ಮಂಗಳವಾರ ರಜಾದಿನ!
Team Udayavani, Mar 20, 2018, 11:25 AM IST
ಕನ್ನಡದಲ್ಲಿ ಈಗಂತೂ ವಿಭಿನ್ನ ಶೀರ್ಷಿಕೆ ಇಟ್ಟುಕೊಂಡು ಚಿತ್ರಗಳು ಬರುತ್ತಲೇ ಇವೆ. ಅದರಲ್ಲೂ ಹೊಸಬರೇ ಅಂಥದ್ದೊಂದು ಹೊಸ ಪ್ರಯೋಗಕ್ಕೆ ಇಳಿಯುತ್ತಿದ್ದಾರೆ. ಈಗ ಆ ಸಾಲಿಗೆ “ಮಂಗಳವಾರ ರಜಾದಿನ’ ಎಂಬ ಚಿತ್ರವೂ ಸೇರಿದೆ. ಈ ಚಿತ್ರದ ಮೂಲಕ ಚಂದನ್ ಆಚಾರ್ ನಾಯಕರಾಗುತ್ತಿದ್ದಾರೆ. ಈ ಚಂದನ್ ಇದಕ್ಕೂ ಮುನ್ನ “ಕಿರಿಕ್ ಪಾರ್ಟಿ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದರು. ಈಗ ಮೊದಲ ಬಾರಿಗೆ ಅವರು ಹೀರೋ ಆಗುತ್ತಿದ್ದಾರೆ.
ಇನ್ನು ಅವರಿಗೆ ನಾಯಕಿಯಾಗಿ “ಬಿಗ್ ಬಾಸ್’ ಖ್ಯಾತಿಯ ಲಾಸ್ಯ ನಾಗರಾಜ್ ನಟಿಸುತ್ತಿದ್ದಾರೆ. “ಮಂಗಳವಾರ ರಜಾದಿನ’ ಚಿತ್ರಕ್ಕೆ ಯುವಿನ್ ನಿರ್ದೇಶಕರು. ಇವರಿಗೂ ಇದು ಮೊದಲ ನಿರ್ದೇಶನದ ಚಿತ್ರ. ಕಥೆ,ಚಿತ್ರಕಥೆ, ಸಂಭಾಷಣೆ ಇವರದೇ. ತ್ರಿವರ್ಗ ಫಿಲ್ಮ್ಸ್ ಬ್ಯಾನರ್ನಲ್ಲಿ ಟೀಮ್ ತ್ರಿವರ್ಗ ನಿರ್ಮಿಸುತ್ತಿರುವ ಈ ಚಿತ್ರ ಈಗಾಗಲೇ ಶುರುವಾಗಿದ್ದು, ಮೊದಲ ಹಂತದ ಚಿತ್ರೀಕರಣವೂ ಮುಗಿದಿದೆ.
ಪಕ್ಕಾ ಹಾಸ್ಯ ಪ್ರಧಾನ ಚಿತ್ರವಾಗಿರುವ ಈ ಚಿತ್ರದ ನಿರ್ದೇಶಕ ಯುವಿನ್ ಈ ಹಿಂದೆ ಯೋಗರಾಜ್ಭಟ್ ಮತ್ತು ಗಡ್ಡ ವಿಜಿ ಬಳಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಅದೇ ಅನುಭವದ ಮೇಲೆ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಯೂಥ್ಫುಲ್ ಸಿನಿಮಾ ಆಗಿದ್ದು, ಪಕ್ಕಾ ಹಾಸ್ಯಪ್ರಧಾನವುಳ್ಳ ಕಥೆಯಾಗಿದ್ದು, ನಾಯಕನ ಜೀವನದ ಸುತ್ತ ಕಥೆ ಸಾಗಲಿದೆ ಎಂಬುದು ಚಿತ್ರತಂಡದ ಹೇಳಿಕೆ.
ಚಿತ್ರಕ್ಕೆ ಉದಯ್ಲೀಲಾ ಅವರು ಛಾಯಾಗ್ರಾಹಕರು. ಪ್ರಚೋತ್ ಡಿಸೋಜ ಅವರ ಸಂಗೀತವಿದೆ. ಜಯಂತ್ ಕಾಯ್ಕಿಣಿ, ಚಂದನ್ ಶೆಟ್ಟಿ, ಯೋಗರಾಜ್ ಭಟ್ ಚಿತ್ರಕ್ಕೆ ಗೀತೆಗಳನ್ನು ರಚಿಸಿದ್ದಾರೆ. ಮಧುಕುಮಾರ್ ಅವರು ಚಿತ್ರಕ್ಕೆ ಸಂಕಲನ ಮಾಡಿದರೆ, ಸುಧೀರ್ ನಿರ್ಮಾಣ ನಿರ್ವಹಣೆ ವಹಿಸಿಕೊಂಡಿದ್ದಾರೆ. ಚಿತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳುತ್ತಿದ್ದಾರೆ. ಈಗ ಬೆಂಗಳೂರು ಸುತ್ತಮುತ್ತಲಿನ ತಾಣಗಳಲ್ಲಿ ಎರಡನೇ ಹಂತದ ಚಿತ್ರೀಕರಣ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