ಬದುಕು ಬದಲಿಸಬಲ್ಲ ಸಿನಿಮಾ ಹಾಡುಗಳು


Team Udayavani, Mar 5, 2018, 9:00 PM IST

Life-Changing-Songs—Kasturi-Nivasa.jpg

ಆಸೆಯೆಂಬ ಬಿಸಿಲುಕುದುರೆ ಏಕೆ ಏರುವೆ?
ಮರಳುಗಾಡಿನಲ್ಲಿ ಸುಮ್ಮನೇಕೆ ಅಲೆಯುವೆ
ಅವನ ನಿಯಮ ಮೀರಿ ಇಲ್ಲಿ ಏನು ಸಾಗದು
ನಾವು ನೆನೆಸಿದಂತೆ ಬಾಳಲೇನು ನಡೆಯದು
ವಿಷಾದವಾಗಲಿ … ವಿನೋದವಾಗಲಿ …
ಅದೇನೆ ಆಗಲೀ, ಅವನೆ ಕಾರಣ
ಬಾನಿಗೊಂದು ಎಲ್ಲೆ ಎಲ್ಲಿದೆ? 

ಚಿತ್ರರಂಗದಲ್ಲಿ ಹಾಡುಗಳಿಗೆ ಹೆಚ್ಚು ಪ್ರಾಮುಖ್ಯತೆ. ಕೆಲವು ಹಾಡುಗಳು ಸಂಗೀತದಿಂದ, ಇನ್ನು ಕೆಲವು ಅವುಗಳ ಸಾಹಿತ್ಯದಿಂದ ಗಮನಸೆಳೆಯುತ್ತವೆ. ಹಾಡುಗಳೇ ಚಿತ್ರವನ್ನು ಗೆಲ್ಲಿಸಿಬಿಡುತ್ತವೆ. ಅದಕ್ಕೆ ಉದಾಹರಣೆಗಳೂ ಇವೆ. 

ಕನ್ನಡ ಚಿತ್ರರಂಗದ ಮಟ್ಟಿಗೆ ಅನೇಕ ಚಿತ್ರಸಾಹಿತಿಗಳ ಹಾಡು ಇಂದಿಗೂ ಸ್ಮರಣೀಯ. ಸಾಹಿತ್ಯದ ದೃಷ್ಟಿಯಿಂದ ನೋಡಿದಾಗ ಕನ್ನಡ ಗೀತ ಸಾಹಿತ್ಯ ಉನ್ನತವಾಗಿಯೇ ಇದೆ. ಕು.ರ.ಸೀ., ವಿಜಯನಾರಸಿಂಹ, ಸೋರಟ್‌ ಅಶ್ವಥ್‌, ಚಿ. ಉದಯಶಂಕರ್‌, ಆರ್‌.ಎನ್‌. ಜಯಗೋಪಾಲ್‌, ಹಂಸಲೇಖ ಅವರಂತಹ ಹಿರಿಯರ ಹಾಡಿನ ಸಾಲುಗಳನ್ನು ನೆನೆಯದವರಿಲ್ಲ.

ಇಂಪಾದ, ಮನಸ್ಸಿಗೆ ಮುದ ನೀಡುವ ಹಾಡುಗಳು ಎಂದಿಗೂ ಜನ ಮಾನಸದಲ್ಲಿ ತಮ್ಮದೇ ನೆಲೆ ಕಂಡುಕೊಂಡಿವೆ. ಕೆಲವು ಚಿತ್ರಗಳು, ಹಾಡುಗಳು ಅನೇಕರ ಬದುಕನ್ನೇ ಬದಲಿಸಿವೆ. ಹಾಡಿಗೆ ಸಂಗೀತ ಹೇಗೋ, ಸಾಹಿತ್ಯವೂ ಹಾಗೇ ಮುಖ್ಯ. ಸರಳ, ಎಲ್ಲರಿಗೂ ಅರ್ಥವಾಗುವ ಪದಗಳ ಮೂಲಕ ರೂಪ ತಳೆದ ಹಾಡುಗಳು ಕೇವಲ ಕೇಳಲಷ್ಟೇ ಅಲ್ಲ, ಆ ಅರ್ಥಪೂರ್ಣ ನುಡಿಗಳು ಜೀವನ ಸಾರವನ್ನು ತಿಳಿಸುತ್ತವೆ.

ಅಂತಹ ಹಾಡುಗಳ ವಿಶೇಷ ಪುಟಗಳು ಈ ಬಾರಿಯ “ರೂಪತಾರಾ’ದ ಸ್ಪೆಷಾಲಿಟಿ. ಈ ಹಾಡುಗಳು ಸಾಹಿತ್ಯ ಹಾಗೂ ಸಂಗೀತದ ದೃಷ್ಟಿಯಿಂದ ಮಹತ್ವ ಪಡೆದಂಥವು. ಬೇಸರವಾದಾಗ ಈ ಹಾಡುಗಳನ್ನು ಕೇಳುತ್ತಿದ್ದರೆ, ಅವು ಮನಸ್ಸಿಗೆ ಹಿತ ನೀಡುತ್ತವೆ, ನೀತಿ ಹೇಳುತ್ತವೆ. ಮಾರ್ಗದರ್ಶಕ ಪದಗಳ ಗಾರುಡಿ ಈ ಹಾಡುಗಳಲ್ಲಿವೆ. ಬದುಕು ಬದಲಿಸಬಲ್ಲ ಅಂತಹ ಹಲವು ಅಪರೂಪದ ಹಾಡುಗಳ್ಯಾವುವು ಎಂಬ ಕುತೂಹಲವಿದ್ದರೆ, ಮಾರ್ಚ್‌ ತಿಂಗಳ “ರೂಪತಾರಾ’ ಓದಿ ಆನಂದಿಸಿ …

ಹುಟ್ಟು-ಸಾವು ಬಾಳಿನಲ್ಲಿ ಎರಡು ಕೊನೆಗಳು
ಬಯಸಿದಾಗ ಕಾಣದಿರುವ ಎರಡು ಮುಖಗಳು
ಹರುಷವೊಂದೆ ಯಾರಿಗುಂಟು ಹೇಳು ಜಗದಲೀ?
ಹೂವು-ಮುಳ್ಳು ಎರಡು ಉಂಟು ಬಾಳಲತೆಯಲಿ!
ದುರಾಸೆಯೇತಕೆ? ನಿರಾಸೆಯೇತಕೆ?
ಅದೇನೆ ಬಂದರೂ, ಅವನ ಕಾಣಿಕೆ!

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.