ಕಾಡುವ `ಮನರೂಪ’ದ ಮತ್ತೊಂದು ಪೋಸ್ಟರ್!


Team Udayavani, Oct 23, 2019, 12:26 PM IST

23-October-7

ತಿಂಗಳುಗಳ ಹಿಂದೆ ಮನರೂಪ ಎಂಬ ಚಿತ್ರ ಮೋಷನ್ ಪೋಸ್ಟರ್‌ನೊಂದಿಗೆ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಕಿರಣ್ ಹೆಗ್ಡೆ ನಿರ್ದೇಶನದ ಚೊಚ್ಚಲ ಚಿತ್ರವಾದ ಮನರೂಪ, ಕಾಡನ್ನು ಸೀಳಿಕೊಂಡು ಹೋಗುತ್ತಿರೋ ಕಾರೊಂದರ ಹೆಡ್‌ಲೈಟಿನ ಬೆಳಕಲ್ಲಿಯೇ ಕರಡಿ ಗುಡ್ಡವೆಂಬ ನಿಗೂಢ ಕಥೆಯೊಂದರ ಹೊಳಹು ನೀಡಿತ್ತು. ಇದರೊಂದಿಗೇ ಜಾಹೀರಾಗಿದ್ದ ಒಂದಷ್ಟು ವಿಚಾರಗಳೇ ಮನರೂಪದ ಬಗ್ಗೆ ಪ್ರೇಕ್ಷಕರೆಲ್ಲರೂ ಆಕರ್ಷಿತರಾಗುವಂತೆ, ಮೋಹಗೊಳ್ಳುವಂತಾಗಿತ್ತು. ಇದೀಗ ಮನರೂಪದ ಮತ್ತೊಂದು ಪೋಸ್ಟರ್ ಲಾಂಚ್ ಆಗಿದೆ.

ಹೆಡ್ ಲೈಟ್ ಕಟ್ಟಿಕೊಂಡು ಗುಹೆಯೊಂದರಲ್ಲಿ ತೆವಳುತ್ತಿರುವಂಥಾ ಚಿತ್ರವಿರೋ ಈ ಪೋಸ್ಟರ್ ಮನೋರೂಪದ ಮತ್ತೊಂದು ಮಗ್ಗುಲನ್ನೂ ಪ್ರೇಕ್ಷಕರೆದುರು ತೆರೆದಿಟ್ಟಿದೆ. ಈ ಹಿಂದೆ ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದ್ದ ಚಿತ್ರತಂಡ ಕಥೆಯ ಬಗ್ಗೆ ಒಂದಷ್ಟು ರೋಚಕ ವಿಚಾರಗಳನ್ನು ಹಂಚಿಕೊಂಡಿತ್ತು. ಅದರಲ್ಲಿ ಪ್ರೇಕ್ಷಕರನ್ನು ಪ್ರಧಾನವಾಗಿ ಸೆಳೆದುಕೊಂಡಿದ್ದದ್ದು ಕರಡಿ ಗುಹೆ ಎಂಬ ಉಲ್ಲೇಖ. ಕರಡಿ ಗುಹೆ ಅತ್ಯಂತ ಡೇಂಜರಸ್ ಪ್ರದೇಶ. ಇಂಥಾ ಏರಿಯಾಕ್ಕೆ ಚಾರಣ ಹೊರಡೋ ಸ್ನೇಹಿತರ ಕಥೆ ಇಲ್ಲಿದೆ ಎಂಬ ವಿಚಾರವನ್ನು ಚಿತ್ರತಂಡ ಜಾಹೀರು ಮಾಡಿತ್ತು.

