2019ರಲ್ಲಿ ಮತ್ತೊಮ್ಮೆ ನಟಿಸುತ್ತಾರಾ ರಮ್ಯ?


Team Udayavani, Jun 10, 2018, 11:01 AM IST

ramya-24.jpg

ಶಿವರಾಜಕುಮಾರ್‌ ಅಭಿನಯದ  “ಆರ್ಯನ್‌’ ನಂತರ ನಟನೆಯಿಂದ ಮತ್ತು ಚಿತ್ರರಂದಿಂದ ದೂರವೇ ಉಳಿದಿದ್ದ ನಟಿ ರಮ್ಯ, ಇದೀಗ ಮತ್ತೆ ಕನ್ನಡ ಚಿತ್ರರಂಗದಲ್ಲಿ ನಟಿಸುವ ಹಿಂಟ್‌ ಕೊಟ್ಟಿದ್ದಾರೆ. ಮುಂದಿನ ವರ್ಷ ಅಂದರೆ 2019ರಲ್ಲಿ ಮತ್ತೊಮ್ಮೆ ಚಿತ್ರಗಳಲ್ಲಿ ನಟಿಸಬಹುದು ಎಂದು ಹೇಳಿಕೊಂಡಿದ್ದಾರೆ. ಹೌದು, ಮುಂದಿನ ವರ್ಷ ಮತ್ತೆ ಬಣ್ಣ ಹಚ್ಚುವ ಸಾಧ್ಯತೆ ಇದೆ ಎಂದು ರಮ್ಯ ಸುಳಿವು ಕೊಟ್ಟಿದ್ದಾರೆ.

ಇತ್ತೀಚೆಗೆ ಟ್ವಿಟರ್‌ನಲ್ಲಿ ನಟ-ನಿರ್ದೇಶಕ ರಕ್ಷಿತ್‌ ಶೆಟ್ಟಿ ಜೊತೆಗೆ ರಮ್ಯ ಸಂಭಾಷಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಮ್ಯ ಅವರನ್ನು ಮತ್ತೆ ಬೆಳ್ಳಿತೆರೆಯ ಮೇಲೆ ನೋಡುವುದಕ್ಕೆ ಬಯಸುತ್ತೇನೆ ಎಂದು ರಕ್ಷಿತ್‌ ಶೆಟ್ಟಿ ಹೇಳಿಕೊಂಡಿದ್ದಾರೆ. ಅದಕ್ಕೆ ಉತ್ತರಿಸಿರುವ ರಮ್ಯ, 2019ರ ನಂತರ ಎಂದು ಉತ್ತರಿಸಿದ್ದಾರೆ. ಹೀಗೆ ಉತ್ತರಿಸುವ ಮೂಲಕ 2019ರ ನಂತರ ಮತ್ತೊಮ್ಮೆ ಚಿತ್ರಗಳಲ್ಲಿ ನಟಿಸುವ ಸುಳಿವು ನೀಡಿದ್ದಾರೆ.

ರಮ್ಯ ಕಡೆಯದಾಗಿ ಒಪ್ಪಿ ನಟಿಸಿದ ಚಿತ್ರ ಎಂದರೆ ಅದು “ಆರ್ಯನ್‌’. ಆದರೆ, ಕೊನೆಯದಾಗಿ ಬಿಡುಗಡೆಯಾಗಿದ್ದು “ನಾಗರಹಾವು’. ಅದಕ್ಕೆ ಕಾರಣವೂ ಇದೆ. “ನಾಗರಹಾವು’ ಚಿತ್ರದ ಚಿತ್ರೀಕರಣ “ಆರ್ಯನ್‌’ಗಿಂತ ಮುನ್ನ ಪ್ರಾರಂಭವಾದರೂ, ಸಾಕಷ್ಟು ತಡವಾದ್ದರಿಂದ, “ಆರ್ಯನ್‌’ ಮೊದಲು ಬಿಡುಗಡೆಯಾಗಿ, ಅದರ ನಂತರ “ನಾಗರಹಾವು’ ಬಿಡುಗಡೆಯಾಯಿತು.

“ಆರ್ಯನ್‌’ ನಂತರ ರಾಜಕೀಯದಲ್ಲಿ ತೊಡಗಿಸಿಕೊಂಡ ರಮ್ಯ, ಆ ನಂತರ ಅಭಿನಯಿಸಲೇ ಇಲ್ಲ. ಈ ಮಧ್ಯೆ ಅವರು ಒಂದೆರೆಡು ಚಿತ್ರಗಳಲ್ಲಿ ನಟಿಸುತ್ತಾರೆ ಎಂಬ ಸುದ್ದಿ ಇತ್ತಾದರೂ, ರಮ್ಯ ಮಾತ್ರ ನಟನೆಯಿಂದ ದೂರವಾಗಿದ್ದರು. ಈಗ ಅವರು ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ವದಂತಿ ಇದ್ದು, ಆ ಚುನಾವಣೆಗಳ ನಂತರ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದು ಹೇಳಲಾಗುತ್ತಿದೆ.

ಒಂದು ಪಕ್ಷ ಚುನಾವಣೆಗಳಲ್ಲಿ ಗೆದ್ದರೆ ರಮ್ಯ ಸಕ್ರಿಯ ರಾಜಕಾರಣ ಮಾಡಬಹುದು, ಇಲ್ಲವಾದರೆ ಮತ್ತೊಮ್ಮೆ ಅಭಿನಯದಲ್ಲಿ ತೊಡಗಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಅದೇ ಕಾರಣಕ್ಕೆ ಮುಂಬರುವ 2019ರ ನಂತರ ಎಂದು ರಮ್ಯ ಸೂಕ್ಷ್ಮವಾಗಿ ಉತ್ತರ ಕೊಟ್ಟಿದ್ದಾರೆ ಎಂಬ ಗುಸುಗುಸು ಗಾಂಧಿನಗರದಲ್ಲಿ ಕೇಳಿಬರುತ್ತಿದೆ. ರಮ್ಯ ಮತ್ತೆ ನಟಿಸುತ್ತಾರಾ ಎಂಬ ಪ್ರಶ್ನೆಗೆ ಯಾವುದಕ್ಕೂ ಮುಂದಿನ ವರ್ಷದವರೆಗೂ ಕಾಯಲೇಬೇಕು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.