ಕುರುಕ್ಷೇತ್ರಕ್ಕೆ ಭಾನುವಾರ ಮುಹೂರ್ತ;ಚಿತ್ರದ ಮೊದಲ ಲುಕ್ ಬಿಡುಗಡೆ
Team Udayavani, Aug 3, 2017, 3:05 PM IST
ಮುನಿರತ್ನ ನಿರ್ಮಾಣದ ಈ ಚಿತ್ರಕ್ಕೆ ಆಗಸ್ಟ್ 06ಕ್ಕೆ ಅದ್ಧೂರಿಯಾಗಿ ಮುಹೂರ್ತ ನಡೆಯಲಿದೆ. ಪೀಣ್ಯ ಬಳಿ ಇರುವ ಪ್ರಭಾಕರ್ ಕೋರೆ ಕನ್ವೆನ್ಷನ್ ಹಾಲ್ನಲ್ಲಿ ಚಿತ್ರದ ಮುಹೂರ್ತ ನಡೆಯಲಿದ್ದು, ಚಿತ್ರರಂಗದ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಅವರೊಂದಿಗೆ ಜಿ. ಪರಮೇಶ್ವರ್, ಉಮಾಶ್ರೀ, ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವರು ಭಾಗವಹಿಸುತ್ತಿದ್ದಾರೆ.
ಹಿರಿಯ ನಟ ಶ್ರೀನಾಥ್ “ಕುರುಕ್ಷೇತ್ರ’ ಚಿತ್ರದಲ್ಲಿ ಧೃತರಾಷ್ಟ್ರ, ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಶ್ರೀಕೃಷ್ಣ , ಹಿರಿಯ ನಟರಾದ ಅಂಬರೀಶ್ ಅವರು ಭೀಷ್ಮಾಚಾರ್ಯ, ಶ್ರೀನಿವಾಸ ಮೂರ್ತಿಗಳು ದ್ರೋಣಾಚಾರ್ಯ, ಅವಿನಾಶ್ ಅವರು ಗಾಂಧರ್ವ ರಾಜನಾಗಿ ನಟಿಸುತ್ತಿದ್ದಾರೆ.
“ಕುರುಕ್ಷೇತ್ರ’ ಚಿತ್ರದಲ್ಲಿ ದ್ರೌಪದಿ ಪಾತ್ರವನ್ನು ಯಾರು ಮಾಡುತ್ತಾರೆಂಬ ಕುತೂಹಲವಿತ್ತು. ಬಹುಭಾಷಾ ನಟಿ ಸ್ನೇಹಾ ದ್ರೌಪದಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.ನಿಖಿಲ್ ಕುಮಾರ್ ಅಭಿಮನ್ಯುವಾಗಿ ನಟಿಸಿದರೆ, ಚಿತ್ರದಲ್ಲಿ ಸಾಯಿಕುಮಾರ್ ಶಕುನಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಹರಿಪ್ರಿಯಾ ಕೂಡಾ ನಟಿಸುತ್ತಿದ್ದು, ಅವರಿಲ್ಲೊಂದು ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಚಿತ್ರಕ್ಕೆ ಹೆಸರಾಂತ ತಂತ್ರಜ್ಞರ ತಂಡವನ್ನು ಕಲೆ ಹಾಕಲಾಗಿದ್ದು, ಜಯನ್ ವಿನ್ಸೆಂಟ್ ಛಾಯಾಗ್ರಹಣ, “ಕಿಂಗ್ ಸಾಲೋಮನ್’ ರವಿ ಸಾಹಸ, ಹರಿಕೃಷ್ಣ ಸಂಗೀತ, ಜೊ.ನಿ.ಹರ್ಷ ಸಂಕಲನ ಚಿತ್ರಕ್ಕಿದೆ. ಈಗಾಗಲೇ ಒಂದಷ್ಟು ಪಾತ್ರಗಳಿಗೆ ಕಲಾವಿದರ ಆಯ್ಕೆಯಾಗಿದ್ದು, ಇನ್ನಷ್ಟು ಮಂದಿಯ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