ಏ. 9ಕ್ಕೆ ‘ಮಹಾನ್‌ ಹುತಾತ್ಮ’ ಬಿಡುಗಡೆ: ಕಿರುಚಿತ್ರದ ಬಜೆಟ್‌ 25 ಲಕ್ಷ!


Team Udayavani, Apr 8, 2021, 9:30 AM IST

ಏ. 9ಕ್ಕೆ ‘ಮಹಾನ್‌ ಹುತಾತ್ಮ’ ಬಿಡುಗಡೆ: ಕಿರುಚಿತ್ರದ ಬಜೆಟ್‌ 25 ಲಕ್ಷ!

2018ರಲ್ಲಿ ಅತ್ಯುತ್ತಮ ಕಿರುಚಿತ್ರ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದ, ಬಳಿಕ ಸುಮಾರು 20ಕ್ಕೂ ಅಧಿಕ ಸಿನಿಮೋತ್ಸವಗಳಲ್ಲಿ ಭಾಗವಹಿಸಿ ಹತ್ತಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದ “ಮಹಾನ್‌ ಹುತಾತ್ಮ’ ಕಿರುಚಿತ್ರ ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಅಂದಹಾಗೆ, “ಮಹಾನ್‌ ಹುತಾತ್ಮ’ ಇದೇ ಏ. 9 ರಂದು ಎಂಎಚ್‌ ಫಿಲಂ.ಇನ್‌ ನಲ್ಲಿ ಪೇಡ್‌ ಪ್ರೀಮಿಯರ್‌ ಆಗಲಿದೆ.

ಆಸಕ್ತರು ಆನ್‌ಲೈನ್‌ ಪ್ಲಾಟ್‌ಫಾರ್ಮ್ನಲ್ಲಿ ಈ ಕಿರುಚಿತ್ರವನ್ನು ವೀಕ್ಷಿಸಬಹುದಾಗಿದೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್‌ ಪುರಾಣಿಕ್‌ ಅವರ ಪುತ್ರ ಸಾಗರ್‌ ಪುರಾಣಿಕ್‌ “ಮಹಾನ್‌ ಹುತಾತ್ಮ’ ಕಿರುಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಅಕ್ಷಯ್‌ ಚಂದ್ರಶೇಖರ್‌ ಈ ಕಿರುಚಿತ್ರ ನಿರ್ಮಿಸಿದ್ದು, ಜೊತೆಗೆ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ “ಮಹಾನ್‌ ಹುತಾತ್ಮ’ನ ಬಿಡುಗಡೆಯ ಬಗ್ಗೆ ಮಾಹಿತಿ ನೀಡಲು ಮಾಧ್ಯಮಗಳ ಮುಂದೆ ಬಂದಿದ್ದ ತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿತು.

ಇದನ್ನೂ ಓದಿ:ಲಕ್ಷ್ಮೀ ರೈ ಎಂಗೇಜ್‌ಮೆಂಟ್‌ ಟ್ವಿಸ್ಟ್‌!

ಮೊದಲಿಗೆ “ಮಹಾನ್‌ ಹುತಾತ್ಮ’ ಕಿರುಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕ ಮತ್ತು ನಾಯಕ ಅಕ್ಷಯ್‌ ಚಂದ್ರಶೇಖರ್‌, “ಬೆಳಗಾವಿ ಮೂಲದವನಾದ ನಾನು ಮೊದಲಿನಿಂದಲೂ ಭಗತ್‌ ಸಿಂಗ್‌ ಫಾಲೋವರ್‌ ಆಗಿದ್ದೆ. ಅವರ ಕುರಿತು ಸಿನಿಮಾ ಮಾಡುವ ಯೋಚನೆ ಇತ್ತು. ಮೊದಲಿಗೆ ಸಿನಿಮಾ ಬದಲು 80 ಸಾವಿರ ಬಜೆಟ್‌ನಲ್ಲಿ ಶಾರ್ಟ್‌ ಫಿಲಂ ಮಾಡಲು ಪ್ಲಾನ್‌ ಹಾಕಿಕೊಂಡೆವು. ಆನಂತರ ಅದು ದೊಡ್ಡ ಮಟ್ಟದಲ್ಲಿ ಸಿದ್ಧವಾಯ್ತು. ದಕ್ಷಿಣ ಭಾರತದಲ್ಲಿ ಅತೀ ಹೆಚ್ಚು ಬಜೆಟ್‌ನ ಶಾರ್ಟ್‌ ಫಿಲಂ ಎಂಬ ಹೆಗ್ಗಳಿಕೆಗೂ ಪಾತ್ರವಾಯಿತು. ಸುಮಾರು ಮೂರು ವರ್ಷದ ಕನಸು ಈ ಕಿರುಚಿತ್ರದಲ್ಲಿ ನನಸಾಗಿದೆ. ಈ ಶಾರ್ಟ್‌ ಫಿಲಂನಲ್ಲಿ ಸೈನಿಕ ಮತ್ತು

