ಮದರಂಗಿ ಕೃಷ್ಣ ಹೊಸ ಚಿತ್ರ ಲವ್‌ಮಾಕ್ಟೆಲ್‌


Team Udayavani, Dec 24, 2018, 4:33 PM IST

ನಟ ಮದರಂಗಿ ಕೃಷ್ಣ ನಿರ್ದೇಶಕರಾಗುತ್ತಿದ್ದಾರೆ ಎಂಬ ಸುದ್ದಿ ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಬಂದಿತ್ತು. ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿರುವ ಕೃಷ್ಣ, ಆಗ ತಮ್ಮ ಚಿತ್ರಕ್ಕಿನ್ನೂ ನಾಮಕರಣ ಮಾಡಿರಲಿಲ್ಲ. ಈಗ ಚಿತ್ರಕ್ಕೆ “ಲವ್‌ ಮಾಕ್ಟೆಲ್‌’ ಎಂದು ಹೆಸರಿಟ್ಟಿದ್ದಾರೆ.

ವಿಶೇಷವೆಂದರೆ, ಚಿತ್ರದ ಶೀರ್ಷಿಕೆ ಹಾಗೂ ಮೊದಲ ಪೋಸ್ಟರ್‌ ಅನ್ನು ನಟ ಸುದೀಪ್‌ ಅವರು ಬಿಡುಗಡೆ ಮಾಡುತ್ತಿದ್ದಾರೆ. ಹೌದು, ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ನಿರ್ದೇಶಕ ಕಮ್‌ ನಟ ಕೃಷ್ಣ, “ಹೊಸ ವರ್ಷಕ್ಕೆ  ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್‌ ಅನ್ನು ಸುದೀಪ್‌ ಅವರು ಅನಾವರಣ ಮಾಡಲಿದ್ದಾರೆ. ಸದ್ಯಕ್ಕೆ ಶೀರ್ಷಿಕೆ, ಪೋಸ್ಟರ್‌ ವಿನ್ಯಾಸದ ಕೆಲಸ ನಡೆಯುತ್ತಿದೆ. ಇನ್ನು, “ಲವ್‌ ಮಾಕ್ಟೆಲ್‌’ ಶೀರ್ಷಿಕೆ ಬಗ್ಗೆ ಹೇಳುವುದಾದರೆ, ಮಾಕ್ಟೆಲ್‌ ಜ್ಯೂಸ್‌ ಬಗ್ಗೆ ಎಲ್ಲರಿಗೂ ಗೊತ್ತು. ಹಣ್ಣುಗಳ ಮಿಕ್ಸ್‌ ಜ್ಯೂಸ್‌ಗೆ “ಮಾಕ್ಟೆಲ್‌’ ಎನ್ನುತ್ತಾರೆ.

ಹಾಗೆಯೇ, ಚಿತ್ರದಲ್ಲೂ ಸಹ ನಾಯಕ ಮೂರ್‍ನಾಲ್ಕು ಹುಡುಗಿಯರ ಜೊತೆ ಲವ್‌ ಮಾಡ್ತಾನೆ. ಕಥೆ ಕೂಡ ಸಂಪೂರ್ಣವಾಗಿ ಪ್ರೀತಿ ಮೇಲೆಯೇ ಸಾಗುತ್ತದೆ. ಚಿತ್ರದ ಕಥೆಯಲ್ಲಿ ಸಾಕಷ್ಟು ಪ್ರೀತಿಗೆ ಸಂಬಂಧಿಸಿದ ವಿಷಯಗಳಿವೆ. ಹಾಗಾಗಿ, ಚಿತ್ರಕ್ಕೆ “ಲವ್‌ ಮಾಕ್ಟೆಲ್‌’ ಎಂದು ಹೆಸರಿಟ್ಟಿದ್ದೇನೆ.
ಅದು ಕಥೆಗೆ ಪೂರಕವಾಗಿದ್ದು, ಈಗಿನ ಟ್ರೆಂಡ್‌ಗೂ ಸರಿಹೊಂದುತ್ತೆ ಎಂಬ ಭಾವನೆಯಿಂದ ಇಡಲಾಗಿದೆ. ಸುದೀಪ್‌ ಅವರ ಬಳಿ ಹೋಗಿ, ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್‌ ಬಿಡುಗಡೆ ಮಾಡಿಕೊಡಬೇಕು ಎಂಬ ಮನವಿ ಇಟ್ಟಾಗ, ಪ್ರೀತಿಯಿಂದಲೇ ಅವರು ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ.

