ಕೋಟಿಗೊಬ್ಬನ ಎದುರು “ಮಡ್ಡೋನ’


Team Udayavani, Jun 4, 2018, 10:00 PM IST

madonna-sebastian-2.jpg

ಸುದೀಪ್‌ ಅಭಿನಯದ “ಕೋಟಿಗೊಬ್ಬ 3′ ಚಿತ್ರದ ಮುಹೂರ್ತವಾಗಿ, ಇದೀಗ ಚಿತ್ರೀಕರಣ ಪ್ರಾರಂಭವಾಗುವುದಕ್ಕೆ ದಿನಗಣನೆ ಪ್ರಾರಂಭವಾಗಿದೆ. ಈ ಮಧ್ಯೆ ಚಿತ್ರದ ನಾಯಕಿ ಆಯ್ಕೆಯಾಗಿದ್ದು, ಸುದೀಪ್‌ ಎದುರು ಮಲಯಾಳಂ ನಟಿ ಮಡ್ಡೋನ ಸೆಬಾಸ್ಟಿಯನ್‌ ನಟಿಸುವುದು ಪಕ್ಕಾ ಆಗಿದೆ. ಹೌದು, “ಕೋಟಿಗೊಬ್ಬ 3′ ಚಿತ್ರದಲ್ಲಿ ಮಡ್ಡೋನ ಸೆಬಾಸ್ಟಿಯನ್‌ ನಾಯಕಿಯಾಗಿ ನಟಿಸುತ್ತಿದ್ದು, ಇದು ಅವರ ಮೊದಲ ಚಿತ್ರವಾಗಿದೆ.

ಇದಕ್ಕೂ ಮುನ್ನ ಮಲಯಾಳಂನ “ಪ್ರೇಮಂ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅವರು, “ಕಿಂಗ್‌ ಲಯರ್‌’ನಲ್ಲೂ ನಟಿಸಿದ್ದಾರೆ. ತಮಿಳಿನಲ್ಲಿ “ಕಾದಲುಂ ಕದಂದು ಪೋಗುಂ’, “ಕವನ್‌’, “ಪವರ್‌ ಪಾಂಡಿ’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಅವರು, ಗಾಯಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಅವರು “ಕೋಟಿಗೊಬ್ಬ 3′ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಅಷ್ಟೇ ಅಲ್ಲ, “ಕೋಟಿಗೊಬ್ಬ 3′ ಚಿತ್ರದ ಇನ್ನೊಂದು ಹೈಲೈಟ್‌ ಎಂದರೆ, ಬಾಲಿವುಡ್‌ ನಟ ಅಫ್ತಾಬ್‌ ಶಿವದಾಸಾನಿ ನಟಿಸುತ್ತಿರುವುದು. ಈ ಚಿತ್ರದಲ್ಲಿ ಇಂಟರ್‌ಪೋಲ್‌ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿರುವ ಅವರಿಗಿದು ಮೊದಲ ಕನ್ನಡ ಚಿತ್ರ. ಬಾಲಿವುಡ್‌ನ‌ಲ್ಲಿ “ಮಿಸ್ಟರ್‌ ಇಂಡಿಯಾ’, “ಶೆಹನ್‌ಷಾ’, “ಚಾಲ್‌ಬಾಝ್’ ಮುಂತಾದ ಚಿತ್ರಗಳಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದ ಅಫ್ತಾಬ್‌, ರಾಮ್‌ ಗೋಪಾಲ್‌ ವರ್ಮ ನಿರ್ದೇಶನದ “ಮಸ್ತ್’ ಚಿತ್ರದ ಮೂಲಕ ನಾಯಕರಾದರು.

ಆ ನಂತರ “ಆವಾರ ಪಾಗಲ್‌ ದಿವಾನಾ’, “ಲವ್‌ ಕೆಲಿಯೇ ಕುಛ… ಭೀ ಕರೇಗಾ’, “ಮಸ್ತಿ’ “ದೇ ಥಾಲಿ’ ಮುಂತಾದ ಹಲವು ಚಿತ್ರಗಳಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ಅವರು “ಕೋಟಿಗೊಬ್ಬ 3′ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಇನ್ನು ಈ ಚಿತ್ರದ ಚಿತ್ರೀಕರಣ ಇದೇ ತಿಂಗಳ 16ರಿಂದ ಪ್ರಾರಂಭವಾಗುವ ಸಾಧ್ಯತೆ ಇದೆ.

