ಇನ್ನೋವೇಟಿವ್‌ ಚಿತ್ರೋತ್ಸವಕ್ಕೆ ಚಾಲನೆ


Team Udayavani, Apr 15, 2018, 11:19 AM IST

innovative.jpg

ಇನ್ನೋವೇಟಿವ್‌ ಫಿಲ್ಮ್ಸಿಟಿಯಲ್ಲಿ ಮೂರು ದಿನಗಳ ಕಾಲ ಇಂಟರ್‌ನ್ಯಾಷನಲ್‌ ಫಿಲ್ಮ್ಫೆಸ್ಟ್‌ ನಡೆಯುತ್ತಿದೆ. ಶನಿವಾರ ಸುದೀಪ್‌ “ಫಿಲ್ಮ್ಫೆಸ್ಟ್‌ -2018’ಗೆ ಚಾಲನೆ ನೀಡಿದರು. ಈ ವೇಳೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್‌ಬಾಬು, ನಿರ್ದೇಶಕ ಪವನ್‌ ಒಡೆಯರ್‌, ರಾಕ್‌ಲೈನ್‌ ವೆಂಕಟೇಶ್‌ ಇತರೆ ಗಣ್ಯರು ಹಾಜರಿದ್ದರು.

ಫಿಲ್ಮ್ಫೆಸ್ಟ್‌ಗೆ ಚಾಲನೆ ಕೊಟ್ಟ ಸುದೀಪ್‌, “ವಿದ್ಯಾರ್ಥಿಗಳಿಗೆ ಹಾಗು ಚಿತ್ರರಂಗದ ಬೆಳವಣಿಗೆಗೆ ಸಹಾಯಕವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಬೇಕು. ನನಗೆ “ಬಿಗ್‌ಬಾಸ್‌’ ಸೆಟ್ ನೋಡಿ ನೋಡಿ ಸಾಕಾಗಿತ್ತು. ಈಗ ನೊಡಿದರೆ, ಅದಕ್ಕಿಂತಲೂ ವಿಭಿನ್ನವಾದಂತಹ ಚಟುವಟಿಕೆಗಳು ಇಲ್ಲಿ ನಡೆಯುತ್ತಿವೆ ಎಂಬುದನ್ನು ಕೇಳಿ ಸಂತಸವಾಗಿದೆ. ಬಿಗ್‌ಬಾಸ್‌ ನಡೆಯುವವರೆಗೂ ಇಂತಹ ಅನೇಕ ಒಳ್ಳೆಯ ಚಟುವಟಕೆಗಳು ನಡೆಯಬೇಕು.

ಯಾರೋ ಒಬ್ಬರು ಬೆಳೆಯಲು ಸಾಧ್ಯವಿಲ್ಲ. ಎಲ್ಲರೂ ಒಟ್ಟಿಗೆ ಬೆಳೆಯಬೇಕು. ಅದಕ್ಕೆ ಪೂರಕವಾಗಿ ಹೊಸ ಪ್ರತಿಭೆಗಳಿಗೆ ಇಲ್ಲೊಂದು ವೇದಿಕೆ ಕಲ್ಪಿಸಿರುವುದು ವಿಶೇಷ ಎಂದರು. ರಾಕ್‌ಲೈನ್‌ ವೆಂಕಟೇಶ್‌, “ಈ ಫಿಲ್ಮ್ಸಿಟಿಗೆ ಒಂದು ದಶಕ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಒಂದೊಳ್ಳೆಯ ಕಾರ್ಯಕ್ರಮ ಮಾಡಬೇಕು. ಅದರಲ್ಲೂ ಚಿತ್ರರಂಗದಲ್ಲಿ ನೆನಪಲ್ಲುಳಿಯುವಂತಹ ಫಿಲ್ಮ್ಫೆಸ್ಟ್‌ ಮಾಡಬೇಕು ಎಂಬ ಆಸೆ ಇತ್ತು. ನನ್ನ ಆಸೆಗೆ ಬಹಳಷ್ಟು ಜನ ಕೈ ಜೋಡಿಸಿದ್ದಾರೆ.

ಅದರಲ್ಲಿ ಸುದೀಪ್‌ ಅವರದು ದೊಡ್ಡ ಕೈ. ಸುದೀಪ್‌ ಕೇವಲ ನಟರಷ್ಟೇ ಅಲ್ಲ, ಅವರೊಳಗೊಬ್ಬ ಆಟಗಾರನೂ ಇದ್ದಾನೆ. ಇಡೀ ಚಿತ್ರರಂಗವನ್ನು ಒಂದುಗೂಡಿಸಿಕೊಂಡು ಸಾಗುವ ನಾಯಕನಿದ್ದಾನೆ ಎಂದರು. ಇದೇ ವೇಳೆ “ನಟ ಸಾರ್ವಭೌಮ’ ಚಿತ್ರದ ಮೇಕಿಂಗ್‌ ಟೀಸರ್‌ ಬಿಡುಗಡೆ ಮಾಡಲಾಯಿತು. ನಿರ್ದೇಶಕ ಪವನ್‌, ಚಿತ್ರದ “ಮೇಕಿಂಗ್‌ ವಿಡಿಯೋ’ ಹಂಚಿಕೊಂಡಿದ್ದು ಖುಷಿ ಕೊಟ್ಟಿದೆ. ಕನ್ನಡದಲ್ಲಿ ನೂರಾರು ಒಳ್ಳೆಯ ಚಿತ್ರಗಳು ಬಂದಿವೆ.

ಆ ಸಾಲಿಗೆ “ನಟ ಸಾರ್ವಭೌಮ’ ಕೂಡ ಸೇರಲಿದೆ’ ಎಂಬುದು ಪವನ್‌ಮಾತು. ಇದೇ ಸಂದರ್ಭದಲ್ಲಿ “ಕುರುಕ್ಷೇತ್ರ’ ಚಿತ್ರದ ಮೇಕಿಂಗ್‌ ಟೀಸರ್‌ ಕೂಡ ಬಿಡುಗಡೆ ಮಾಡಲಾಯಿತು. ಮುನಿರತ್ನ ಅವರ ದೊಡ್ಡ ಕನಸಿನ ಚಿತ್ರವಿದು. ಕನ್ನಡ ಮಾರುಕಟ್ಟೆ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುವ ಮುನಿರತ್ನ, ಇಂಥದ್ದೊಂದು ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ಅಲ್ಲಿದ್ದವರೆಲ್ಲರೂ ಗುಣಗಾನ ಮಾಡಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.