ಮಾಧ್ಯಮಗಳು ಮನಃಶಾಂತಿ ಹಾಳು ಮಾಡಿವೆ: ಸೈಬರ್ ಕ್ರೈಂ ಗೆ ಪವಿತ್ರಾ ಲೋಕೇಶ್ ದೂರು

ತಾನು ನರೇಶ್‌ರನ್ನು ಮದುವೆಯಾಗಿಲ್ಲ.....; ಹೋಟೆಲ್ ನ ಒಂದೇ ರೂಮ್ ನಲ್ಲಿ ದ್ದ ನರೇಶ್, ಪವಿತ್ರಾ

Team Udayavani, Jul 3, 2022, 6:00 PM IST

1-ffdsfsd

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುದ್ದಿಯಾಗುತ್ತಿರುವ ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಅವರು ”ಕೆಲವರು ತನ್ನನ್ನು ಹಿಂಬಾಲಿಸಿ ಮನಃಶಾಂತಿ ಕೆಡಿಸಿದ್ದಾರೆ” ಎಂದು ಸೈಬರ್ ಕ್ರೈಂ ಇಲಾಖೆಗೆ ದೂರು ನೀಡಿದ್ದಾರೆ.

ಕೆಲವು ಮಾಧ್ಯಮ ಪ್ರತಿನಿಧಿಗಳು ನನ್ನನ್ನು ನಿರಂತರವಾಗಿ ಹಿಂಬಾಲಿಸುತ್ತಿದ್ದು, ಮನಃಶಾಂತಿ ಹಾಳು ಮಾಡುತ್ತಿದ್ದಾರೆ ಎಂದು ಪವಿತ್ರಾ ಲೋಕೇಶ್ ಹೇಳಿಕೆ ನೀಡಿದ್ದಾರೆ. ಇದು ತನಗೆ ಅಪಾರವಾದ ಮಾನಸಿಕ ಆಘಾತ ಉಂಟು ಮಾಡಿದೆ ಎಂದೂ ವಿವರಿಸಿದ್ದಾರೆ. ಈ ಕೃತ್ಯದಲ್ಲಿ ತೊಡಗಿರುವ ಮಾಧ್ಯಮ ಸಂಸ್ಥೆಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ವಿವಾದದ ನಡುವೆ ಭಾನುವಾರ ಪವಿತ್ರಾ ಲೋಕೇಶ್ ಮತ್ತು ನರೇಶ್ ಅವರು ಮೈಸೂರಿನ ಹೋಟೆಲ್ ನ ಒಂದೇ ಕೋಣೆಯಲ್ಲಿ ತಂಗಿದ್ದು, ನರೇಶ್ ಪತ್ನಿ ರಮ್ಯಾ ಹೈಡ್ರಾಮಾ ನಡೆಸಿದ್ದಾರೆ. ರೂಂ ಬಾಗಿಲ ಬಳಿ ಇಬ್ಬರಿಗಾಗಿ ಗಂಟೆಗಳ ಕಾಲ ಕಾದು ಕುಳಿತು, ಚಪ್ಪಲಿಯಲ್ಲಿ ಹೊಡೆಯಲು ಯತ್ನಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಇದ್ದುದರಿಂದ ಅವರಿಗೆ ಹಲ್ಲೆ ನಡೆಸಲು ಸಾಧ್ಯವಾಗಲಿಲ್ಲ. ಈ ಎಲ್ಲಾ ವಿದ್ಯಾಮಾನಗಳನ್ನು ಕೆಲ ಮಾಧ್ಯಮಗಳು ನೇರ ಪ್ರಸಾರ ಮಾಡಿವೆ.

