ಕಾಲಾ ನೋಡಿ ಬರುವೆವು …


Team Udayavani, Jun 5, 2018, 10:59 AM IST

kaalaa.jpg

ಇತ್ತೀಚೆಗೆ ಸತತವಾಗಿ ವಾರಕ್ಕೆ ನಾಲ್ಕೈದು ಸಿನಿಮಾಗಳಂತೆ ಕನ್ನಡ ಚಿತ್ರಗಳು ಬಿಡುಗಡೆಯಾಗಿ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದ ವಿಚಾರ ನಿಮಗೆ ಗೊತ್ತೇ ಇದೆ. ಆದರೆ, ಈ ವಾರ ಅಂದರೆ ಜೂನ್‌ 8 ರಂದು ಎಷ್ಟು ಸಿನಿಮಾಗಳು ತೆರೆಕಾಣುತ್ತವೆ ಎಂದರೆ ಸದ್ಯದ ಉತ್ತರ ಎರಡು. ಹೌದು, ಸದ್ಯಕ್ಕೆ ಎರಡೇ ಎರಡು ಸಿನಿಮಾಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ.

ಹೊಸಬರ “ಶಿವು ಪಾರು’ ಹಾಗೂ “ಶತಾಯ ಗತಾಯ’ ಚಿತ್ರಗಳು ಜೂನ್‌ 8 ರಂದು ಬಿಡುಗಡೆಯಾಗಲಿದೆ. ಎಲ್ಲಾ ಓಕೆ, ಏಕಾಏಕಿ ಬಿಡುಗಡೆಯ ಸಂಖ್ಯೆಯಲ್ಲಿ ಇಳಿಮುಖವಾಗಲು ಕಾರಣವೇನು ಎಂದರೆ “ಕಾಲಾ’ ಎಂಬ ಉತ್ತರ ಬರುತ್ತದೆ. ರಜನೀಕಾಂತ್‌ ಅವರ “ಕಾಲಾ’ ಚಿತ್ರ ಜೂನ್‌ 8 ರಂದು ಬಿಡುಗಡೆಯಾಗುತ್ತಿದೆ. ಸಹಜವಾಗಿಯೇ ಪರಭಾಷೆಯ ಸ್ಟಾರ್‌ ನಟರ ಸಿನಿಮಾಗಳು ಬಿಡುಗಡೆಯಾಗುವ ವೇಳೆ ಒಂದಷ್ಟು ಚಿತ್ರಗಳು ತಮ್ಮ ಬಿಡುಗಡೆಯನ್ನು ಮುಂದಕ್ಕೆ ಹಾಕುವುದು ಸಹಜ.

ದೊಡ್ಡ ಸಿನಿಮಾಗಳ ಹವಾಕ್ಕೆ ಕೊಚ್ಚಿ ಹೋಗುವುದು ಬೇಡ ಎಂಬ ಕಾರಣಕ್ಕೆ ಬಿಡುಗಡೆ ಮಾಡದಿರುವ ನಿರ್ಧರಿಸುತ್ತವೆ. ಈ ವಾರವೂ ಅನೇಕ ಕನ್ನಡ ಚಿತ್ರಗಳು ತಮ್ಮ ಬಿಡುಗಡೆಯನ್ನು ಮುಂದಕ್ಕೆ ಹಾಕಲು “ಕಾಲಾ’ ಸಿನಿಮಾ ಕಾರಣ ಎನ್ನಲಾಗಿದೆ. ಈ ನಡುವೆಯೇ “ಕಾಲಾ’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಕನ್ನಡಪರ ಸಂಘಟನೆಗಳು ಹೇಳಿವೆ. ಬಿಡುಗಡೆಯನ್ನು ಪ್ರತಿಭಟಿಸುವುದಾಗಿಯೂ ಘೋಷಿಸಿಕೊಂಡಿವೆ.

ಒಂದು ವೇಳೆ ಪ್ರತಿಭಟನೆಯ ನಡುವೆಯೇ “ಕಾಲಾ’ ಬಿಡುಗಡೆಯಾದರೆ, ಸುಮ್ಮನೆ ತೊಂದರೆಗೆ ಯಾಕೆ ಎಂಬ ಕಾರಣಕ್ಕೆ ಅನೇಕ ಕನ್ನಡ ಸಿನಿಮಾಗಳು ಸೇಫ್ಗೇಮ್‌ ಆಡಿವೆ. ಅದೇ ಕಾರಣದಿಂದ “ಕಾಲಾ’ ಬಿಡುಗಡೆಯ, ಪ್ರತಿಕ್ರಿಯೆ ನೋಡಿಕೊಂಡು ತೆರೆಗೆ ಬರಲು ನಿರ್ಧರಿಸಿವೆ. ಒಂದು ವೇಳೆ ಈ ವಾರ “ಕಾಲಾ’ ಸಿನಿಮಾದ ಬಿಡುಗಡೆ ಇರದೇ ಇದ್ದಿದ್ದರೆ, ಈ ವಾರವೂ ನಾಲ್ಕೈದು ಕನ್ನಡ ಸಿನಿಮಾಗಳು ಬಿಡುಗಡೆಯಾಗುತ್ತಿದ್ದವು. 

