ಬಿಝಿ ಫೆಬ್ರವರಿ: ಸ್ಟಾರ್ಸ್ ಮೊದಲು ಹೊಸಬರ ಅಬ್ಬರ


Team Udayavani, Jan 15, 2021, 4:39 PM IST

prajwal

ಚಿತ್ರರಂಗ ದೊಡ್ಡ ಮಟ್ಟದಲ್ಲೇ ತೆರೆದುಕೊಳ್ಳುವ ಲಕ್ಷಣಗಳು ಕಾಣುತ್ತಿವೆ. ಈಗಾಗಲೇ ಸ್ಟಾರ್‌ಗಳ ಸಿನಿಮಾ ಬಿಡುಗಡೆಯ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಜನವರಿ 29 ಅಥವಾ ಫೆಬ್ರವರಿ ಮೊದಲ ವಾರ ತೆರೆಕಾಣಲಿದೆ. ಮಾರ್ಚ್‌ 11ರಂದು ದರ್ಶನ್‌ ನಟನೆಯ “ರಾಬರ್ಟ್‌’, ಏಪ್ರಿಲ್‌ 1ರಂದು “ಯುವರತ್ನ’ ಹಾಗೂ ಏಪ್ರಿಲ್‌ 23ರಂದು “ಕೋಟಿಗೊಬ್ಬ-3′ ತೆರೆಗೆ ಬರಲಿದೆ. ಇದು ಮಾರ್ಚ್‌, ಏಪ್ರಿಲ್‌ ಕಥೆಯಾದರೆ, ಫೆಬ್ರವರಿಯದ್ದು ಮತ್ತೂಂದು ಕಥೆ ಇದೆ. ಅದು ಹೊಸಬರ ಹಾಗೂ ಇತರ ನಾಯಕ ನಟರ ಸಿನಿಹಬ್ಬ.

ಹೌದು, ಫೆಬ್ರವರಿಯಲ್ಲಿ ಸಾಕಷ್ಟು ಸಿನಿಮಾಗಳು ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಳೆದ ವರ್ಷ ಫೆಬ್ರವರಿಯಲ್ಲಿ ಸಿನಿಟ್ರಾಫಿಕ್‌ ಜೋರಾಗಿತ್ತು. ಈ ವರ್ಷ ಅದು ಮತ್ತೆ ರಿಪೀಟ್‌ ಆಗುವ ಸಾಧ್ಯತೆ ಇದೆ. ಫೆಬ್ರವರಿಯಲ್ಲಿ ಪ್ರಜ್ವಲ್‌ ಅಭಿನಯದ “ಇನ್ಸ್‌ಪೆಕ್ಟರ್‌ ವಿಕ್ರಂ’, ಅಜೇಯ್‌ ರಾವ್‌ ನಟನೆಯ “ಕೃಷ್ಣ ಟಾಕೀಸ್‌’, “ಚಡ್ಡಿದೋಸ್ತ್’, “ಮಾಂಜ್ರಾ’, “ಮಂಗಳವಾರ ರಜಾದಿನ’, “ರಾಮಾರ್ಜುನ’ …. ಸೆನ್ಸಾರ್‌ ಆಗಿರುವ ಸಾಕಷ್ಟು ಸಿನಿಮಾಗಳು ಫೆಬ್ರವರಿಯಲ್ಲಿ ತೆರೆಗೆ ಬರುವ ಸಿದ್ಧತೆಯಲ್ಲಿವೆ.

ಫೆಬ್ರವರಿಯಲ್ಲೇ ಯಾಕೆ?