ಪವಿತ್ರಾ ಲೋಕೇಶ್ ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ತನ್ನ ಹೆಸರಿನಲ್ಲಿ ಅನೇಕ ನಕಲಿ ಖಾತೆಗಳನ್ನು ರಚಿಸಲಾಗಿದೆ ಮತ್ತು ಆ ಖಾತೆಗಳಲ್ಲಿ ಮಾನಹಾನಿಕರ ಪೋಸ್ಟ್‌ಗಳು ಬಂದಿವೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ನಕಲಿ ಖಾತೆಗಳನ್ನು ಸೃಷ್ಟಿಸಿದ ನಂತರ ದುಷ್ಕರ್ಮಿಗಳು ತನ್ನ ಬಗ್ಗೆ ವದಂತಿಗಳು ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ನಟಿ ಹೇಳಿದ್ದಾರೆ.ಸೈಬರ್ ಕ್ರೈಂ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪವಿತ್ರಾ ಅವರು ತೆಲುಗು ಚಿತ್ರ ರಂಗದ ನರೇಶ್ ಅವರೊಂದಿಗಿನ ವೈವಾಹಿಕ ಸಂಬಂಧದ ಕುರಿತು ಭಾರಿ ಚರ್ಚೆಗಳು ನಡೆಯುತ್ತಿದ್ದು, ಈಗಾಗಲೇ ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಅವರು ವಂಚನೆ ಮತ್ತು ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪವಿತ್ರಾ ಲೋಕೇಶ್ ನನ್ನ ಮಾರ್ಗದರ್ಶಕಿ, ತತ್ವಜ್ಞಾನಿ ಮತ್ತು ಆತ್ಮೀಯ ಸ್ನೇಹಿತೆ ಎಂದು ನರೇಶ್ ಸ್ಪಷ್ಟಪಡಿಸಿದ್ದಾರೆ. ಆಕೆಯ ಬೆಂಬಲದಿಂದ ಖಿನ್ನತೆಯ ಆಳದಿಂದ ತನ್ನನ್ನು ಮೇಲೆತ್ತಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ತಾನು ನರೇಶ್‌ರನ್ನು ಮದುವೆಯಾಗಿಲ್ಲ, ತಮ್ಮ ಸಂಬಂಧವನ್ನು ಅಪಾರ್ಥ ಮಾಡಿಕೊಳ್ಳಬಾರದು ಎಂದು ಪವಿತ್ರಾ ಹೇಳಿದ್ದಾರೆ.

ತನ್ನ ಗೌಪ್ಯತೆ ಮತ್ತು ವೈಯಕ್ತಿಕವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಯಾರೂ ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಅವರು ಒತ್ತಿ ಹೇಳಿದ್ದು, ನರೇಶ್ ಮತ್ತು ರಮ್ಯಾ ರಘುಪತಿ ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

rape

B’luru; ವಿವಾಹವಾಗುವುದಾಗಿ ಮತಾಂತರಕ್ಕೆ ಕಿರುಕುಳ: ಕಾಶ್ಮೀರದ ಯುವಕನ ಬಂಧನ

police crime

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

1-asdsad

Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pratham; ‘ಕರ್ನಾಟಕದ ಅಳಿಯ’ನ ಹಾಡು ಬಂತು

Pratham; ‘ಕರ್ನಾಟಕದ ಅಳಿಯ’ನ ಹಾಡು ಬಂತು

Totapuri 2 ಜಗ್ಗೇಶ್-ಡಾಲಿ ಜೊತೆಯಾಟ; ಸೆ.28ರಿಂದ ತೋತಾಪುರಿ ರುಚಿ

Totapuri 2 ಜಗ್ಗೇಶ್-ಡಾಲಿ ಜೊತೆಯಾಟ; ಸೆ.28ರಿಂದ ತೋತಾಪುರಿ ರುಚಿ

megha-shetty

Sandalwoodl ಗ್ರಾಮಾಯಣಕ್ಕೆ ಮೇಘಾ ಶೆಟ್ಟಿ ಎಂಟ್ರಿ; ಜೊತೆ ಜೊತೆಯಲಿ ಹುಡುಗಿಯ ಹೊಸ ಸಿನಿಮಾ

vinay

Vinay Rajkumar; ಆಡಿಯೋ ಖುಷಿಯಲ್ಲಿ ಅಂದೊಂದಿತ್ತು ‘ಅದೊಂದಿತ್ತು ಕಾಲ’ ತಂಡ

Sandalwood; ಈ ವಾರ ಏಳು ಚಿತ್ರಗಳು ತೆರೆಗೆ

Sandalwood; ಈ ವಾರ ಏಳು ಚಿತ್ರಗಳು ತೆರೆಗೆ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1wqeqw

Reliance Jio: ಐಫೋನ್ 15 ಖರೀದಿಸಿದರೆ ಆರು ತಿಂಗಳು ಫ್ರೀ ಪ್ಲಾನ್

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

1-asdsaas

Chikodi; ಪಟಾಕಿ ಸಿಡಿಸುವ ವೇಳೆ ಯುವಕನ ಕೈ ನುಜ್ಜು ಗುಜ್ಜು

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.