ಮಕ್ಕಳ ಮನಸ್ಸಿನ ಸುತ್ತ “ಲಿಲ್ಲಿ’

ಮೊಬೈಲ್‌, ಮಗು ಮತ್ತು ತಾಯಿ

Team Udayavani, Jan 1, 2020, 7:02 AM IST

Lilly

ಕನ್ನಡದಲ್ಲಿ ಹೊಸ ಆಲೋಚನೆಯೊಂದಿಗೆ ಹೊಸಬರ ಆಗಮನವಾಗುತ್ತಲೇ ಇದೆ. ಆ ಸಾಲಿಗೆ ಈಗ “ಲಿಲ್ಲಿ’ ಎಂಬ ಚಿತ್ರತಂಡವೂ ಸೇರಿದೆ. ಇದೊಂದು ಸೈಕಲಾಜಿಕಲ್‌ ಮಿಸ್ಟ್ರಿ ಥ್ರಿಲ್ಲರ್‌ ಜಾನರ್‌ನ ಸಿನಿಮಾ. ಈ ಚಿತ್ರದ ಮೂಲಕ ವಿಜಯ್‌ ಎಸ್‌.ಗೌಡ ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ “ನೀರ್‌ದೋಸೆ’, “ಗೋವಿಂದಾಯ ನಮಃ’ (ತೆಲುಗು ವರ್ಷನ್‌), “ರಂಗಿತರಂಗ’ ಚಿತ್ರಗಳಲ್ಲಿ ಕೆಲಸ ಮಾಡಿದ್ದ ವಿಜಯ್‌ ಎಸ್‌.ಗೌಡ, ಅನಿಮೇಷನ್‌ ಹಿನ್ನೆಲೆಯಿಂದ ಬಂದವರು.

8 ವರ್ಷಗಳ ಕಾಲ ಕಾರ್ಪೋರೇಟ್‌ ಕಂಪೆನಿಯಲ್ಲಿ ಕೆಲಸ ಮಾಡಿದ್ದ ಅವರು, ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಸಿನಿಮಾಗಳಿಗೆ ಸಂಬಂಧಿಸಿದ ಕೆಲಸ ಮಾಡಿಕೊಂಡಿದ್ದವರು. ಆ ಅನುಭವದ ಮೇಲೆ “ಲಿಲ್ಲಿ’ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಹೇಳುವ ಅವರು, “ಮಕ್ಕಳನ್ನು ಪೋಷಕರು ಹೇಗೆ ಕಡೆಗಣಿಸುತ್ತಾರೆ, ಮೊಬೈಲ್‌ ಎಂಬುದು ಹೇಗೆಲ್ಲಾ ಮಾನವೀಯ ಸಂಬಂಧಗಳನ್ನು ದೂರ ಮಾಡಿದೆ.

ಮೊಬೈಲ್‌ ವ್ಯಾಮೋಹದಿಂದ ಮಾನವೀಯ ಮೌಲ್ಯಗಳು ಹೇಗೆ ಕುಸಿಯುತ್ತಿವೆ. ಮೊಬೈಲ್‌ನಿಂದ ಉಂಟಾಗುವ ಭಯಾನಕ ಕಾಯಿಲೆಯೊಂದು, ಆರೇಳು ವರ್ಷದ ಮಕ್ಕಳು ತಮ್ಮ ಹೆತ್ತವರನ್ನೇ ಕೊಲೆ ಮಾಡಬೇಕು ಎಂದು ನಿರ್ಧಾರಕ್ಕೆ ಬರುವಷ್ಟರ ಮಟ್ಟಿಗೆ ಮೊಬೈಲ್‌ ಕಾರಣವಾಗುತ್ತೆ ಎಂಬ ಸೂಕ್ಷ್ಮ ಅಂಶ ಚಿತ್ರದ ಹೈಲೈಟ್‌. ಚಿತ್ರವನ್ನು ನಾಗರಾಜ್‌ ಮತ್ತು ಎಸ್‌.ಸುಬ್ರಮಣಿ ನಿರ್ಮಾಣ ಮಾಡುತ್ತಿದ್ದಾರೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕರು.

ಇದು ಯುನಿರ್ವಸಲ್‌ ಕಥೆ ಆಗಿದ್ದರಿಂದ ಸಿಮ್ರಾನ್‌ ಆವರನ್ನು ಕನ್ನಡಕ್ಕೆ ಕರೆತರಬೇಕು ಎಂಬ ಉದ್ದೇಶದಿಂದ ಕಥೆ ಹೇಳಲಾಗಿತ್ತು. ಅದು ಅವರಿಗೆ ಇಷ್ಟವಾಗಿ, ತಮಿಳಿನಲ್ಲೇ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದರು. ಆದರೆ, ಇದು ಕನ್ನಡದಲ್ಲೇ ಶುರುವಾಗಬೇಕು ಎಂಬ ಆಸೆ ಚಿತ್ರತಂಡದ್ದಾಗಿದ್ದರಿಂದ ಅದು ಕೈಗೂಡಲಿಲ್ಲ. ಈಗ ಕನ್ನಡದ ರಾಧಿಕಾ ಕುಮಾರಸ್ವಾಮಿ, ಜಾಕಿ ಭಾವನಾ ಅಥವಾ ರಚಿತಾರಾಮ್‌ ಅವರಿಗೆ ಕಥೆ ಹೇಳುವ ತಯಾರಿ ನಡೆಯುತ್ತಿದೆ. ಇಲ್ಲಿ ತಾಯಿ ಪಾತ್ರ ಪ್ರಮುಖವಾಗಿದೆ. ಸಾಕಷ್ಟು ಎಮೋಶನ್ಸ್‌ ಕೂಡ ಇದೆ.

ಉಳಿದಂತೆ ಚಿತ್ರದಲ್ಲಿ ತಬಲನಾಣಿ ಇತರರು ಇರಲಿದ್ದಾರೆ. ಈಗಾಗಲೇ “ಲಿಲ್ಲಿ’ ಶೀರ್ಷಿಕೆ ನೋಂದಣಿಯಾಗಿದ್ದು, ಹೊಸ ವರ್ಷಕ್ಕೆ ಚಿತ್ರದ ಪೋಸ್ಟರ್‌ ರಿಲೀಸ್‌ ಮಾಡಲಾಗುವುದು. ಜನವರಿಯಲ್ಲಿ ಮುಹೂರ್ತ ನಡೆಸಿ, ಚಿತ್ರೀಕರಣಕ್ಕೆ ಹೋಗುವ ಯೋಚನೆ ಇದೆ. ಚಿತ್ರಕ್ಕೆ ವಿಲಿಯಂ ಡೇವಿಡ್‌ ಛಾಯಾಗ್ರಹಣವಿದೆ. ವೀರೇಶ್‌ ಎಸ್‌.ಗೌಡ ಸಂಗೀತವಿದೆ. ಶ್ರೀಕಾಂತ್‌ ಸಂಕಲನ ಮಾಡಲಿದ್ದಾರೆ. ಬೆಂಗಳೂರಲ್ಲೇ ಚಿತ್ರೀಕರಣ ನಡೆಯಲಿದ್ದು, ಎರಡು ದೊಡ್ಡ ಸೆಟ್‌ ಹಾಕಿ 60 ದಿನಗಳ ಚಿತ್ರೀಕರಣ ನಡೆಸುವುದಾಗಿ ಹೇಳುತ್ತಾರೆ ವಿಜಯ್‌ ಎಸ್‌.ಗೌಡ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.