ಕುಸ್ತಿಗಿಂತ ಮೊದಲು ವಿಜಯ್‌ ಮಸ್ತಿ


Team Udayavani, Nov 15, 2018, 3:56 PM IST

91.jpg

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ “ದುನಿಯಾ’ ವಿಜಯ್‌ ನಟನೆಯ “ಕುಸ್ತಿ’ ಚಿತ್ರ ಶುರುವಾಗಬೇಕಿತ್ತು. ವಿಜಯ್‌ ಹಾಗೂ ಅವರ ಮಗ ಸಾಮ್ರಾಟ್‌ ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದರು. ಚಿತ್ರದ ಟೀಸರ್‌ ಕೂಡಾ ಬಿಡುಗಡೆಯಾಗಿತ್ತು. ಆದರೆ, ಪ್ರಕರಣವೊಂದರಲ್ಲಿ ಸಿಲುಕಿಕೊಂಡು ಕೇಸು, ಕೋರ್ಟ್‌, ಜೈಲು ಎಂದು ವಿಜಯ್‌ ಓಡಾಡಿಕೊಂಡ ಕಾರಣ ಸಿನಿಮಾ ಸಾಕಷ್ಟು ತಡವಾಗಿದ್ದು ಸುಳ್ಳಲ್ಲ. ಈ ನಡುವೆಯೇ ಗಾಂಧಿನಗರದಲ್ಲಿ ಸುದ್ದಿಯೊಂದು ಹರಿದಾಡಿದೆ. ಅದು “ಕುಸ್ತಿ’ ಸಿನಿಮಾ ನಿಂತು ಹೋಯಿತಂತೆ ಎನ್ನುವುದು. ಏಕೆಂದರೆ ಇಷ್ಟು ದಿನವಾದರೂ ಸಿನಿಮಾದ ಯಾವುದೇ ಕೆಲಸಗಳಿಗೆ ಚಾಲನೆ ಸಿಗದ ಹಿನ್ನೆಲೆಯಲ್ಲಿ ಈ ಸುದ್ದಿ ಹರಿದಾಡಲಾರಂಭಿಸಿದೆ. ಆದರೆ, ನಿರ್ದೇಶಕ ರಾಘು ಶಿವಮೊಗ್ಗ ಮಾತ್ರ ಈ ಸುದ್ದಿಯನ್ನು ಒಪ್ಪುವುದಿಲ್ಲ. ಸಿನಿಮಾ ನಿಂತಿಲ್ಲ, ಮುಂದೆ ಹೋಗಿದೆಯಷ್ಟೇ ಎನ್ನುತ್ತಾರೆ ರಾಘು. 
ಹೌದು, ರಾಘು ಶಿವಮೊಗ್ಗ ಹೇಳುವಂತೆ, “ಕುಸ್ತಿ’ ಚಿತ್ರ ಮುಂದಕ್ಕೆ ಹೋಗಿದೆ. ಎಷ್ಟು ಮುಂದಕ್ಕೆ ಎಂದರೆ ಒಂದು ಆರು ತಿಂಗಳು ಎಂಬ ಉತ್ತರ ಅವರಿಂದ ಬರುತ್ತದೆ. ಹಾಗಾದರೆ ವಿಜಯ್‌ ಬೇರೆ ಸಿನಿಮಾ ಮಾಡುತ್ತಾರಾ, ಇಷ್ಟು ದಿನ “ಕುಸ್ತಿ’ಗಾಗಿ ಬೆವರು ಸುರಿಸಿದ್ದ ರಾಘು ಶಿವಮೊಗ್ಗ ಏನು ಮಾಡುತ್ತಾರೆ ಎಂಬೆಲ್ಲಾ ಪ್ರಶ್ನೆಗಳು ಸಹಜವಾಗಿಯೇ ಬರುತ್ತದೆ. “ಕುಸ್ತಿ’ಗಿಂತ ಮುಂಚೆ ವಿಜಯ್‌ ಹೊಸ ಸಿನಿಮಾವೊಂದರಲ್ಲಿ ನಟಿಸಲಿದ್ದು, ಆ ಚಿತ್ರವನ್ನು ರಾಘು ಶಿವಮೊಗ್ಗ ನಿರ್ದೇಶಿಸಲಿದ್ದಾರಂತೆ.

“ವಿಜಯ್‌ “ಕುಸ್ತಿ’ ಚಿತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸಿದ್ದರು. ಜಿಮ್‌ನಲ್ಲಿ ವಕೌìಟ್‌ ಮಾಡಿ ಅದಕ್ಕೆ ಬೇಕಾದ ರೀತಿ ಸಿದ್ಧರಾಗಿದ್ದರು. ಆದರೆ, ಅವರ ಜೀವನದಲ್ಲಿ ನಡೆದ ಘಟನೆಯಿಂದ ಬಾಡಿ ಬಿಲ್ಡ್‌ ಕಡೆ ಗಮನ ಕೊಡಲು ಸಾಧ್ಯವಾಗಲಿಲ್ಲ. ಮತ್ತೆ ಆ ತರಹದ ಫಿಟ್‌ನೆಸ್‌ ಮಾಡಿಕೊಳ್ಳಲು ಸುಮಾರು ಆರು ತಿಂಗಳು ಬೇಕೇ ಬೇಕು. ಏಕೆಂದರೆ “ಕುಸ್ತಿ’ಯಲ್ಲಿ ಅವರ ದೇಹದಾಡ್ಯìತೆ ಕೂಡಾ ಮುಖ್ಯವಾಗುತ್ತದೆ. ಆ ಕಾರಣದಿಂದ ಸಿನಿಮಾ ಮುಂದೆ ಹೋಗಿದೆಯೇ ಹೊರತು ಬೇರೆ ಯಾವ ಕಾರಣದಿಂದ ಅಲ್ಲ, ಮುಂದೆ “ಕುಸ್ತಿ’ ಆಗೋದು ಪಕ್ಕಾ. ಅದಕ್ಕಿಂತ ಮುಂಚೆ ವಿಜಯ್‌ ಅವರೊಂದು ಸಿನಿಮಾ ಮಾಡಲಿದ್ದು, ಅದನ್ನು ನಾನು ನಿರ್ದೇಶನ ಮಾಡಲಿದ್ದೇನೆ. ಈಗಾಗಲೇ ಆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಸದ್ಯಕ್ಕೆ ಕಥೆಯಾಗಲೀ, ಇತರ ಅಂಶಗಳಾಗಲೀ ಯಾವುದೂ ಅಂತಿಮವಾಗಿಲ್ಲ’ ಎನ್ನುತ್ತಾರೆ ರಾಘು ಶಿವಮೊಗ್ಗ. ಹೊಸ ಚಿತ್ರವನ್ನು ವಿಜಯ್‌ ತಮ್ಮ ಬ್ಯಾನರ್‌ನಲ್ಲೇ ನಿರ್ಮಿಸಲಿದ್ದಾರಂತೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.