ಕಾಡುವ `ಮನರೂಪ’ದ ಮತ್ತೊಂದು ಪೋಸ್ಟರ್!


Team Udayavani, Oct 23, 2019, 12:26 PM IST

23-October-7

ತಿಂಗಳುಗಳ ಹಿಂದೆ ಮನರೂಪ ಎಂಬ ಚಿತ್ರ ಮೋಷನ್ ಪೋಸ್ಟರ್‌ನೊಂದಿಗೆ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಕಿರಣ್ ಹೆಗ್ಡೆ ನಿರ್ದೇಶನದ ಚೊಚ್ಚಲ ಚಿತ್ರವಾದ ಮನರೂಪ, ಕಾಡನ್ನು ಸೀಳಿಕೊಂಡು ಹೋಗುತ್ತಿರೋ ಕಾರೊಂದರ ಹೆಡ್‌ಲೈಟಿನ ಬೆಳಕಲ್ಲಿಯೇ ಕರಡಿ ಗುಡ್ಡವೆಂಬ ನಿಗೂಢ ಕಥೆಯೊಂದರ ಹೊಳಹು ನೀಡಿತ್ತು. ಇದರೊಂದಿಗೇ ಜಾಹೀರಾಗಿದ್ದ ಒಂದಷ್ಟು ವಿಚಾರಗಳೇ ಮನರೂಪದ ಬಗ್ಗೆ ಪ್ರೇಕ್ಷಕರೆಲ್ಲರೂ ಆಕರ್ಷಿತರಾಗುವಂತೆ, ಮೋಹಗೊಳ್ಳುವಂತಾಗಿತ್ತು. ಇದೀಗ ಮನರೂಪದ ಮತ್ತೊಂದು ಪೋಸ್ಟರ್ ಲಾಂಚ್ ಆಗಿದೆ.

ಹೆಡ್ ಲೈಟ್ ಕಟ್ಟಿಕೊಂಡು ಗುಹೆಯೊಂದರಲ್ಲಿ ತೆವಳುತ್ತಿರುವಂಥಾ ಚಿತ್ರವಿರೋ ಈ ಪೋಸ್ಟರ್ ಮನೋರೂಪದ ಮತ್ತೊಂದು ಮಗ್ಗುಲನ್ನೂ ಪ್ರೇಕ್ಷಕರೆದುರು ತೆರೆದಿಟ್ಟಿದೆ. ಈ ಹಿಂದೆ ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದ್ದ ಚಿತ್ರತಂಡ ಕಥೆಯ ಬಗ್ಗೆ ಒಂದಷ್ಟು ರೋಚಕ ವಿಚಾರಗಳನ್ನು ಹಂಚಿಕೊಂಡಿತ್ತು. ಅದರಲ್ಲಿ ಪ್ರೇಕ್ಷಕರನ್ನು ಪ್ರಧಾನವಾಗಿ ಸೆಳೆದುಕೊಂಡಿದ್ದದ್ದು ಕರಡಿ ಗುಹೆ ಎಂಬ ಉಲ್ಲೇಖ. ಕರಡಿ ಗುಹೆ ಅತ್ಯಂತ ಡೇಂಜರಸ್ ಪ್ರದೇಶ. ಇಂಥಾ ಏರಿಯಾಕ್ಕೆ ಚಾರಣ ಹೊರಡೋ ಸ್ನೇಹಿತರ ಕಥೆ ಇಲ್ಲಿದೆ ಎಂಬ ವಿಚಾರವನ್ನು ಚಿತ್ರತಂಡ ಜಾಹೀರು ಮಾಡಿತ್ತು.

