ಮಾಸ್‌ಲೀಡರ್‌ ಬಿಡುಗಡೆ ಗೊಂದಲಕ್ಕೆ ತೆರೆ


Team Udayavani, Aug 8, 2017, 10:45 AM IST

mass-leader.jpg

ಅಂತೂ ಇಂತೂ ಶಿವರಾಜಕುಮಾರ್‌ ಅಭಿನಯದ “ಮಾಸ್‌ ಲೀಡರ್‌’ ಚಿತ್ರದ ಬಿಡುಗಡೆ ಗೊಂದಲಕ್ಕೆ ಈಗ ತೆರೆ ಬಿದ್ದಿದೆ. ಚಿತ್ರದ ಶೀರ್ಷಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಡುಗಡೆಗೆ ಅಡ್ಡಿಯಾಗಿದ್ದ ತಡೆಯಾಜ್ಞೆ ಸಮಸ್ಯೆ ಸೋಮವಾರ ನಿರ್ಮಾಪಕ ಕೆ.ಮಂಜು ಅವರ ಸಮ್ಮುಖದಲ್ಲಿ ಬಗೆಹರಿದಿದೆ. ಅಲ್ಲಿಗೆ ಆಗಸ್ಟ್‌ 11 ರಂದು “ಮಾಸ್‌ ಲೀಡರ್‌’ ಬಿಡುಗಡೆಯಲ್ಲಿ ಯಾವುದೇ ಗೊಂದಲವಿಲ್ಲ.

ನಿರ್ದೇಶಕ ಎ.ಎಂ.ಆರ್‌.ರಮೇಶ್‌ ಅವರು “ಮಾಸ್‌ ಲೀಡರ್‌’ ಚಿತ್ರ ಬಿಡುಗಡೆಗೆ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಚಿತ್ರ ಬಿಡುಗಡೆ ಆಗುತ್ತೋ ಇಲ್ಲವೋ ಎಂಬ ಗೊಂದಲಗಳಿದ್ದವು. ಈ ವಿಷಯ ಅರಿತ ನಿರ್ಮಾಪಕ ಕೆ.ಮಂಜು ಅವರು ಸೋಮವಾರ ಮಧ್ಯಾಹ್ನ ಎ.ಎಂ.ಆರ್‌ ರಮೇಶ್‌ ಹಾಗೂ ನಿರ್ಮಾಪಕ ತರುಣ್‌ ಶಿವಪ್ಪ ಇಬ್ಬರನ್ನೂ ತಮ್ಮ ಮನೆಗೆ ಆಹ್ವಾನಿಸಿ, ಚರ್ಚೆ ನಡೆಸಿದ್ದಾರೆ.

ಆ ಬಳಿಕ “ಕನ್ನಡದಲ್ಲಿ ಕೆಲವೇ ಕೆಲವು ನಿರ್ಮಾಪಕರಿದ್ದಾರೆ. ಒಳ್ಳೆಯ ಸಿನಿಮಾಗಳು ಬಿಡುಗಡೆಗೆ ನಿಂತಾಗ, ಹೀಗೆಲ್ಲ ಮಾಡುವುದು ಸರಿಯಲ್ಲ. ಯಾವ ನಿರ್ಮಾಪಕರಿಗೂ ತೊಂದರೆ ಆಗಬಾರದು. ಹಾಗಾಗಿ ನೀವು ಸಿನಿಮಾ ಬಿಡುಗಡೆಗೆ ಅನುಕೂಲ ಮಾಡಿಕೊಡಬೇಕು’ ಎಂದು ಎ.ಎಂ.ಆರ್‌.ರಮೇಶ್‌ ಅವರಲ್ಲಿ ಕೇಳಿಕೊಂಡಿದ್ದಾರೆ. ಹೀಗಾಗಿ, ತರುಣ್‌ ಅವರಿಗೆ ಸಿನಿಮಾ ಬಿಡುಗಡೆ ಮಾಡಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಾರೆ ರಮೇಶ್‌.

ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಎ.ಎಂ.ಆರ್‌ ರಮೇಶ್‌, “ಏನೋ ಕೆಟ್ಟ ಗಳಿಗೆ ಹಾಗೆಲ್ಲಾ ಆಗೋಯ್ತು. ನಾನು ಯಾವ ನಿರ್ಮಾಪಕರಿಗೂ ತೊಂದರೆ ಮಾಡುವ ಉದ್ದೇಶ ಹೊಂದಿಲ್ಲ. ಆದರೆ, ಆ ಕ್ಷಣದಲ್ಲಿ ನನಗೆ ಬೇಸರವಾಗಿತ್ತು. ಧರಣಿ ನಡೆಸಿದಾಗಲೂ, ನನ್ನನ್ನು ಕಡೆಗಣಿಸಿದ್ದರು. ಹೀಗಾಗಿ ಈ ತೀರ್ಮಾನಕ್ಕೆ ಬಂದಿದ್ದೆ ಅಷ್ಟೇ. ಕೆ.ಮಂಜು ಅವರು ತುಂಬಾನೇ ಮನವಿ ಮಾಡಿಕೊಂಡರು. ಅಲ್ಲದೆ, ನಾನೂ ಒಬ್ಬ ನಿರ್ಮಾಪಕನಾಗಿದ್ದೇನೆ.

ಕನ್ನಡ ನಿರ್ಮಾಪಕರ ಕಷ್ಟ ನನಗೂ ಗೊತ್ತಿದೆ. ಹಾಗಾಗಿ ನಾನು ಬಿಡುಗಡೆಗೆ ಅನುವು ಮಾಡಿಕೊಡುತ್ತಿದ್ದೇನೆ’ ಎಂದರು ರಮೇಶ್‌. ತರುಣ್‌ ಶಿವಪ್ಪ ಕೂಡ “ರಮೇಶ್‌ ಅವರು ಬಿಡುಗಡೆಗೆ ಅನುವು ಮಾಡಿಕೊಟ್ಟಿರುವುದಕ್ಕೆ ಧನ್ಯವಾದ ಹೇಳಿದರಲ್ಲದೆ, ಆಗಸ್ಟ್‌ 11 ರಂದು ಚಿತ್ರ ತೆರೆಗೆ ಬರಲಿದೆ. ಮಂಗಳವಾರ ಕೋರ್ಟ್‌ನಿಂದ ಪತ್ರವೊಂದು ಬರಲಿದೆ. ಹಾಗಾಗಿ ಚಿತ್ರದ ಬಿಡುಗಡೆಗೆ ಯಾವುದೇ ಅಡ್ಡಿ ಇರುವುದಿಲ್ಲ. ಕೆ.ಮಂಜು ಹಾಗೂ ರಮೇಶ್‌ ಇಬ್ಬರಿಗೂ ಥ್ಯಾಂಕ್ಸ್‌ ಎಂದು ಹೇಳಿದ್ದಾರೆ ತರುಣ್‌ ಶಿವಪ್ಪ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.