ಭಗತ್‌ ಸಿಂಗ್‌ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಕನ್ನಡದ ಈ ಶಾರ್ಟ್‌ ಫಿಲಂ ರಾಷ್ಟ್ರ ಪ್ರಶಸ್ತಿಯ ಮೂಲಕ ರಾಷ್ಟ್ರಮಟ್ಟದಲ್ಲೂ ಗುರುತಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಇದನ್ನು ಸಿನಿಮಾ ಮಾಡುವ ಆಲೋಚನೆಯೂ ಇದೆ’ ಎಂದರು.

ಇನ್ನು “ಮಹಾನ್‌ ಹುತಾತ್ಮ’ ಕಿರುಚಿತ್ರದಲ್ಲಿ ನಟಿ ಅದ್ವಿತಿ ಶೆಟ್ಟಿ, ಸಾಗರ್‌ ಪುರಾಣಿಕ್‌, ವರುಣ್‌ ಶ್ರೀನಿವಾಸ್‌, ಹಿರಿಯ ನಟ ಶ್ರೀನಾಥ್‌, ಕುಲ್ದೀಪ್‌, ಮನೋಜ್‌, ಶಶಿಕುಮಾರ್‌, ಪೀಟರ್‌, ಬಾಲನಟ ಅಚಿಂತ್ಯ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಮಹಾನ್‌ ಹುತಾತ್ಮ’ ಕಿರುಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಸಾಗರ್‌ ಪುರಾಣಿಕ್‌, “ಈ ಶಾರ್ಟ್‌ ಫಿಲಂ ನಿರ್ದೇಶನದ ಜತೆಗೆ ಚಂದ್ರಶೇಖರ್‌ ಆಜಾದ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಕಡಿಮೆ ಬಜೆಟ್‌ನಲ್ಲಿ ಮಾಡಬೇಕೆಂದು ಕೊಂಡಿದ್ದ ಶಾರ್ಟ್‌ ಫಿಲಂಗೆ ಆ ನಂತರ ಸುಮಾರು 25 ಲಕ್ಷ ಖರ್ಚಾಯಿತು. ಸ್ವಾತಂತ್ರ್ಯ ಪೂರ್ವದ ಹಿನ್ನೆಲೆಯಲ್ಲಿ ಈ ಶಾರ್ಟ್‌ ಫಿಲಂ ನಡೆಯುವುದರಿಂದ, ಅಂಥದ್ದೇ ಲೊಕೇಶನ್‌ ಹುಡುಗಿ ಇದನ್ನು ಶೂಟಿಂಗ್‌ ಮಾಡಿದ್ದೇವೆ. ಕನ್ನಡದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕಿರುಚಿತ್ರ ಎಂಬ ಹೆಮ್ಮ ಈ ಕಿರುಚಿತ್ರಕ್ಕಿದೆ’ ಎಂದರು.

“ಮಹಾನ್‌ ಹುತಾತ್ಮ’ ಕಿರುಚಿತ್ರಕ್ಕೆ ಅಭಿಲಾಷ್‌ ಕಲಾತಿ ಛಾಯಾಗ್ರಹಣ, ಮಹೇಶ್‌ ಎಸ್‌. ಸಂಕಲನ, ಅನಂತ್‌ ಕಾಮತ್‌ ಸೌಂಡ್‌ ಡಿಸೈನ್‌ ಇದೆ. “ಅಕ್ಷಯ್‌ ಎಂಟರ್‌ಟೈನ್ಮೆಂಟ್‌’ ಮತ್ತು “ಪುರಾಣಿಕ್‌ ಪ್ರೊಡಕ್ಷನ್ಸ್‌’ ಬ್ಯಾನರ್‌ ಲಾಂಛನದಲ್ಲಿ ಈ ಕಿರುಚಿತ್ರ ತಯಾರಾಗಿದೆ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.