ಗಣರಾಜ್ಯೋತ್ಸವಕ್ಕೆ ಮದಗಜ ಮೋಷನ್‌ ಟೀಸರ್‌


Team Udayavani, Jan 24, 2019, 5:47 AM IST

madagaja.jpg

ಶ್ರೀಮುರಳಿ ಅಭಿನಯದ “ಮದಗಜ’ ಶುರುವಿಗೆ ಮುನ್ನವೇ ಒಂದಷ್ಟು ಸುದ್ದಿ ಮಾಡುತ್ತಿದೆ. ಮೊದಲು ಶೀರ್ಷಿಕೆಯಲ್ಲಿ ಗೊಂದಲ ಉಂಟಾಗಿತ್ತು. ಅದು ಬಗೆಹರಿಯಿತು. ನಂತರದ ದಿನಗಳಲ್ಲಿ ದರ್ಶನ್‌ ಅವರಿಂದ “ಮದಗಜ’  ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಿಸಲಾಯಿತು. ಆ ಬಳಿಕ ಮೈಸೂರು ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸಂಕ್ರಾಂತಿ ಹಬ್ಬದಂದು ಚಿತ್ರದ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಹಾಡಿಗೆ ಚಾಲನೆ ಸಿಕ್ಕಿತು.

ಈಗ ಹೊಸ ಸುದ್ದಿಯೆಂದರೆ, ಜನವರಿ 26 ರ ಗಣರಾಜ್ಯೋತ್ಸವ ದಿನದಂದು “ಮದಗಜ’ ಚಿತ್ರದ ಮೋಷನ್‌ ಟೀಸರ್‌ ಕೂಡ ರಿಲೀಸ್‌ ಆಗುತ್ತಿದೆ. ನಿರ್ದೇಶಕ ಎಸ್‌.ಮಹೇಶ್‌ ಕುಮಾರ್‌ ಅವರು ಸುಮಾರು ಒಂದುವರೆ ನಿಮಿಷದ ಟೀಸರ್‌ ಸಿದ್ಧಗೊಳಿಸಿದ್ದು, ಅದನ್ನು ಜನವರಿ 26 ರಂದು ಬೆಳಗ್ಗೆ 11 ಗಂಟೆಗೆ ಬಿಡುಗಡೆ ಮಾಡುವ ಸಿದ್ಧತೆಯಲ್ಲಿದ್ದಾರೆ. ಅದಕ್ಕಾಗಿ ಎಲ್ಲಾ ತಯಾರಿ ಮಾಡಿಕೊಂಡಿರುವ ಅವರು, ವಿಶೇಷ ದಿನವಾಗಿರುವ ಗಣರಾಜ್ಯೋತ್ಸವದಂದು ವಿಶೇಷ ವ್ಯಕ್ತಿಯೊಬ್ಬರ ಕೈಯಿಂದಲೇ ಮೋಷನ್‌ ಟೀಸರ್‌ ಬಿಡುಗಡೆ ಮಾಡಿಸುವುದಾಗಿ ಹೇಳುತ್ತಾರೆ.

ಆದರೆ, ಅಂದು “ಮದಗಜ’ ಚಿತ್ರ ಮೋಷನ್‌ ಟೀಸರ್‌ ಅನ್ನು ಬಿಡುಗಡೆ ಮಾಡಲಿರುವ ಆ ವಿಶೇಷ ವ್ಯಕ್ತಿ ಯಾರೆಂಬುದು ಮಾತ್ರ ಗೌಪ್ಯ. ಸದ್ಯಕ್ಕೆ ಆನಂದ್‌ ಆಡಿಯೋದ ಯುಟ್ಯೂಬ್‌ ಚಾನೆಲ್‌ನಲ್ಲಿ ಜ.26 ರಂದು ಬೆಳಗ್ಗೆ 11 ಗಂಟೆಗೆ ಮೋಷನ್‌ ಟೀಸರ್‌ ಬಿಡುಗಡೆಯಾಗಲಿದೆ. ಈಗಾಗಲೇ ಮೋಷನ್‌ ಟೀಸರ್‌ ಪ್ರೋಮೋವೊಂದು ಹರಿದಾಡುತ್ತಿದ್ದು, “ಮದಗಜ’ ಚಿತ್ರದ ಬಗ್ಗೆ ಒಂದಷ್ಟು ಕುತೂಹಲ ಮೂಡಿಸಿದೆ. ಚಿತ್ರವನ್ನು ಉಮಾಪತಿ ಎಸ್‌.ಗೌಡ ನಿರ್ಮಿಸುತ್ತಿದ್ದಾರೆ. ಅರ್ಜುನ್‌ ಜನ್ಯ ಅವರ ಸಂಗೀತವಿದೆ.

ಇಷ್ಟರಲ್ಲೇ ನಾಯಕಿಯ ಆಯ್ಕೆ ಸೇರಿದಂತೆ ಇನ್ನುಳಿದ ಕಲಾವಿದರು, ತಂತ್ರಜ್ಞರ ಆಯ್ಕೆ ನಡೆಯಲಿದೆ ಎಂಬುದು ಚಿತ್ರತಂಡದ ಮಾತು. ಸದ್ಯಕ್ಕೆ ಶ್ರೀಮುರಳಿ ಅವರು “ಭರಾಟೆ’ ಬಿಜಿಯಲ್ಲಿದ್ದಾರೆ. ಚೇತನ್‌ಕುಮಾರ್‌ ನಿರ್ದೇಶನದ “ಭರಾಟೆ’ ಇನ್ನೇನು ಮುಗಿಯುವ ಹಂತ ತಲುಪಿದೆ. ಆ ಚಿತ್ರದ ನಂತರ, “ಮದಗಜ’ ಚಿತ್ರಕ್ಕೆ ಚಾಲನೆ ಸಿಗುವ ಸಾಧ್ಯತೆ ಇದೆ. ಇದೂ ಕೂಡ ಶ್ರೀಮುರಳಿ ಅವರ ಮತ್ತೂಂದು ಮಾಸ್‌ ಚಿತ್ರವಾಗಲಿದೆ.

ಟಾಪ್ ನ್ಯೂಸ್

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.