರೆ. ಅಂದಹಾಗೆ, ಗೋಕುಲ ಎಂಟರ್‌ಟೈನರ್‌ ಬ್ಯಾನರ್‌ನಲ್ಲಿ ಗೋವಿಂದರಾಜು ನಿರ್ಮಿಸುತ್ತಿರುವ “ಕೃಷ್ಣ ಟಾಕೀಸ್‌’ ಚಿತ್ರಕ್ಕೆ ವಿ. ಶ್ರೀಧರ್‌ ಸಂಭ್ರಮ್‌ ಸಂಗೀತವಿದೆ.

ವಿಲಿಯಮ್‌ ಡೇವಿಡ್‌ ಛಾಯಾಗ್ರಹಣ ಮಾಡಿದರೆ, ಶ್ರೀಕಾಂತ್‌ ಸಂಕಲನವಿದೆ. ಚಿತ್ರದಲ್ಲಿ ಸಿಂಧು ಲೋಕನಾಥ್‌, ಚಿಕ್ಕಣ್ಣ, ಪ್ರಮೋದ್‌ ಶೆಟ್ಟಿ, ಪ್ರಕಾಶ್‌, ಶೋಭರಾಜ್‌, ಮಂಡ್ಯ ರಮೇಶ್‌, ನಿರಂತ್‌, ಯಶ್‌ ಶೆಟ್ಟಿ, ಉಮೇಶ್‌, ಶ್ರೀನಿವಾಸ ಪ್ರಭು, ಲಕ್ಷ್ಮೀಗೌಡ, ಯಮುನಾ, ಧರ್ಮೇಂದ್ರ ಅರಸ್‌, ಶಂಕರ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ನವೆಂಬರ್‌ನಲ್ಲಿ ಆಡಿಯೋ ಬಿಡುಗಡೆ ಮಾಡಿ, ಡಿಸೆಂಬರ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.