ಇದೀಗ ಬಿಡುಗಡೆಗೊಂಡಿರೋ ಪೋಸ್ಟರ್ ಕರಡಿ ಗುಹೆಯ ನಿಗೂಢಕ್ಕೆ ಹೆಡ್‌ಲೈಟ್ ಬಿಡುವ ಪ್ರಯತ್ನ ಮಾಡಿದೆ. ಬಹುಶಃ ಅದು ಆ ವ್ಯಕ್ತಿ ಕರಡಿ ಗುಹೆಯಲ್ಲಿಯೇ ತೆವಳುತ್ತಿರೋ ಚಿತ್ರಣ ಇದ್ದಿರಬಹುದು. ದಿಲೀಪ್ ಕುಮಾರ್, ಅನೂಷಾ ರಾವ್, ಆರ್ಯನ್, ನಿಶಾ ಬಿ. ಆರ್. ಶಿವ ಪ್ರಸಾದ್, ಅಮೋಘ್ ಸಿದ್ಧಾರ್ಥ್, ಪ್ರಜ್ವಲ್ ಗೌಡ, ಗಜಾ ನೀನಾಸಂ, ರಮಾನಂದ ಐನಕೈ, ಯಶೋದಾ ಹೊಸಕಟ್ಟ, ಪವನ್ ಕಲ್ಮನೆ ಮುಂತಾದವರು ಅಭಿನಯಿಸಿದ್ದಾರೆ. ಗೋವಿಂದ ರಾಜ್ ಛಾಯಾಗ್ರಹಣ, ಸೂರಿ ಮತ್ತು ಲೋಕಿ ಸಂಕಲನ, ಸರ್ವಣ ಅವರ ಸಂಗೀತ, ಹುಲಿವಾನ್ ನಾಗರಾಜ್ ಅವರ ಸೌಂಡ್, ಮಹಾಬಲ ಸೀತಾಳಭಾವಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ.

ಚಿತ್ರತಂಡ ಇದುವರೆಗೂ ಬಿಚ್ಚಿಟ್ಟಿರುವ ಅಂಶಗಳನ್ನು ಗಮನಿಸುತ್ತಿದ್ದರೆ ಇದೊಂದು ಅಪರೂಪದ ಕಥಾ ಹಂದರ ಹೊಂದಿರೋ ಸಿನಿಮಾ ಎಂಬ ವಿಚಾರ ಯಾರಿಗಾದರೂ ಅರ್ಥವಾಗುತ್ತದೆ. ತುಂಬಾ ವರ್ಷಗಳ ನಂತರ ದೂರವಿದ್ದ ಗೆಳೆಯರು ಒಂದು ಸಲ ಸಂಧಿಸಿ ಕರಡಿಗುಡ್ಡ ಪ್ರದೇಶದತ್ತ ಚಾರಣ ಹೊರಡೋ ಕಥೆ ಇಲ್ಲಿದೆ. ಇಂಥಾ ಕಥೆಗಳು ಹಾರರ್ ಸನ್ನಿವೇಷಗಳತ್ತಲೇ ಹೆಚ್ಚಾಗಿ ಫೋಕಸ್ ಮಾಡುತ್ತವೆ. ಆದರೆ ಇಲ್ಲಿ ಜನರೇಷನ್ನಿನಿಂದ ಜನರೇಷನ್ನಿಗೆ ಆಗಿರುವಂಥಾ ಭಯಾನಕ ಬದಲಾವಣೆಯ ಮನೋಲೋಕವನ್ನು ತೆರೆದಿಡುವಂತಿದೆಯಂತೆ. ಕರಡಿ ಗುಹೆಯಲ್ಲಿ ಎದುರಾಗೋ ರೋಚಕ ಸನ್ನಿವೇಶಗಳಿಗೆ ಈ ಗೆಳೆಯರ ಗುಂಪು ಪ್ರತಿಕ್ರಿಯೆ ನೀಡೋ ರೀತಿಯಲ್ಲಿಯೇ ಒಂದಿಡೀ ಜನರೇಷನ್ನಿನ ಮನೋಲೋಕ ತೆರೆದುಕೊಳ್ಳಲಿದೆ ಅಂದ ಮೇಲೆ ಈ ಸಿನಿಮಾದತ್ತ ಬೆರಗಾಗದಿರಲು ಸಾಧ್ಯವೇ?

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.