Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Team Udayavani, Mar 29, 2024, 2:58 PM IST
ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಅಭಿನಯದ ಮ್ಯಾಟ್ನಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ನಟ ದರ್ಶನ್ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಚಿತ್ರ ಏ.5ಕ್ಕೆ ತೆರೆಕಾಣುತ್ತಿದೆ.
ರಚಿತಾ ರಾಮ್ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿ¨ªಾರೆ. ಸತೀಶ್ ನಿನಾಸಂ ಕೂಡ ಇದೆ ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿದ್ದು, ನಿರೀಕ್ಷೆ ಹೆಚ್ಚಿದೆ.
ಚಿತ್ರದಲ್ಲಿ ಸತೀಶ್, ರಚಿತಾ ರಾಮ್, ಅದಿತಿ ಪ್ರಭುದೇವಾ, ಶಿವರಾಜ್ ಕೆ.ಆರ್.ಪೇಟೆ, ನಾಗಭೂಷಣ್, ಪೂರ್ಣ ಮೈಸೂರು, ದಿಗಂತ್ ದಿವಾಕರ್, ತುಳಸಿ ಶಿವರಾಮ್, ತಬಲ ನಾಣಿ ಹೀಗೆ ಸಾಕಷ್ಟು ಕಲಾವಿದರು ಅಭಿನಯ ಮಾಡಿದ್ದಾರೆ. “ಮ್ಯಾಟ್ನಿ’ ಸಿನಿಮಾವನ್ನು ಮನೋಹರ್ ಕಾಂಪಲ್ಲಿ ನಿರ್ದೇಶನ ಮಾಡಿದ್ದು, ಪಾರ್ವತಿ ಗೌಡ ಮೊದಲ ಬಾರಿಗೆ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ, ಸುಧಾಕರ್ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.
ನೀನಾಸಂ ಸತೀಶ್ ಅವರು ಮಾತನಾಡಿ, “ಯಾಕೋ ಮ್ಯಾಟ್ನಿ ಸಿನಿಮಾ ಇನ್ನು ರಿಲೀಸ್ ಮಾಡಿಲ್ಲ, ಮೊದಲು ರಿಲೀಸ್ ಮಾಡಿ ಎಂದು ದರ್ಶನ್ ಹೇಳಿದ್ದರು. ಆಗ ಟ್ರೇಲರ್ ಲಾಂಚ್ಗೆ ಬರಲೇಬೇಕು ಅಂತ ಕೇಳಿಕೊಂಡಿದ್ದೆ. ಮೊದಲು ಸಿನಿಮಾ ಲಾಂಚ್ ಮಾಡಿ ಬರುತ್ತೇನೆ ಅಂದಿದ್ದರು. ಅದರಂತೆ ಬಂದಿದ್ದಾರೆ. ಮ್ಯಾಟ್ನಿಗೆ ದೊಡ್ಡ ಶಕ್ತಿ ಸಿಕ್ಕಿದೆ, ದೊಡ್ಡ ಮಟ್ಟದಲ್ಲಿ ರೀಚ್ ಆಗಿದೆ’ ಎಂದರು.
ವೇದಿಕೆ ಮೇಲೆ ಮಾತನಾಡಿದ ರಚಿತಾ, “ನನ್ನ ಸಿನಿಮಾದ ಟ್ರೇಲರ್ ಅನ್ನು ಮೊದಲ ಬಾರಿಗೆ ದರ್ಶನ್ ಅವರು ಲಾಂಚ್ ಮಾಡುತ್ತಿದ್ದಾರೆ. ತುಂಬಾ ಖುಷಿ ಹಾಗೂ ತುಂಬಾ ಹೆಮ್ಮೆಯಾಗುತ್ತೆ. ನಾನು ತೂಗುದೀಪ ಬ್ಯಾನರ್ನಿಂದ ಲಾಂಚ್ ಆದವಳು. ಹತ್ತು ವರ್ಷದ ಬಳಿಕ ನನ್ನ ಸಿನಿಮಾದ ಟ್ರೇಲರ್ ಲಾಂಚ್ಗೆ ಬಂದಿದ್ದು, ತುಂಬಾ ಖುಷಿಯಾಗುತ್ತೆ. ಮ್ಯಾಟ್ನಿ ಸಿನಿಮಾ ನೋಡಿ’ ಎಂದು ಕೇಳಿಕೊಂಡರು.
ನಟ ದರ್ಶನ್ ಮಾತನಾಡಿ, “ಮ್ಯಾಟ್ನಿ ಸಿನಿಮಾ ಎಂದ ಮಾತ್ರಕ್ಕೆ ಮ್ಯಾಟ್ನಿ ಟೈಮಲ್ಲಿ ಹೋಗ್ಬೇಡಿ, ಮಾರ್ನಿಂಗ್ ಶೋಗೆ ಹೋಗಿ. ನೀನಾಸಂನಿಂದ ಬಂದು ಸಿನಿಮಾ ರಂಗದಲ್ಲಿ ಎಲ್ಲಾ ರೀತಿಯ ಪಾತ್ರಗಳನ್ನು ಮಾಡಿ ಇಲ್ಲಿವರೆಗೂ ಬಂದಿದ್ದಾರೆ ಸತೀಶ್. ಈ ಜರ್ನಿ ತುಂಬಾ ದೊಡ್ಡದು. ಇನ್ನು, ನಾಯಕಿಯಾಗಿ ಹತ್ತು ವರ್ಷಗಳು ಸಿನಿಮಾರಂಗದಲ್ಲಿ ಇದ್ದು ಜಯಿಸುವುದು ಅಂದ್ರೆ ಸುಮ್ಮನೆ ಅಲ್ಲ. ಶ್ರಮ ಕಾಣುತ್ತಿದೆ’ ಎಂದು ರಚಿತಾ ಅವರ ಬಗ್ಗೆಯೂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Sandalwood: ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್ ಮ್ಯಾರೀಡ್” ಟೈಟಲ್
ಹೊಸ ಚಿತ್ರಕ್ಕೆ ಮಹೇಶ್ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