ಮನೋರಂಜನ್‌ ಹೊಸ ಚಿತ್ರ ಪ್ರಾರಂಭ


Team Udayavani, Dec 11, 2018, 11:55 AM IST

manoranjan.jpg

ಮನೋರಂಜನ್‌ ರವಿಚಂದ್ರನ್‌ “ಸಾಹೇಬ’, “ಬೃಹಸ್ಪತಿ’ ನಂತರ ಯಾವ ಚಿತ್ರ ಒಪ್ಪಿಕೊಂಡಿದ್ದಾರೆ ಎಂಬ ಪ್ರಶ್ನೆಗೆ “ಚಿಲಂ’ ಚಿತ್ರ ಉತ್ತರವಾಗಿತ್ತು. ಅವರೀಗ ಮತ್ತೂಂದು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಆ ಚಿತ್ರಕ್ಕೆ “ಪ್ರಾರಂಭ’ ಎಂಬ ಹೆಸರಿಡಲಾಗಿದೆ. ಈ ಹಿಂದೆ ಒಂದಷ್ಟು ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಮನು ಕಲ್ಯಾಡಿ ಅವರು ಈ ಚಿತ್ರದ ನಿರ್ದೇಶಕರು. ಇದು ಅವರ ಮೊದಲ ನಿರ್ದೇಶನದ ಚಿತ್ರ.

ಇನ್ನು, ಅವರ ಸಹೋದರ ಜಗದೀಶ್‌ ಕಲ್ಯಾಡಿ ಚಿತ್ರದ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. “ಪ್ರಾರಂಭ’ ಚಿತ್ರಕ್ಕೆ ಜನವರಿ 14 ರಿಂದ ಚಾಲನೆ ಸಿಗಲಿದೆ. ಇದೊಂದು ಪಕ್ಕಾ ಲವ್‌ಸ್ಟೋರಿ ಚಿತ್ರ. ಆದರೂ, ಈಗಿನ ಟ್ರೆಂಡ್‌ಗೆ ತಕ್ಕಂತೆ ಇರುವ ಕಥೆ ಹೆಣೆದು, ವಿಭಿನ್ನ ನಿರೂಪಣೆಯೊಂದಿಗೆ “ಪ್ರಾರಂಭಿ’ಸುತ್ತಿರುವುದಾಗಿ ಹೇಳುತ್ತಾರೆ ಮನು. “ಮನೋರಂಜನ್‌ ಅವರಿಲ್ಲಿ ಹೊಸ ರೀತಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಸಾಕಷ್ಟು ಹೊಸತನ ಚಿತ್ರದಲ್ಲಿದೆ.

ಎರಡು ಭರ್ಜರಿ ಫೈಟ್ಸ್‌ಗಳಿದ್ದು, ಸಂಭಾಷಣೆಗೆ ಹೆಚ್ಚು ಒತ್ತು ಕೊಡಲಾಗಿದೆ. ಮಾತುಗಳಲ್ಲಿ ಫೊರ್ಸ್‌ ಇರಲಿದ್ದು, ಮಾಸ್‌ ಮತ್ತು ಕ್ಲಾಸ್‌ ಜನರಿಗೆ ಇಷ್ಟವಾಗುವಂತಹ ಮಾತುಗಳನ್ನು ಪೋಣಿಸಲಾಗಿದೆ ಎಂಬುದು ನಿರ್ದೇಶಕರ ಮಾತು. ಇನ್ನು, ಮನೋರಂಜನ್‌ ಅವರಿಗೆ ಕೀರ್ತಿ ಎಂಬ ಹೊಸ ಹುಡುಗಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೂಲತಃ ಹುಬ್ಬಳ್ಳಿ ಹುಡುಗಿಯಾಗಿರುವ ಕೀರ್ತಿ ಅವರಿಗೂ ಇದು ಮೊದಲ ಚಿತ್ರ.

ಸುಮಾರು 55 ದಿನಗಳ ಕಾಲ ಮೈಸೂರು, ಬೆಂಗಳೂರು, ಚಿಕ್ಕಮಗಳೂರು ಹಾಗು ಬಳ್ಳಾರಿ ಸೇರಿದಂತೆ ಇತರೆ ಕಡೆ ಚಿತ್ರೀಕರಣ ನಡೆಸುವ ಯೋಚನೆ ಇದೆ’ ಎಂದು ವಿವರ ಕೊಡುತ್ತಾರೆ ಮನು ಕಲ್ಯಾಡಿ. ಚಿತ್ರದಲ್ಲಿ ಶ್ರೀನಿವಾಸಪ್ರಭು, ಕಡ್ಡಿಪುಡಿ ಚಂದ್ರ ಸೇರಿದಂತೆ ದೊಡ್ಡ ಕಲಾವಿದರ ದಂಡು ಕಾಣಿಸಿಕೊಳ್ಳಲಿದೆ. ಈ ಹಿಂದೆ “ಉಪ್ಪು ಹುಳಿ ಖಾರ’ ಚಿತ್ರಕ್ಕೆ ಸಂಗೀತ ನೀಡಿದ್ದ ಪ್ರಜ್ವಲ್‌ ಪೈ ಅವರು ಈ ಚಿತ್ರಕ್ಕೂ ಸಂಗೀತ ನೀಡುತ್ತಿದ್ದು,

ನಾಲ್ಕು ಹಾಡುಗಳಿಗೆ ಸಂತೋಷ್‌ ನಾಯಕ್‌ ಅವರು ಗೀತೆ ರಚಿಸುತ್ತಿದ್ದಾರೆ. ಸುರೇಶ್‌ ಬಾಬು ಅವರಿಲ್ಲಿ ಛಾಯಾಗ್ರಹಣ ಮಾಡಲಿದ್ದಾರೆ. ವಿಜಯ್‌ ಎಂ.ಕುಮಾರ್‌ ಸಂಕಲನ ಮಾಡಿದರೆ, ರವಿ ಸಂತೆಹೈಕ್ಲು ಅವರ ಕಲಾನಿರ್ದೇಶನ ಚಿತ್ರಕ್ಕಿದೆ. ಅಂದಹಾಗೆ, ಡಿ.11 (ಇಂದು) ಮನೋರಂಜನ್‌ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ “ಪ್ರಾರಂಭ’ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡುವ ತಯಾರಿ ಮಾಡಿಕೊಂಡಿದೆ ಚಿತ್ರತಂಡ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.