ರಚೆಲ್‌ ಎಂಬ ಮಲಯಾಳಿ ಸುಂದರಿ: ನವನಟಿಯ ಕೈ ತುಂಬಾ ಸಿನಿಮಾ


Team Udayavani, Apr 11, 2023, 12:37 PM IST

rachel david

ಕನ್ನಡ ಚಿತ್ರರಂಗಕ್ಕೆ ಪ್ರತಿ ವರ್ಷ ಬೇರೆ ಬೇರೆ ಭಾಷೆಗಳಿಂದ ನಾಯಕಿಯರು ಎಂಟ್ರಿಕೊಡುತ್ತಲೇ ಇರುತ್ತಾರೆ. ಹೀಗೆ ಬಂದ ನಟಿಯರು ಅನೇಕರು ಸ್ಯಾಂಡಲ್‌ವುಡ್‌ನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ ಕೂಡಾ. ಅದರಲ್ಲೂ ಮಲಯಾಳಂ ಮೂಲದ ನಟಿಯರಿಗೂ ಕನ್ನಡ ಚಿತ್ರರಂಗಕ್ಕೂ ಚೆನ್ನಾಗಿ ಕೂಡಿ ಬರುತ್ತದೆ. ಈಗಾಗಲೇ ಮಲಯಾಳಂನಿಂದ ಕನ್ನಡ ಚಿತ್ರರಂಗಕ್ಕೆ ನಾಯಕಿಯರಾಗಿ ಬಂದ ಅನೇಕ ನಟಿಯರು ಗಟ್ಟಿ ನೆಲೆಯೂರಿದ್ದಾರೆ. ಈಗ ಆ ಸಾಲಿಗೆ ಸೇರುವ ಮತ್ತೂಂದು ರಚೆಲ್‌ ಡೇವಿಡ್‌.

ಈ ಹೆಸರನ್ನು ನೀವು ಕೇಳಿರಬಹುದು. ನೀವು “ಲವ್‌ ಮಾಕ್ಟೇಲ್‌-2′ ಚಿತ್ರ ನೋಡಿದ್ದರೆ ಖಂಡಿತಾ ನಿಮಗೆ ಈ ಹೆಸರು ಹಾಗೂ ಮುಖ ನೆನಪಿಗೆ ಬರುತ್ತದೆ. ಕೇರಳ ಮೂಲದ ರಚೆಲ್‌ ಈಗ ಕನ್ನಡದಲ್ಲಿ ಬಿಝಿಯಾಗುತ್ತಿದ್ದಾರೆ.

ಈಗಾಗಲೇ ಪ್ರಮೋದ್‌ ನಾಯಕರಾಗಿರುವ “ಭುವನಂ ಗಗನಂ’, “ಅನ್‌ಲಾಕ್‌ ರಾಘವ’ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಇನ್ನೊಂದಿಷ್ಟು ಚಿತ್ರಗಳು ಕೈಯಲ್ಲಿವೆ. ಈ ಮೂಲಕ ರಚೆಲ್‌ ಕನ್ನಡ ಚಿತ್ರರಂಗದಲ್ಲಿ ಒಂದು ರೌಂಡ್‌ ಹಾಕುವ ಸಾಧ್ಯತೆಗಳಿವೆ. ಮಲಯಾಳಂ ಮೂಲದ ರಚೆಲ್‌ ಬೇರೆ ಭಾಷೆಯಲ್ಲಿ ಕೆಲಸ ಮಾಡುವ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ.

“ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಈಗ “ಭುವನಂ ಗಗನಂ’ ಸಿನಿಮಾದಲ್ಲೂ ಒಳ್ಳೆಯ ಪಾತ್ರ ಸಿಕ್ಕಿದೆ. ನಟಿಯರನ್ನು ತುಂಬಾ ಗೌರವದಿಂದ ನಡೆಸಿಕೊಳ್ಳುವ ಕನ್ನಡ ಚಿತ್ರರಂಗದಲ್ಲಿ ಮುಂದೆ ಮತ್ತಷ್ಟು ಸಿನಿಮಾ ಮಾಡುವ ಕನಸಿದೆ’ ಎನ್ನುವುದು ರಚೆಲ್‌ ಮಾತು.

“ನಾನು ಬಣ್ಣದ ಬದುಕಿಗೆ ಈಗಷ್ಟೇ ಕಾಲಿಟ್ಟಿದ್ದೇನೆ. ಈ ಅವಧಿ ನನಗೆ ಅನೇಕ ಅನುಭವಗಳನ್ನು ತಂದುಕೊಟ್ಟಿದೆ. ನಾನೊಬ್ಬಳು ನಟಿಯಾಗಬೇಕು ಎಂದು ಇಲ್ಲಿಗೆ ಬಂದಾಗಿನಿಂದ ಎಲ್ಲರೂ ಸಹಕಾರ ನೀಡುತ್ತ ಬಂದಿದ್ದಾರೆ. ಈ ಮೂರು ವರ್ಷಗಳು ಸಾಕಷ್ಟು ಒಳ್ಳೆಯ ಅನುಭವಗಳನ್ನು ಕೊಟ್ಟಿವೆ. ಪ್ರತಿದಿನ ಹೊಸದೇನಾದ್ರೂ ಕಲಿಯುತ್ತಿದ್ದೀನಿ. ಮೊದಲು ಚಿತ್ರರಂಗ ಹೊಸದಾಗಿದ್ದರಿಂದ, ಚಿತ್ರಗಳ ಆಯ್ಕೆ, ಪಾತ್ರಗಳ ಆಯ್ಕೆ ಬಗ್ಗೆ ನನಗೆ ಸ್ಪಷ್ಟತೆಯಿರಲಿಲ್ಲ. ಈಗ ಆ ಬಗ್ಗೆ ಒಂದಷ್ಟು ಅನುಭವ ಸಿಕ್ಕಿದೆ. ಚಿತ್ರಗಳ ಕಥೆ, ಪಾತ್ರಗಳ ಆಯ್ಕೆ, ಅದಕ್ಕೆ ತಯಾರಿ ಹೇಗಿರಬೇಕು ಅನ್ನೋದನ್ನ ಮೊದಲೇ ಪ್ಲಾನ್‌ ಮಾಡಿಕೊಳ್ಳುತ್ತೇನೆ.’ ಎನ್ನಲು ರಚೆಲ್‌ ಮರೆಯುವುದಿಲ್ಲ

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.