ಮಣಿಕರ್ಣಿಕಾ ಫಿಲ್ಮ್ ಫೆಸ್ಟಿವಲ್ ನಲ್ಲೂ ಸಿಕ್ತು ಬನಾರಸ್ ಗೆ ಅಬ್ಬರದ ಪ್ರಚಾರ

ಝೈದ್ ಖಾನ್ ಮತ್ತು ಸೋನಲ್ ಗೆ ಸಂಜಯ್ ಮಿಶ್ರಾ ಸನ್ಮಾನ

Team Udayavani, Oct 18, 2022, 11:35 AM IST

ಮಣಿಕರ್ಣಿಕಾ ಫಿಲ್ಮ್ ಫೆಸ್ಟಿವಲ್ ನಲ್ಲೂ ಸಿಕ್ತು ಬನಾರಸ್ ಗೆ ಅಬ್ಬರದ ಪ್ರಚಾರ

ಚಿತ್ರದ ಕಥೆ, ನಿರ್ದೇಶನ, ಶೂಟಿಂಗ್ ಸ್ಪಾಟ್, ತಾರಾಗಣ, ಹಾಡುಗಳು, ಮೇಕಿಂಗ್, ತಾಂತ್ರಿಕತೆ, ಸಂಕಲನ ಹೀಗೆ ಸಾಕಷ್ಟು ವಿಷಯಗಳಿಂದ ನೋಡಲೇ ಬೇಕಾದ ನಿರೀಕ್ಷಿತ ಸಿನೆಮಾಗಳ ಪಟ್ಟಿಯಲ್ಲಿ ಬನಾರಸ್ ಸೇರಿಕೊಂಡಿದೆ. ಈ ಚಿತ್ರ ಪಂಚ ಭಾಷೆಗಳಲ್ಲೂ ಇದೇ ಕುತೂಹಲವನ್ನ ಕಾಪಾಡಿಕೊಂಡು ಬಂದಿದೆ.

ನವೆಂಬರ್ 4 ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ಪಂಚ ಭಾಷೆಗಳಲ್ಲೂ ರಿಲೀಸ್ ಆಗ್ತಿರುವ ಬನಾರಸ್ ಚಿತ್ರತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಮಣಿಕರ್ಣಿಕಾ ಫಿಲ್ಮ್ ಫೆಸ್ಟಿವಲ್ ನಲ್ಲೂ ಬನಾರಸ್ ಪ್ರಚಾರಕ್ಕೆ ಇಂಬು ದೊರಕಿದಂತಾಗಿದೆ.

ಹೌದು ಬೇರೆ ಬೇರೆ ರಾಜ್ಯಗಳ ಸುತ್ತಿ, ಧಾರ್ಮಿಕ ಕ್ಷೇತ್ರಗಳಿಗೂ ಭೇಟಿ ಕೊಡುತ್ತಾ ತಮ್ಮ ಸಿನೆಮಾ ಪ್ರಚಾರದಲ್ಲಿ ಮಗ್ನರಾಗಿದ್ದ ಬನಾರಸ್ ಜೋಡಿ ಝೈದ್ ಖಾನ್ ಹಾಗೂ ಸೋನಲ್ ಮೊಂತೆರೋ ಗೆ ಪ್ರಸಿದ್ಧ ಮಣಿಕರ್ಣಿಕಾ ಫಿಲ್ಮ್ ಫೆಸ್ಟಿವಲ್ ನಲ್ಲಿ ಪಾಲ್ಗೊಂಡು ತಮ್ಮ ಸಿನೆಮಾ ಪ್ರಚಾರದೊಂದಿಗೆ , ಬಾಲಿವುಡ್ ಹಿರಿಯ ನಟ ಸಂಜಯ್ ಮಿಶ್ರಾ ರಿಂದ ಸನ್ಮಾನ ಸ್ವೀಕರಿಸುವ ಭಾಗ್ಯ ಒಲಿದು ಬಂದಿದೆ.

