ಜನವರಿಯಲ್ಲಿ “ಮತ್ತೆ ಉದ್ಭವ’

ಮಾಸ್‌ ಸಿನಿಮಾ ಜೊತೆ ಬಂದ ಕೂಡ್ಲು ರಾಮಕೃಷ್ಣ

Team Udayavani, Dec 24, 2019, 7:02 AM IST

Matte-Udbhava

ಅನಂತ್‌ನಾಗ್‌ ಅಭಿನಯದ “ಉದ್ಭವ’ ಚಿತ್ರ ನಿರ್ದೇಶಿಸಿದ್ದ ಕೂಡ್ಲು ರಾಮಕೃಷ್ಣ, “ಮತ್ತೆ ಉದ್ಭವ’ ಸಿನಿಮಾ ಮೂಲಕ ಸುದ್ದಿಯಾಗಿರುವುದು ಗೊತ್ತೇ ಇದೆ. ಈಬಾರಿ ಅನಂತ್‌ನಾಗ್‌ ಬದಲಾಗಿ ರಂಗಾಯಣ ರಘು ಜೊತೆ ಕೆಲಸ ಮಾಡಿರುವ ಕೂಡ್ಲು ರಾಮಕೃಷ್ಣ ಚಿತ್ರವನ್ನು ಬಿಡುಗಡೆ ಮಾಡುವ ತಯಾರಿಯಲ್ಲಿದ್ದಾರೆ. 1990 ರಲ್ಲಿ ಬಂದ “ಉದ್ಭವ’ ಯಶಸ್ವಿಯಾಗಿತ್ತು. ಈಗ “ಮತ್ತೆ ಉದ್ಭವ’ ಕೂಡ ಅದೇ ಹಾದಿಯಲ್ಲಿ ಸಾಗಲಿದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ.

ಇದೂ ಕೂಡ ಹಾಸ್ಯಮಯವಾಗಿಯೇ ಸಾಗುವ ಕಥೆ ಹೊಂದಿದೆ. ನಿರ್ದೇಶಕ ಕೂಡ್ಲು ರಾಮಕೃಷ್ಣ ಅವರು ಎಲ್ಲೇ ಹೋದರೂ, “ಉದ್ಭವ’ ರೀತಿಯ ಚಿತ್ರ ಮಾಡಿ ಅಂತಾನೇ ಕೇಳುತ್ತಿದ್ದರಂತೆ. ಕೊನೆಗೆ ಎಲ್ಲರ ಬೇಡಿಕೆಗೆ ಸ್ಪಂದಿಸಿ, ಕಥೆ ಬರೆದು “ಮತ್ತೆ ಉದ್ಭವ’ ಮಾಡಿದ್ದಾರಂತೆ. ಅನಂತ್‌ನಾಗ್‌ ಅವರ ಡೇಟ್ಸ್‌ ಸಮಸ್ಯೆ ಆಗಿದ್ದರಿಂದ ರಂಗಾಯಣ ರಘು ಅವರನ್ನಿಟ್ಟುಕೊಂಡು ಚಿತ್ರ ಮಾಡಿದ್ದಾರೆ. “ಉದ್ಭವ’ ಒಂದು ಕ್ಲಾಸ್‌ ಸಿನಿಮಾ ಆಗಿತ್ತು.