ಮುಖ್ಯಚಿತ್ರಮಂದಿರಗಳಲ್ಲಿ ವಾರಕ್ಕೊಂದು ಸಿನಿಮಾ: ಸಿನಿಮಾ ಮಂದಿಗೆ ಒಂದು ನಂಬಿಕೆ ಇದೆ. ಅದೇನೆಂದರೆ ಕೆ.ಜಿ.ರಸ್ತೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದರೇನೇ ಅದು ಶಾಸ್ತ್ರೋಕ್ತ ಬಿಡುಗಡೆ ಎಂಬುದು. ಆದರೆ, ಸದ್ಯ ಸ್ಪರ್ಧೆಯಲ್ಲಿ ಕೆ.ಜಿ.ರಸ್ತೆಯಲ್ಲಿ ಚಿತ್ರಮಂದಿರ ಸಿಗಬೇಕಾದರೆ ವಾರಗಟ್ಟಲೇ ಕಾಯಬೇಕಾಗುತ್ತದೆ. ಹಾಗಂತ ಸಿಕ್ಕಿದ ಕೂಡಲೇ ಸಿನಿಮಾ ಯಶಸ್ಸು ಕಾಣುತ್ತದೆ ಎಂದಲ್ಲ.

ಅದಕ್ಕೆ ಉದಾಹರಣೆಯಾಗಿ ಮೂರ್‍ನಾಲ್ಕು ವಾರದಿಂದ ಪ್ರಮುಖ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಚಿತ್ರಗಳು ಒಂದೇ ವಾರಕ್ಕೆ ಹೊರಬೀಳುತ್ತಿವೆ. ನೀವೇ ಸೂಕ್ಷ್ಮವಾಗಿ ಗಮನಿಸಿ, ಕೆ.ಜಿ.ರಸ್ತೆಯ ಮೇನಕ, ತ್ರಿವೇಣಿ, ಅನುಪಮ, ಮೂವೀಲ್ಯಾಂಡ್‌ ಚಿತ್ರಮಂದಿರಗಳಲ್ಲಿ ವಾರಕ್ಕೊಂದರಂತೆ ಸಿನಿಮಾಗಳು ಬಿಡುಗಡೆಯಾಗಿವೆ. ಅನುಪಮದಲ್ಲಿ ಮೇ 18 ಕ್ಕೆ “ಪಾರ್ಥಸಾರಥಿ’ ತೆರೆಕಂಡರೆ ಮೇ 25ಕ್ಕೆ “ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’,

ಜೂನ್‌ 01 “ಸೆಕೆಂಡ್‌ ಹಾಫ್’ ಚಿತ್ರಗಳು ಬಿಡುಗಡೆಯಾಗಿವೆ. ಪಕ್ಕದ ತ್ರಿವೇಣಿಯಲ್ಲೂ ಅಷ್ಟೇ ಮೇ 25ಕ್ಕೆ “ರಾಜ ಲವ್ಸ್‌ ರಾಧೆ’ ಬಿಡುಗಡೆಯಾದರೆ, ಜೂನ್‌ 01 ರಂದು “ವೆನಿಲ್ಲಾ’ ತೆರೆಕಂಡಿದೆ. ಈ ವಾರ ಆ ಚಿತ್ರಮಂದಿರಕ್ಕೆ “ಶಿವು-ಪಾರು’ ಬರುವುದಾಗಿ ಘೋಷಿಸಿಕೊಂಡಿವೆ. ಹಾಗಾಗಿ, ಇತ್ತೀಚೆಗೆ ಬಿಡುಗಡೆಯಾದ ಯಾವ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡದೇ ಪ್ರಮುಖ ಚಿತ್ರಮಂದಿರಗಳಲ್ಲಿ ಒಂದು ವಾರದ ಖುಷಿಯನªನಷ್ಟೇ ಕಾಣುತ್ತಿವೆ. 

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.