ಮದುವೆ ಮಾಡ್ರೀ ಸರಿ ಹೋಗ್ತಾನೆ!

ಹೊಸಬರ ವಿಭಿನ್ನ ಶೀರ್ಷಿಕೆ

Team Udayavani, Jan 5, 2020, 7:01 AM IST

Maduve-madri-sari-hogtane

ಕನ್ನಡದಲ್ಲಿ ಈಗಾಗಲೇ ವಿಭಿನ್ನವಾಗಿರುವ ಶೀರ್ಷಿಕೆವುಳ್ಳ ಚಿತ್ರಗಳು ಬಂದಿವೆ. ಬರುತ್ತಲೂ ಇವೆ. ಆ ಸಾಲಿಗೆ ಈಗ “ಮದುವೆ ಮಾಡ್ರೀ ಸರಿ ಹೋಗ್ತಾನೆ’ ಚಿತ್ರವೂ ಸೇರಿದೆ. ಈ ಶೀರ್ಷಿಕೆ ಕೇಳಿದವರಿಗೆ ಇದೊಂದು ಮಜವಾದ ಸಿನಿಮಾ ಅನಿಸುವುದು ಗ್ಯಾರಂಟಿ. ಶೀರ್ಷಿಕೆಯಷ್ಟೇ ಮಜ ಕಥೆಯಲ್ಲೂ ಇದೆ ಎಂಬುದು ನಿರ್ದೇಶಕ ಗೋಪಿ ಕೆರೂರು ಅವರ ಮಾತು. ಈ ಹಿಂದೆ “ರಂಕಲ್‌ ರಾಟೆ’ ಚಿತ್ರ ನಿರ್ದೇಶಿಸಿದ್ದ ಗೋಪಿ ಕೆರೂರು “ಮದುವೆ ಮಾಡ್ರೀ ಸರಿ ಹೋಗ್ತಾನೆ’ ಚಿತ್ರಕ್ಕೂ ಕಥೆ, ಚಿತ್ರಕಥೆ, ಸಂಭಾಷಣೆ ಜೊತೆಗೆ ನಿರ್ದೇಶನ ಮಾಡಿದ್ದಾರೆ.

ಅಂದಹಾಗೆ, ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದ್ದು, ಬಿಡುಗಡೆಗೆ ಸಜ್ಜಾಗಿದೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗೋಪಿ ಕೆರೂರು, “ಇದೊಂದು ಮನರಂಜನೆಯ ಸಿನಿಮಾ. “ಮದುವೆ ಮಾಡ್ರೀ ಸರಿ ಹೋಗ್ತಾನೆ’ ಶೀರ್ಷಿಕೆಯಷ್ಟೇ ಸಿನಿಮಾ ಕಥೆ ಕೂಡ ಮಜವಾಗಿಯೇ ಸಾಗುತ್ತದೆ. ಚಿತ್ರಕ್ಕೆ ಶಿವಚಂದ್ರಕುಮಾರ್‌ ನಾಯಕ ರಾದರೆ ಅವರಿಗೆ ಆರಾಧ್ಯ ನಾಯಕಿ. ಇವರಿಬ್ಬರಿಗೂ ಇದು ಮೊದಲ ಅನುಭವ.