ಚಿತ್ರದ ಚಿತ್ರೀಕರಣ ಯೂರೋಪ್‌ನ ಸರ್ಬಿಯಾದಲ್ಲಿ ನಡೆಯಲಿದ್ದು, ಅಲ್ಲಿ ಚಿತ್ರೀಕರಣವಾಗುತ್ತಿರುವ ಮೊದಲ ಕನ್ನಡ ಚಿತ್ರ ಇದಾಗಲಿದೆ. ನಿರ್ದೇಶಕ ಶಿವ ಕಾರ್ತಿಕ್‌ ಮತ್ತು ನಿರ್ದೇಶನದ ತಂಡದವರು ಜೂನ್‌ 10ಕ್ಕೆ ಹೋಗಿ ಅಲ್ಲಿ ಒಂದಿಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಂತೆ. ಸುದೀಪ್‌, ರವಿಶಂಕರ್‌, ಅಫ್ತಾಬ್‌ ಸೇರಿದಂತೆ ಸುಮಾರು 40 ಜನರ ತಂಡ ಜೂನ್‌ 15ಕ್ಕೆ ಅಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಂತರ 16ರಿಂದ ಸುಮಾರು 40 ದಿನಗಳ ಕಾಲ ಸರ್ಬಿಯಾದ ಸುಂದರ ಪ್ರಾಂತ್ಯಗಳಲ್ಲಿ ಚಿತ್ರೀಕರಣ ನಡೆಯಲಿದೆ. ಈಗಾಗಲೇ “ಪೈಲ್ವಾನ್‌’ ಚಿತ್ರದ ಮೊದಲ ಹಂತದ ಚಿತ್ರೀಕರಣವನ್ನು ಚೆನ್ನೈನಲ್ಲಿ ಮುಗಿಸಿಬಂದಿರುವ ಸುದೀಪ್‌, “ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದ ಉಳಿದ ಭಾಗದ ಚಿತ್ರೀಕರಣ ಮುಗಿಸಿ, ಸರ್ಬಿಯಾಗೆ ಹಾರಲಿದ್ದಾರೆ. “ಕೋಟಿಗೊಬ್ಬ 3′ ಚಿತ್ರವನ್ನು ಸೂರಪ್ಪ ಬಾಬು ನಿರ್ಮಿಸುತ್ತಿದ್ದು, ಈ ಹಿಂದೆ “ಕೋಟಿಗೊಬ್ಬ 2′ ಚಿತ್ರವನ್ನೂ ಅವರೇ ನಿರ್ಮಿಸುತ್ತಿದ್ದಾರೆ.

ಅಷ್ಟೇ ಅಲ್ಲ, ವಿಷ್ಣುವರ್ಧನ್‌ ಅಭಿನಯದ “ಕೋಟಿಗೊಬ್ಬ’ ಚಿತ್ರವನ್ನೂ ಅವರೇ ನಿರ್ಮಿಸಿದ್ದರು. ಒಂದೇ ಹೆಸರಿನ ಅಥವಾ ಫ್ರಾಂಚೈಸಿಯ ಮೂರು ಚಿತ್ರಗಳನ್ನು ಬಾಬು ನಿರ್ಮಿಸುತಿದ್ದು, ಕನ್ನಡ ಚಿತ್ರರಂಗದಲ್ಲಿ ಇದೊಂದು ವಿಶೇಷ ಎಂದರೆ ತಪ್ಪಿಲ್ಲ. ಈ ಚಿತ್ರವನ್ನು ಹೊಸ ನಿರ್ದೇಶಕ ಶಿವ ಕಾರ್ತಿಕ್‌ ನಿರ್ದೇಶಿಸಿದರೆ, ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು ಶೇಖರ್‌ ಚಂದ್ರ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ಸುದೀಪ್‌, ಮಡ್ಡೋನ, ಅಫ್ತಾಬ್‌ ಜೊತೆಗೆ ನವಾಬ್‌ ಷಾ, ಶ್ರದ್ಧಾ ಷಾ, ರವಿಶಂಕರ್‌, ರಂಗಾಯಣ ರಘು ಮುಂತಾದವರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.