ಹೌದು ಪ್ರಚಾರ ಕಾರ್ಯದ ನಿಮಿತ್ತ ವಾರಣಾಸಿಗೆ ಬಂದಿಳಿದ ಬನಾರಸ್ ಜೋಡಿಗೆ, ಇದೇ ಮೊದಲ ಬಾರಿಗೆ ವಾರಣಾಸಿಯಲ್ಲಿ ನಡೆಯುತ್ತಿರುವ ಮಣಿಕರ್ಣಿಕಾ ಫಿಲ್ಮ್ ಫೆಸ್ಟಿವಲ್ ನಲ್ಲಿ ಭಾಗಿಯಾಗುವ ಆಹ್ವಾನ ದೊರಕಿತ್ತು. ಜೊತೆಗೆ ಆ ಕಾರ್ಯಕ್ರಮವನ್ನು ಬಾಲಿವುಡ್ ನ ಹಿರಿಯ ನಟ ಸಂಜಯ್ ಮಿಶ್ರಾ ಉದ್ಘಾಟಿಸಿ, ಬಳಿಕ ಅವರೇ ಖುದ್ದಾಗಿ ಬನಾರಸ್ ಜೋಡಿಯನ್ನು ಸನ್ಮಾನಿಸಿದ್ದಾರೆ. ಬಾಲಿವುಡ್ ನಲ್ಲೂ ಈಗಾಗಲೇ ಸದ್ದು ಮಾಡಿರುವ ಬನಾರಸ್ ಗೆ  ಗೆಲುವಾಗಲೆಂದು  ಶುಭ ಹಾರೈಸಿದ್ದಾರೆ. ಸಂಜಯ್ ಮಿಶ್ರಾ ಬಾಲಿವುಡ್ ಚಿತ್ರಗಳಲ್ಲಿ ನಟಿಸಿರುವ ಪ್ರತಿಭಾವಂತ ಹಿರಿಯ ನಟ. ದೂರದರ್ಶನವೂ ಸೇರಿದಂತೆ ಅನೇಕ ಭೂಮಿಕೆಗಳಲ್ಲಿ ಪ್ರಸಿದ್ಧಿ ಪಡೆದುಕೊಂಡಿರುವ ಮಿಶ್ರಾ ಬನಾರಸ್ ಬಗ್ಗೆ ಭರವಸೆಯ ಮಾತುಗಳನ್ನಾಡಿರೋದು, ನವನಾಯಕ ಝೈದ್ ಖಾನ್ ಅವರಿಗೆ ಹೊಸಾ ಚೈತನ್ಯ  ನೀಡಿದಂತಾಗಿದೆ.

ಒಂದೊಳ್ಳೆ ಟರ್ನಿಂಗ್ ಅಂಡ್ ಟ್ವಿಸ್ಟ್ ಹೊಂದಿರೋ ಪ್ರೇಮಕಥಾನಕ ಚಿತ್ರವೇ ಈ ಬನಾರಸ್. ಚಿತ್ರಕ್ಕೆ ಜಯತೀರ್ಥ ಆ್ಯಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತ ಈಗಾಗಲೇ ಮೋಡಿ ಮಾಡಿದ್ದಾಗಿದೆ. ಇನ್ನುಳಿದಂತೆ ತಿಲಕ್ ರಾಜ್ ಬಲ್ಲಾಳ್ ನಿರ್ಮಾಣದೊಂದಿಗೆ ಮೂಡಿ ಬಂದಿರುವ ಬನಾರಸ್ ಗೆ ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಹರ್ಷ ನೃತ್ಯ ನಿರ್ದೇಶನ ಹಾಗೂ ವಿಜಯ್ ಮಾಸ್ಟರ್, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ರಘು ನಿಡುವಳ್ಳಿ ಸಂಭಾಷಣೆ ಇರುವ ಚಿತ್ರದ ತಾರಬಳಗ ದೇವರಾಜ್, ಅಚ್ಯುತ ಕುಮಾರ್, ಸುಜಯ್ ಶಾಸ್ತ್ರಿ, ಸ್ವಪ್ನ ರಾಜ್, ಬರ್ಕತ್ ಆಲಿ, ಚಿರಂತ್, ರೋಹಿತ್ ಸೇರಿದಂತೆ ಹಲವು ಕಲಾವಿದರ ಶ್ರಮ ನವೆಂಬರ್ 4 ರಂದು ದೇಶಾದ್ಯಂತ ಸಿನಿಪ್ರಿಯರ ಮುಂದೆ ಅನಾವರಣಗೊಳ್ಳಲಿದೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.