ಹೊಸ ವರ್ಷದ ದಿನದಂದು “ಲವ್‌ ಮಾಕ್ಟೆಲ್‌’ ಶೀರ್ಷಿಕೆ ಜೊತೆಗೆ ಮೊದಲ ಪೋಸ್ಟರ್‌ ಕೂಡ ಬಿಡುಗಡೆಯಾಗಲಿದೆ’ ಎಂದು ಮಾಹಿತಿ ಕೊಡುತ್ತಾರೆ ಕೃಷ್ಣ. ಈಗಾಗಲೇ ಚಿತ್ರದ ಚಿತ್ರೀಕರಣ ಶೇ.50 ರಷ್ಟು ನಡೆದಿದೆ. ಮೊದಲ ನಿರ್ದೇಶನವಾಗಿರುವುದರಿಂದ ಸಾಕಷ್ಟು ಅನುಭವ ಕೂಡ ಆಗಿದೆ ಎನ್ನುವ ಮದರಂಗಿ ಕೃಷ್ಣ, “ಇಲ್ಲಿ ಯಾವುದೇ ಫ‌ಲಿತಾಂಶ ಬಂದರೂ ನಾನೇ ಜವಾಬ್ದಾರಿ ಹೊರಬೇಕು. ಹಾಗಾಗಿ, ತುಂಬಾ ಕಾಳಜಿ ವಹಿಸಿ, ಎಲ್ಲಾ ವಿಭಾಗದಲ್ಲೂ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದೇನೆ. ಇನ್ನೂ ಒಂದು ತಿಂಗಳ ಕಾಲ ಚಿತ್ರೀಕರಣ ನಡೆಯಲಿದೆ.

ಚಿತ್ರದಲ್ಲಿ ನಾಲ್ಕು ಮಾಂಟೇಜಸ್‌ ಹಾಡುಗಳಿವೆ. ಆದರೆ, ಸಂಗೀತ ನಿರ್ದೇಶಕರಿನ್ನೂ ಫಿಕ್ಸ್‌ ಆಗಿಲ್ಲ. ಕ್ರೇಜಿಮೈಂಡ್ಸ್‌ನ ಶ್ರೀ ಸಂಕಲನದ ಜೊತೆಗೆ ಇದೇ ಮೊದಲ ಬಾರಿಗೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಕೃಷ್ಣ ಟಾಕೀಸ್‌ ಬ್ಯಾನರ್‌ನಲ್ಲೇ ತಯಾರಾಗುತ್ತಿರುವ ಈ ಚಿತ್ರದಲ್ಲಿ ಮೂವರು ನಾಯಕಿಯರಿದ್ದಾರೆ. ಆ ಪೈಕಿ ಈಗ ಮಿಲನ ನಾಗರಾಜ್‌ ಮಾತ್ರ ಪಕ್ಕಾ ಆಗಿದ್ದಾರೆ. ಉಳಿದಂತೆ ಇಬ್ಬರು ಆಯ್ಕೆಯಾಗಬೇಕಿದೆ.

ಇದೊಂದು ಎಮೋಷನಲ್‌ ಲವ್‌ಸ್ಟೋರಿಯಾಗಿದ್ದು, ಮೂರು ಭರ್ಜರಿ ಆ್ಯಕ್ಷನ್‌ ಕೂಡ ಇರಲಿದೆ. ನಾಯಕನ ಬದುಕಿನಲ್ಲಿ ಮೂರು ಹಂತಗಳು ಬರಲಿದ್ದು, ಒಂದೊಂದು ಹಂತದಲ್ಲಿ ಒಂದೊಂದು ಕಥೆ ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ಆ ಕಥೆ ಮೂಲಕ ನಾಯಕನ ಲೈಫ್ ಕೂಡ ಬದಲಾಗುತ್ತಾ
ಹೋಗುತ್ತದೆ’ ಎಂಬುದು ಕಥೆ ಎನ್ನುತ್ತಾರೆ ಕೃಷ್ಣ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.