ಇಂದಿನಿಂದ ‘ಲಕ್ಷ್ಯ’ ಶುರು
Team Udayavani, Nov 12, 2021, 2:38 PM IST
“ಲಕ್ಷ್ಯ’- ಹೀಗೊಂದು ಚಿತ್ರ ಸದ್ದಿಲ್ಲದೇ ತಯಾರಾಗಿದ್ದು, ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಬಹುತೇಕ ಉತ್ತರ ಕರ್ನಾಟಕದವರೇ ಸೇರಿ ನಿರ್ಮಿಸಿರುವ ಚಿತ್ರವಿದು. ರವಿ ಸಾಸನೂರ್ ಅವರು ಕಥೆ ಬರೆದು ನಿರ್ದೇಶನ ಮಾಡಿರುವ “ಲಕ್ಷ್ಯ’ ಚಿತ್ರ ನಿರ್ದೇಶನ ಮಾಡಿದ್ದಾರೆ.
ನೈಜ ಘಟನೆಗಳನ್ನು ಆಧರಿಸಿ ಒಂದು ಸೋಷಿಯಲ್ ಕಂಟೆಂಟ್ ಇಟ್ಟುಕೊಂಡು ನಿರ್ಮಾಣವಾದ ಚಿತ್ರವಿದು.ಚಿತ್ರದ ಬಗ್ಗೆ ಮಾತನಾಡುವ ರವಿ ಸಾಸನೂರು, “18 ವರ್ಷದ ನಂತರ ಪ್ರತಿಯೊಬ್ಬರ ಜೀವನದಲ್ಲೂ ನಡೆಯುವಂಥ ಘಟನೆಗಳೇ ಈ ಚಿತ್ರದಲ್ಲಿದ್ದು ಎಲ್ಲರಿಗೂ ಚಿತ್ರ ಕನೆಕ್ಟ್ ಆಗುತ್ತದೆ. ಚಿತ್ರದಲ್ಲಿ ಗೋಕಾಕ್ ಫಾಲ್ಸ್ ಅನ್ನು ವಿಭಿನ್ನವಾಗಿ ತೋರಿಸಿದ್ದೇವೆ. ಬೆಳಗಾವಿ, ಸಾಂಗ್ಲಿ, ಗೋಕಾಕ್ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಭ್ರಷ್ಟಾಚಾರದ ವಿಚಾರವನ್ನು ಇಟ್ಟುಕೊಂಡು ಮಾಡಿದಂತಹ ಕಮರ್ಷಿಯಲ್ ಚಿತ್ರವಿದು’ ಎಂದು ಹೇಳಿದರು.
ಇದನ್ನೂ ಓದಿ:ತಮಗಿಂತ ಚಿಕ್ಕ ಹುಡುಗನ ಜೊತೆ ಡೇಟಿಂಗ್ ಮಾಡುವ ಬಗ್ಗೆ ಹೇಳಿಕೊಂಡ ರಶ್ಮಿಕಾ
“ಮೂಡಲ ಮನೆ’ ಖ್ಯಾತಿಯ ಸಂತೋಷ್ ರಾಜ್ ಜಾವರೆ ಈ ಚಿತ್ರದ ನಾಯಕ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. “ದುಡ್ಡಿನ ಹಿಂದೆ ಬಿದ್ದಿರುವ ವ್ಯಕ್ತಿಯಿಂದ ಇತರರಿಗೆ ಯಾವರೀತಿ ಪರಿಣಾಮ ಬೀರುತ್ತೆ. ಅದು ಆತನಿಗೆ ಹೇಗೆ ತೊಂದರೆ ಆಗುತ್ತೆ ಎಂಬುದನ್ನು ತುಂಬಾ ಪರಿಣಾಮಕಾರಿಯಾಗಿ ಈ ಚಿತ್ರದಲ್ಲಿ ಹೇಳಲಾಗಿದೆ’ ಎಂದು ಸಂತೋಷರಾಜ್ ಜಾವರೆ ಹೇಳಿಕೊಂಡರು. ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿರುವ ನಿತಿನಾದ್ವಿ ಮತ್ತೂಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…