ಚಂದನವನ ಫಿಲ್ಮ್ ಕ್ರಿಟಿಕ್ಸ್‌ ಅಕಾಡೆಮಿಗೆ ಚಾಲನೆ


Team Udayavani, Sep 11, 2019, 3:01 AM IST

Chandanavana

ಕನ್ನಡ ಚಿತ್ರರಂಗದಲ್ಲಿ ಸದಭಿರುಚಿ ಚಿತ್ರಗಳನ್ನು ಗುರುತಿಸಿ, ವಿಮರ್ಶಿಸಿ ಅವುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಚಂದನವನ ಫಿಲ್ಮ್ ಕ್ರಿಟಿಕ್ಸ್‌ ಅಕಾಡೆಮಿ ಸಂಸ್ಥೆಗೆ ಚಾಲನೆ ನೀಡಲಾಗಿದೆ. ಕನ್ನಡ ಚಲನಚಿತ್ರರಂಗ ಪತ್ರಕರ್ತರ ಸಂಯುಕ್ತ ಆಶ್ರಯದಲ್ಲಿ ಸ್ಥಾಪನೆಯಾಗಿರುವ ಚಂದನವನ ಫಿಲ್ಮ್ ಕ್ರಿಟಿಕ್ಸ್‌ ಅಕಾಡೆಮಿಯ ಲಾಂಛನವನ್ನು ನಟ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಡಾ. ವಿ ನಾಗೇಂದ್ರ ಪ್ರಸಾದ್‌ ಬಿಡುಗಡೆಗೊಳಿಸಿ ಅಕಾಡೆಮಿಗೆ ಶುಭ ಕೋರಿದರು.

ಇದೇ ವೇಳೆ ಮಾತನಾಡಿದ ನಟ ಶಿವರಾಜಕುಮಾರ್‌, ಮೂವತ್ಮೂರು ವರ್ಷಗಳಿಂದ ಚಿತ್ರರಂಗವನ್ನು ನೋಡುತ್ತಿದ್ದೇನೆ ಚಿತ್ರರಂಗ ಹಾಗೂ ಚಿತ್ರೋದ್ಯಮದ ನಡುವೆ ಉತ್ತಮ ನಂಟಿದೆ. ಕನ್ನಡದಲ್ಲಿ ಸುದೀಪ್‌, ಅಪ್ಪು, ದರ್ಶನ್‌, ಯಶ್‌, ಶಿವರಾಜಕುಮಾರ್‌ ಮಾತ್ರ ಹೀರೋಗಳಲ್ಲ ಸಾಕಷ್ಟು ಜನ ಹೊಸ ಹೀರೋಗಳಿದ್ದಾರೆ. ಎಲ್ಲರಂತೆ ಅವರಿಗೂ ಪ್ರೋತ್ಸಾಹ ಸಿಗಲಿ. ಚಿತ್ರರಂಗದಲ್ಲಿ ಭೇದ-ಭಾವವಿಲ್ಲದೆ ಎಲ್ಲರೊಡನೆ ಮುನ್ನಡೆಯಬೇಕು. ಇಲ್ಲಿ ಕೊಟ್ಟು, ತೆಗೆದುಕೊಳ್ಳುವ ಮನಸ್ಸಿದ್ದರೆ ಮಾತ್ರ ಬೆಳೆಯಲು ಸಾಧ್ಯ. ಒಂದು ವೇಳೆ ನಾನೊಬ್ಬನೇ ಎಂದು ಯಾರಾದರೂ ಅಂದುಕೊಂಡಲ್ಲಿ ಅಂತಹವರು ನೆಲ ಕಚ್ಚುತ್ತಾರೆ ಎಂದರು.

“ಇನ್ನು ಮುಂದೆ ಚಂದನವನ ಫಿಲ್ಮ್ ಕ್ರಿಟಿಕ್ಸ್‌ ಅಕಾಡೆಮಿ ಪ್ರಶಸ್ತಿಯೂ ಶುರುವಾಗುತ್ತಿರುವುದು ಒಳ್ಳೆಯ ವಿಷಯ. ಪ್ರಶಸ್ತಿಗಳಲ್ಲಿ ದೊಡ್ಡದು, ಚಿಕ್ಕದು ಎಂಬ ತಾರತಮ್ಯ ಸಲ್ಲದು. ಎಲ್ಲದಕ್ಕೂ ಅದರದ್ದೇ ಆದ ಮಹತ್ವವಿದೆ. ಪ್ರತಿಯೊಂದು ಕೂಡ ಪ್ರೋತ್ಸಾಹ ನೀಡುವಂತಹುದು. ವೇದಿಕೆಯಲ್ಲಿ ನನ್ನನ್ನು ಚಿತ್ರರಂಗದ ಒಂದು ಪಿಲ್ಲರ್‌ ಅಂತ ಕರೆದರು. ಆದರೆ, ರವಿಚಂದ್ರನ್‌, ಶ್ರೀನಾಥ್‌, ಅನಂತನಾಗ್‌ ಅವರಂತಹ ನನಗಿಂತಲೂ ಹಿರಿಯ ನಟರಿದ್ದು, ಈಗಲೂ ಸಕ್ರಿಯರಾಗಿದ್ದಾರೆ. ಅವರೆಲ್ಲರೂ ಚಿತ್ರರಂಗದ ಆಧಾರ ಸ್ತಂಭಗಳಾಗಿದ್ದು, ನಾನು ಕೇವಲ ಇಲ್ಲಿ ಇಟ್ಟಿಗೆಯಂತಿರಲು ಇಷ್ಟಪಡುತ್ತೇನೆ’ ಎಂದು ಹೇಳಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಹಾಜರಿದ್ದ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ನಿರ್ದೇಶಕರ ಸಂಘದ ಅಧ್ಯಕ್ಷ ಡಾ. ವಿ ನಾಗೇಂದ್ರ ಪ್ರಸಾದ್‌, ಕನ್ನಡ ಚಿತ್ರರಂಗದಲ್ಲಿ ಸದಭಿರುಚಿ ಚಿತ್ರಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಶುರುವಾಗಿರುವ ಚಂದನವನ ಫಿಲ್ಮ್ ಕ್ರಿಟಿಕ್ಸ್‌ ಅಕಾಡೆಮಿಯ ಅಭ್ಯುದಯಕ್ಕೆ ತಮ್ಮಿಂದಾಗುವ ಎಲ್ಲ ಸಹಾಯ, ಸಹಕಾರ ನೀಡಲು ಸಿದ್ಧ ಎಂದು ಒಕ್ಕೊರಲಿನಿಂದ ಘೋಷಿಸಿದರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.