ಸಹಜವಾಗಿಯೇ ಒಂದು ಪ್ರಶ್ನೆ ಎದುರಾಗುತ್ತದೆ. ಅದೇನೆಂದರೆ ಸ್ಟಾರ್‌ಗಳ ಮಾರ್ಚ್‌, ಏಪ್ರಿಲ್‌ನಲ್ಲಿ ತೆರೆಕಾಣುವಾಗ, ಹೊಸಬರು ಹಾಗೂ ಇತರ ನಾಯಕ ನಟರ ಚಿತ್ರಗಳ್ಯಾಕೆ ಫೆಬ್ರವರಿ ಎಂದು ನೀವು ಕೇಳಬಹುದು. ಅದಕ್ಕೆ ಕಾರಣ ಮತ್ತದೇ ಸ್ಟಾರ್‌ ಸಿನಿಮಾಗಳು. ಸ್ಟಾರ್‌ ಸಿನಿಮಾಗಳ ನಿರ್ಮಾಪಕರು ಈಗಾಗಲೇ ಸಭೆ ನಡೆಸಿ ಮೂರು ವಾರಗಳ ಗ್ಯಾಪ್‌ನಲ್ಲಿ ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಈ ಮೂಲಕ ಅವರಲ್ಲಿ ಸದ್ಯದ ಮಟ್ಟಿಗೆ ಯಾವುದೇ ಗೊಂದಲವಿಲ್ಲ. ಈಗ ಬಿಡುಗಡೆಗೆ ರೆಡಿಯಾಗಬೇಕಿರೋದು ಹೊಸಬರು. ಸ್ಟಾರ್‌ಗಳ ಸಿನಿಮಾಗಳು ಮಾರ್ಚ್‌ನಿಂದಲೇ ಬಹುಪಾಲು ಚಿತ್ರಮಂದಿರಗಳನ್ನು ಆವರಿಸಿಕೊಳ್ಳುವುದರಿಂದ, ಹೊಸಬರ ಹಾಗೂ ಇತರ ನಾಯಕ ನಟರ ಚಿತ್ರಗಳಿಗೆ ಚಿತ್ರಮಂದಿರಗಳ ಸಮಸ್ಯೆ ಎದುರಾಗಬಹುದು. ಜೊತೆಗೆ ದೊಡ್ಡ ಸಿನಿಮಾಗಳ ಎದುರು ಬಂದು ಕೈ ಸುಟ್ಟುಕೊಳ್ಳಲು ಯಾವ ನಿರ್ಮಾಪಕರು ತಯಾರಿಲ್ಲ. ಆ ಕಾರಣದಿಂದಲೇ ಫೆಬ್ರವರಿಯಲ್ಲಿ ರಿಲೀಸ್‌ ಮಾಡಲು ನಿರ್ಧರಿಸಿದ್ದಾರೆ

ಫೆಬ್ರವರಿಯಲ್ಲಿ ಇನ್ಸ್‌ಪೆಕ್ಟರ್‌ ವಿಕ್ರಂ ಪಕ್ಕಾ

ಪ್ರಜ್ವಲ್‌ ದೇವರಾಜ್‌ ನಟನೆಯ ‘ಇನ್ಸ್‌ಪೆಕ್ಟರ್‌ ವಿಕ್ರಂ ಫೆಬ್ರವರಿಯಲ್ಲಿ ತೆರೆಕಾಣೋದು ಬಹುತೇಕ ಅಂತಿಮವಾಗಿದೆ. ಈ ಮೂಲಕ ಹೊಸ ವರ್ಷದ ಆರಂಭದಲ್ಲೇ ಪ್ರಜ್ವಲ್‌ ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ. ಇದೇ ಮೊದಲ ಬಾರಿಗೆ ಇನ್ಸ್‌ಪೆಕ್ಟರ್‌ ಪಾತ್ರದಲ್ಲಿ ಮಿಂಚಿರುವ ಪ್ರಜ್ವಲ್‌ ಜೋಡಿಯಾಗಿ “ಟಗರು ಭಾವನಾ ಸಾಥ್‌ ನೀಡಿದ್ದಾರೆ.

ಈ ಚಿತ್ರದಲ್ಲಿ ನಟ ದರ್ಶನ್‌ ಅತಿಥಿ ಪಾತ್ರದಲ್ಲಿ ಕಾಣಿಸಿ ಕೊಂಡಿ ದ್ದಾರೆ. ಈಗಾಗಲೇ ಡಬ್ಬಿಂಗ್‌ ಕೂಡ ಮುಗಿಸಿದ್ದಾರೆ. ಭಗತ್‌ ಸಿಂಗ್‌ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದು, ದರ್ಶನ್‌ ಅಭಿಮಾನಿ  ಗಳಲ್ಲೂ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಶ್ರೀನರಸಿಂಹ ನಿರ್ದೇಶನವಿ ರುವ ಈ ಚಿತ್ರ ವಿಖ್ಯಾತ್‌ ಪೊ›ಡಕ್ಷನ್ಸ್‌ ಬ್ಯಾನರ್‌ ಅಡಿಯಲ್ಲಿ ಎ.ಆರ್‌.ವಿಖ್ಯಾತ್‌ ನಿರ್ಮಿಸಿದ್ದಾರೆ. ಈಗಾಗಲೇ ಹಾಡುಗಳು ಹಿಟ್‌ಲಿಸ್ಟ್‌ ಸೇರಿವೆ. ಅನೂಪ್‌ ಸೀಳೀನ್‌ ಸಂಗೀತ ಚಿತ್ರಕ್ಕಿದೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.