ಇದೀಗ ಬಿಡುಗಡೆಗೊಂಡಿರೋ ಪೋಸ್ಟರ್ ಕರಡಿ ಗುಹೆಯ ನಿಗೂಢಕ್ಕೆ ಹೆಡ್‌ಲೈಟ್ ಬಿಡುವ ಪ್ರಯತ್ನ ಮಾಡಿದೆ. ಬಹುಶಃ ಅದು ಆ ವ್ಯಕ್ತಿ ಕರಡಿ ಗುಹೆಯಲ್ಲಿಯೇ ತೆವಳುತ್ತಿರೋ ಚಿತ್ರಣ ಇದ್ದಿರಬಹುದು. ದಿಲೀಪ್ ಕುಮಾರ್, ಅನೂಷಾ ರಾವ್, ಆರ್ಯನ್, ನಿಶಾ ಬಿ. ಆರ್. ಶಿವ ಪ್ರಸಾದ್, ಅಮೋಘ್ ಸಿದ್ಧಾರ್ಥ್, ಪ್ರಜ್ವಲ್ ಗೌಡ, ಗಜಾ ನೀನಾಸಂ, ರಮಾನಂದ ಐನಕೈ, ಯಶೋದಾ ಹೊಸಕಟ್ಟ, ಪವನ್ ಕಲ್ಮನೆ ಮುಂತಾದವರು ಅಭಿನಯಿಸಿದ್ದಾರೆ. ಗೋವಿಂದ ರಾಜ್ ಛಾಯಾಗ್ರಹಣ, ಸೂರಿ ಮತ್ತು ಲೋಕಿ ಸಂಕಲನ, ಸರ್ವಣ ಅವರ ಸಂಗೀತ, ಹುಲಿವಾನ್ ನಾಗರಾಜ್ ಅವರ ಸೌಂಡ್, ಮಹಾಬಲ ಸೀತಾಳಭಾವಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ.

ಚಿತ್ರತಂಡ ಇದುವರೆಗೂ ಬಿಚ್ಚಿಟ್ಟಿರುವ ಅಂಶಗಳನ್ನು ಗಮನಿಸುತ್ತಿದ್ದರೆ ಇದೊಂದು ಅಪರೂಪದ ಕಥಾ ಹಂದರ ಹೊಂದಿರೋ ಸಿನಿಮಾ ಎಂಬ ವಿಚಾರ ಯಾರಿಗಾದರೂ ಅರ್ಥವಾಗುತ್ತದೆ. ತುಂಬಾ ವರ್ಷಗಳ ನಂತರ ದೂರವಿದ್ದ ಗೆಳೆಯರು ಒಂದು ಸಲ ಸಂಧಿಸಿ ಕರಡಿಗುಡ್ಡ ಪ್ರದೇಶದತ್ತ ಚಾರಣ ಹೊರಡೋ ಕಥೆ ಇಲ್ಲಿದೆ. ಇಂಥಾ ಕಥೆಗಳು ಹಾರರ್ ಸನ್ನಿವೇಷಗಳತ್ತಲೇ ಹೆಚ್ಚಾಗಿ ಫೋಕಸ್ ಮಾಡುತ್ತವೆ. ಆದರೆ ಇಲ್ಲಿ ಜನರೇಷನ್ನಿನಿಂದ ಜನರೇಷನ್ನಿಗೆ ಆಗಿರುವಂಥಾ ಭಯಾನಕ ಬದಲಾವಣೆಯ ಮನೋಲೋಕವನ್ನು ತೆರೆದಿಡುವಂತಿದೆಯಂತೆ. ಕರಡಿ ಗುಹೆಯಲ್ಲಿ ಎದುರಾಗೋ ರೋಚಕ ಸನ್ನಿವೇಶಗಳಿಗೆ ಈ ಗೆಳೆಯರ ಗುಂಪು ಪ್ರತಿಕ್ರಿಯೆ ನೀಡೋ ರೀತಿಯಲ್ಲಿಯೇ ಒಂದಿಡೀ ಜನರೇಷನ್ನಿನ ಮನೋಲೋಕ ತೆರೆದುಕೊಳ್ಳಲಿದೆ ಅಂದ ಮೇಲೆ ಈ ಸಿನಿಮಾದತ್ತ ಬೆರಗಾಗದಿರಲು ಸಾಧ್ಯವೇ?

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.