ಕೋಟೆ ನಾಡಲ್ಲಿ “ಮಳೆಬಿಲ್ಲು’ ಹಾಡು

ಕರಿಯಪ್ಪನ ಸೊಸೆಯ ಮೊದಲ ಚಿತ್ರ ರೆಡಿ

Team Udayavani, Jul 4, 2019, 3:00 AM IST

Malebillu

ಕನ್ನಡದಲ್ಲೀಗ ಸದ್ಯಕ್ಕೆ ಸಕ್ಸಸ್‌ಫ‌ುಲ್‌ ನಟಿಯಾಗಿ ಸ್ಟಾರ್‌ ಚಿತ್ರಗಳಲ್ಲಿ ಬ್ಯುಜಿ ಎನಿಸಿಕೊಂಡಿರುವ ಸಂಜನಾ ಆನಂದ್‌, ಈಗ ಸಂತಸದಲ್ಲಿದ್ದಾರೆ. ಅದಕ್ಕೆ ಕಾರಣ, ಅವರ ಅಭಿನಯದ ಮೊದಲ ಚಿತ್ರ “ಮಳೆಬಿಲ್ಲು’ ಈಗ ಬಿಡುಗಡೆಗೆ ಸಜ್ಜಾಗಿದೆ. ಹೌದು, ಹೊಸ ಪ್ರತಿಭೆಗಳೇ ಸೇರಿ ಮಾಡಿರುವ “ಮಳೆಬಿಲ್ಲು’ ಪ್ರೇಕ್ಷಕರ ಮುಂದೆ ಏಳು ಬಣ್ಣಗಳ ಅಂದವನ್ನು ಚೆಲ್ಲಲಿದೆ.

ಶೀರ್ಷಿಕೆ ಹೇಳುವಂತೆ, ಏಳು ಬಣ್ಣಗಳ ಸಮಾಗಮವನ್ನು ವ್ಯಕ್ತಿಯ ಬದುಕಿಗೆ ಹೋಲಿಸಿ ಹೆಣೆದಿರುವ ಕಥೆ ಈ ಚಿತ್ರದಲ್ಲಿದೆ. ಇನ್ನು, ಈ ಚಿತ್ರದ ಮೂಲಕ ನಾಗರಾಜ್‌ ಹಿರಿಯೂರು ನಿರ್ದೇಶಕರಾಗುತ್ತಿದ್ದಾರೆ. ಈಗ ಸ್ಟಾರ್‌ ಚಿತ್ರಗಳಲ್ಲಿ ನಟಿಸುತ್ತಿರುವ ಸಂಜನಾ ಆನಂದ್‌ ಅವರಿಗೆ ಇದು ಮೊದಲ ಚಿತ್ರ ಎಂಬುದು ವಿಶೇಷ.

ಅಂದಹಾಗೆ, ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಎಲ್ಲೆಡೆಯಿಂದ ಮೆಚ್ಚುಗೆ ಪಡೆದುಕೊಂಡಿದೆ. ಇದೇ ಖುಷಿಯಲ್ಲಿ ಚಿತ್ರದುರ್ಗದಲ್ಲಿ ಈ ವಾರ ಅದ್ಧೂರಿಯಾಗಿ ಚಿತ್ರದ ಆಡಿಯೋ ಬಿಡುಗಡೆ ಮಾಡಲು ನಿರ್ದೇಶಕರು ತಯಾರಿ ನಡೆಸುತ್ತಿದ್ದಾರೆ. ಚಿತ್ರದಲ್ಲಿ ಶರತ್‌, ಸಂಜನಾ, ನಯನಾ ಮುಖ್ಯ ಆಕರ್ಷಣೆಯಾಗಿದ್ದಾರೆ.

ಇನ್ನು, ನಿರ್ದೇಶಕ ನಾಗರಾಜ್‌ ಹಿರಿಯೂರು ಅವರ ಸಹೋದರ ನಿಂಗಪ್ಪ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರದ ನಾಯಕಿ ಸಂಜನಾ ಆನಂದ್‌, ಈ ಚಿತ್ರಕ್ಕೆ ಆಯ್ಕೆಯಾಗುವ ಮುನ್ನ ಆಡಿಷನ್‌ ಕೊಟ್ಟಿದ್ದರಂತೆ. ಆಡಿಷನ್‌ನಲ್ಲಿ ನಿರ್ದೇಶಕರಿಗೆ ಇಷ್ಟವಾಗಿದ್ದೇ ತಡ, ಸಂಜನಾ ಅವರು ಆಯ್ಕೆಯಾಗಿದ್ದಾರೆ.

ಆ ವೇಳೆಯಲ್ಲೇ ನಿರ್ದೇಶಕರು, ಸಂಜನಾ ಆನಂದ್‌ ಅವರಿಗೆ ಕನ್ನಡ ಚಿತ್ರರಂಗದಲ್ಲಿ ನೀನು ಬೆಳೆಯುತ್ತೀಯ ಎಂದು ಹೇಳಿದ್ದರಂತೆ. ಅದೀಗ ಮೆಲ್ಲನೆ ನಿಜವಾಗುತ್ತಿದೆ ಎಂಬುದು ಚಿತ್ರತಂಡದ ಮಾತು. ಸಂಜನಾ ಆನಂದ್‌ ಈಗ “ದುನಿಯಾ’ ವಿಜಯ್‌ ಜೊತೆ “ಸಲಗ’, ಅಜೇಯ್‌ರಾವ್‌ ಜೊತೆಗೆ ಇನ್ನೂ ಹೆಸರಿಡದ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದರೊಂದಿಗೆ ಶಿವರಾಜಕುಮಾರ್‌ ಪುತ್ರಿ ನಿರ್ಮಿಸುತ್ತಿರುವ “ಹನಿಮೂನ್‌’ ಎಂಬ ವೆಬ್‌ಸೀರೀಸ್‌ನಲ್ಲೂ ಕಾಣಿಸಿಕೊಂಡಿದ್ದಾರೆ.

“ಮಳೆಬಿಲ್ಲು ಚಿತ್ರದಲ್ಲಿ ಸಂಜನಾ ಅವರು ಭಾರ್ಗವಿ ಎಂಬ ಪಾತ್ರ ನಿರ್ವಹಿಸಿದ್ದಾರೆ. ಅದೊಂದು ರೀತಿಯ ಗಂಡುಬೀರಿಯಂತಹ ಪಾತ್ರ. ಸಂಭಾಷಣೆ ಕೂಡ ಸಖತ್‌ ಖಡಕ್‌ ಆಗಿಯೇ ಇರಲಿವೆ ಎನ್ನುವ ಚಿತ್ರತಂಡ, ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದೆ. ಚಿತ್ರದುರ್ಗದಲ್ಲಿ ಆಡಿಯೋ ಬಿಡುಗಡೆ ಮಾಡಿದ ಬಳಿಕ ಪ್ರೇಕ್ಷಕರ ಮುಂದೆ ಚಿತ್ರವನ್ನು ತರಲು ನಿರ್ದೇಶಕರು ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.