ಇಲ್ಲಿ ಡ್ಯಾನ್ಸ್‌, ಫೈಟ್ಸ್‌, ಕಾಮಿಡಿ ಎಲ್ಲವನ್ನೂ ಒಳಗೊಂಡು ಮಾಸ್‌ ಸಿನಿಮಾ ಎಂಬುದು ಅವರ ಮಾತು. ಪಾತ್ರಗಳೆಲ್ಲವೂ ಹಾಗೆಯೇ ಇದೆಯಾದರೂ, ಕಲಾವಿದರು ಮಾತ್ರ ಬದಲಾಗಿದ್ದಾರೆ. “ಉದ್ಭವ’ದಲ್ಲಿ ದೇವರು ಸುದ್ದಿಯಾಗಿದ್ದರೆ, ಇಲ್ಲಿ ಅದಕ್ಕಿಂತಲೂ ದೊಡ್ಡದು ಇರಲಿದೆ. ಅದರಲ್ಲೂ ಪ್ರಸ್ತುತ ರಾಜಕೀಯ ವ್ಯವಸ್ಥೆ ಕುರಿತಂತೆ ಇಲ್ಲಿ ಹೇಳಲಾಗಿದೆಯಂತೆ. ಅಪ್ಪ ಕಾರ್ಪೋರೇಷನ್‌ ಲೆವೆಲ್‌ನಲ್ಲಿದ್ದರೆ, ಮಗ ವಿಧಾನಸೌಧ ಸಂಪರ್ಕ ಹೊಂದಿದ ಕಿಲಾಡಿ.

ಇಲ್ಲಿ ಪ್ರಮೋದ್‌ ಹಿರಿಯ ಮಗನಾಗಿ ಕಾಣಿಸಿಕೊಂಡರೆ, ಮಂಡ್ಯ ರವಿ ಎರಡನೇ ಮಗ. ಮಿಲನ ನಾಗರಾಜ್‌ ಅವರು ಪರಿಸರಪ್ರೇಮಿಯಾಗಿಯೂ, ರಾಜಕಾರಣಿಯಾಗಿಯೂ ಕಾಣಿಸಿಕೊಂಡಿದ್ದಾರೆ. ಮೋಹನ್‌ ಶೃಂಗಾರ ಸ್ವಾಮಿಯಾಗಿದ್ದು, ಚಿತ್ರಕ್ಕೆ ಮಾತುಗಳನ್ನೂ ಪೋಣಿಸಿದ್ದಾರೆ. ಮೋಹನ್‌ ಅವರ ಭಕ್ತೆಯಾಗಿ ಶುಭರಕ್ಷಾ ನಟಿಸಿದ್ದಾರೆ. ಚಿತ್ರದಲ್ಲಿ ಸುಧಾಬೆಳವಾಡಿ, ಅವಿನಾಶ್‌, ಗಿರೀಶ್‌ಭಟ್‌, ಚೇತನ್‌, ನರೇಶ್‌, ಶಂಕರ್‌ ಅಶ್ವಥ್‌ ಇತರರು ನಟಿಸಿದ್ದಾರೆ. ಜಯಂತ್‌ ಕಾಯ್ಕಿಣಿ ಹಾಗು ಪ್ರಹ್ಲಾದ್‌ ಗೀತೆ ರಚಿಸಿದ್ದು, ವಿ. ಮನೋಹರ್‌ ಸಂಗೀತವಿದೆ.

ಮೋಹನ್‌ ಛಾಯಾಗ್ರಹಣ ಮಾಡಿದರೆ, ಕೆಂಪರಾಜು ಸಂಕಲನವಿದೆ. ಥ್ರಿಲ್ಲರ್‌ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ. ತ್ರಿಭುವನ್‌ ನೃತ್ಯ ಸಂಯೋಜಿಸಿದ್ದಾರೆ. ಇತ್ತೀಚೆಗೆ ನಿರ್ದೇಶಕ ಟಿ.ಎನ್‌.ಸೀತಾರಾಮ್‌ ಹಾಗು ರಿಷಭ್‌ಶೆಟ್ಟಿ ಚಿತ್ರದ ಟೀಸರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ನಿತ್ಯಾನಂದಭಟ್‌, ಸತ್ಯ, ಮಹೇಶ್‌ ಮುದ್ಗಲ್‌ ಮತ್ತು ರಾಜೇಶ್‌ ಜೊತೆಗೂಡಿ ನಿರ್ಮಾಣ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿಯಲ್ಲಿ “ಮತ್ತೆ ಉದ್ಭವ’ ಪ್ರೇಕ್ಷಕರ ಮುಂದೆ ಬರಲಿದೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.