ಉಳಿದಂತೆ ಚಿತ್ರದಲ್ಲಿ ಅರುಣ ಬಾಲರಾಜ್‌, ರಮೇಶ್‌ ಭಟ್‌, ಚಿತ್ಕಲ ಬಿರಾದಾರ್‌, ಮಿಮಿಕ್ರಿ ಗೋಪಿ, ಕೃಷ್ಣಮೂರ್ತಿ ಕವತಾರ್‌ ಇತರರು ನಟಿಸಿದ್ದಾರೆ. ಕಥೆ ಕುರಿತು ಹೇಳುವುದಾದರೆ, ಒಂದು ಊರಲ್ಲಿ ಶೋಷಣೆಗೊಳಗಾದ ಕುಟುಂಬವೊಂದರ ಹುಡುಗ ಹೇಗೆ ಇಡೀ ಊರ ಜನರ ಮನಸ್ಸನ್ನು ಗೆಲ್ಲುತ್ತಾನೆ ಎಂಬುದೇ ಕಥೆ. ಸಾಧನೆ ಮಾಡಬೇಕಾದರೆ, ಒಂದು ಹೆಣ್ಣು ಹಿಂದೆ ಇರಲೇಬೇಕು. ಹಾಗೆಯೇ, ಚಿತ್ರದ ಹೀರೋ ಕೂಡ ಪ್ರೀತಿಯಲ್ಲಿ ಬೀಳುತ್ತಾನೆ.

ತನ್ನ ಗುರಿಯನ್ನು ಹೇಗೆ ತಲುಪುತ್ತಾನೆ. ಅವನ ಗುರಿಗೆ ಸಾಥ್‌ ನೀಡುವರೆಷ್ಟು ಮಂದಿ, ಕಾಲು ಎಳೆಯುವರೆಷ್ಟು ಮಂದಿ ಅನ್ನೋದು ಕಥೆ. ಈ ಕಥೆಗೆ ತಕ್ಕಂತೆಯೇ ಶೀರ್ಷಿಕೆ ಪೂರಕವಾಗಿದೆ. ಆಡು ಭಾಷೆಯಲ್ಲಿ ಮಾತನಾಡುವ ಪದವನ್ನೇ ಚಿತ್ರಕ್ಕೂ ಇಡಲಾಗಿದೆ. ಚಿತ್ರದಲ್ಲಿ ಹನ್ನೊಂದು ಹಾಡುಗಳಿವೆ. ಕೆ.ಕಲ್ಯಾಣ್‌,ನಾಗೇಂದ್ರ ಪ್ರಸಾದ್‌ ಒಂದೊಂದು ಹಾಡು ಬರೆದರೆ, ಉಳಿದ ಹಾಡುಗಳಿಗೆ ನಾನು ಸಾಹಿತ್ಯ ಬರೆದಿದ್ದೇನೆ. ಅವಿನಾಶ್‌ ಬಾಸೂತ್ಕರ್‌ ಸಂಗೀತವಿದೆ.

ಸುರೇಶ್‌ ಬಾಬು ಛಾಯಾಗ್ರಹಣವಿದೆ. ವೆಂಕಿ ಯುಡಿವಿ ಸಂಕಲನ ಮಾಡಿದ್ದಾರೆ. ಗಂಗಾವತಿಯ ಶಿವರಾಜ್‌ ಲಕ್ಷ್ಮಣ್‌ರಾವ್‌ ದೇಸಾಯಿ ಚಿತ್ರವನ್ನು ನಿರ್ಮಿಸಿದ್ದು, ಇವರಿಗೂ ಇದು ಮೊದಲ ನಿರ್ಮಾಣದ ಚಿತ್ರ. ಚಿತ್ರದಲ್ಲಿ ಶಾನ್‌, ಸಂಚಿತ್‌ ಹೆಗ್ಡೆ, ಅನನ್ಯ ಭಟ್‌ ಇತರರು ಹಾಡಿದ್ದಾರೆ. ಬಾಗಲಕೋಟೆ, ಕೆರೂರು, ಬೆಂಗಳೂರು, ಹಾಲಿಗೇರಿ, ಮುಚ್‌ಕಂಡಿ ಇತರೆಡೆ ಚಿತ್ರೀಕರಿಸಲಾಗಿದೆ. ಶೀಘ್ರದಲ್ಲೇ ಆಡಿಯೋ ರಿಲೀಸ್‌ ಮಾಡಲಿದ್ದು, ಫೆಬ್ರವರಿಯಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆ ಇದೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.