‘ಲವ್ಮಿ… ಆರ್ ಹೇಟ್ ಮಿ’ ಚಿತ್ರಕ್ಕೆ ಮುಹೂರ್ತ: ಡಾರ್ಲಿಂಗ್ ಕೃಷ್ಣನಿಗೆ ರಚಿತಾ ಜೋಡಿ
Team Udayavani, Sep 11, 2021, 11:52 AM IST
ಗೌರಿ ಹಬ್ಬದ ಶುಭದಿನದಂದು ಲವ್ ಮಿ… ಆರ್ ಹೇಟ್ ಮಿ.. ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಮಿಲನ ನಾಗರಾಜ್ ಆರಂಭ ಫಲಕ ತೋರಿದರು. ದಿನಕರ್ ತೂಗುದೀಪಕ್ಯಾಮೆರಾ ಚಾಲನೆ ಮಾಡಿದರು.
ದೀಪಕ್ ಗಂಗಾಧರ್ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ತೂಗುದೀಪ ಸಂಸ್ಥೆಯ ಕೆಲವು ಚಿತ್ರಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದ, ದೀಪಕ್ ಗಂಗಾಧರ್ ಆ ನಂತರ ವಿತರಕರಾಗಿಯೂ ಹೆಸರು ಮಾಡಿರುವವರು. ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ.
“ಗೌರಿ ಹಬ್ಬದ ಶುಭದಿನದಂದು ಚಿತ್ರ ಆರಂಭಿಸಿದ್ದೇವೆ. ಇದೇ ಹದಿಮೂರರಿಂದ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಇದೊಂದು ಪಕ್ಕಾ ಲವ್ ಸ್ಟೋರಿ’ ಎನ್ನುತ್ತಾರೆ ದೀಪಕ್ ಗಂಗಾಧರ್.
ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿದ್ದಾರೆ. “ಒಳ್ಳೆಯ ಕಥೆ. ಈ ಚಿತ್ರದಲ್ಲಿ ನನ್ನದು ಎರಡು ರೀತಿಯ ಪಾತ್ರ. ಕಾಲೇಜ್ ಹುಡುಗನಾಗಿ ಹಾಗೂ ಕಾಲೇಜ್ ನಂತರದ ದಿನಗಳದ್ದು. ಲವ್ ಸಬ್ಜೆಕ್ಟ್ ನನಗೆ ಇಷ್ಟ ಹಾಗಾಗಿ ಹೆಚ್ಚಾಗಿ ಅದನೇ ಆಯ್ಕೆ ಮಾಡಿಕೊಳ್ಳುತ್ತೇನೆ. ನಾನು ಮತ್ತು ರಚಿತಾ ರಾಮ್ ಮೊದಲ ಬಾರಿಗೆ ಒಟ್ಟಾಗಿ ನಟಿಸುತ್ತಿದ್ದೇವೆ. ನಾವಿಬ್ಬರು ಒಂದೇ ದಿನ ಚಿತ್ರರಂಗ ಪ್ರವೇಶಿಸಿದವರು. ಎಂಟು ವರ್ಷಗಳ ಹಿಂದೆ ನನ್ನ ಮದರಂಗಿ, ರಚಿತಾ ಅವರ ಬುಲ್ ಬುಲ್ ಒಂದೇ ದಿನ ತೆರೆಕಂಡಿತ್ತು. ಇಷ್ಟು ವರ್ಷಗಳ ನಂತರ ಒಂದೇ ಚಿತ್ರದಲ್ಲಿ ಅಭಿನಯಿಸುವ ಅವಕಾಶಕೂಡಿ ಬಂದಿದೆ ಎಂದರು ಡಾರ್ಲಿಂಗ್ ಕೃಷ್ಣ.
ಇದನ್ನೂ ಓದಿ:ಲಾಂಗ್ ಹಿಡಿದು ರಗಡ್ ಲುಕ್ ನಲ್ಲಿ ಎಂಟ್ರಿ ಕೊಟ್ಟ ‘ತಲೈವಾ’ : ಅಣ್ಣಾತೆ ಮೋಷನ್ ಪೋಸ್ಟರ್ ಔಟ್
ಚಿತ್ರವನ್ನು ಸುನೀಲ್ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಶ್ರೀಧರ್ ಸಂಭ್ರಮ್ ಸಂಗೀತ ನೀಡುತ್ತಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿವೆ. ಅಣ್ಣಾವ್ರ ಜನಪ್ರಿಯ ಹಾಡೇ ಚಿತ್ರದ ಗೀತೆಯಾಗಿದೆ. ತುಂಬಾ ಸುಮಧುರ ಗೀತೆಗಳು ಈ ಪ್ರೇಮ ಕಾಥಾನಕದಲಿರಲ್ಲಿದೆ ಎಂದು ಹಾಡುಗಳ ಹಾಗೂ ಸಂಗೀತದ ಬಗ್ಗೆ ವಿವರಣೆ ನೀಡಿದರು ಸಂಗೀತ ನಿರ್ದೇಶಕ ಹಾಗೂ ಸಹ ನಿರ್ಮಾಪಕ ಶ್ರೀಧರ್ ಸಂಭ್ರಮ್. ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಛಾಯಾಗ್ರ ಹಣವಿದೆ. ಸಾಕಷ್ಟು ಪ್ರೇಮಕಥೆಗಳು ಬಂದಿವೆಯಾದರೂ, ಈ ನಿರ್ದೇಶಕರು ಆಯ್ಕೆ ಮಾಡಿಕೊಂಡಿರುವಕಥೆ ಚೆನ್ನಾಗಿದೆ. ಸುಂದರ ಪರಿಸರಗಳಲ್ಲಿ ಚಿತ್ರೀಕರಣ ನಡೆಸಲಾಗುವುದು ಎನ್ನುವುದು ಅವರ ಮಾತು.
ಚಿತ್ರಕ್ಕೆಕೆ.ಎಂ.ಪ್ರಕಾಶ್ ಸಂಕಲನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ, ಮೋಹನ್ ಅವರ ನೃತ್ಯ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