ಮೇಘನಾರಾಜ್‌ ಹೊಸ ಚಿತ್ರ ಇರುವುದೆಲ್ಲವ ಬಿಟ್ಟು…


Team Udayavani, Oct 29, 2017, 10:34 AM IST

meghana.jpg

ನಟಿ ಮೇಘನಾರಾಜ್‌ ಅವರು ಮೊನ್ನೆಯಷ್ಟೇ ನಟ ಚಿರಂಜೀವಿ ಸರ್ಜಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈಗ ಇಬ್ಬರೂ ಹೊಸ ಚಿತ್ರಗಳಲ್ಲಿ ನಟಿಸಲು ಶುರುಮಾಡಿದ್ದಾರೆ. ಅತ್ತ, ಚಿರಂಜೀವಿ ಸರ್ಜಾ “ಆ ದಿನಗಳು’ ಚೇತನ್‌ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸಲು ಸಜ್ಜಾದರೆ, ಇತ್ತ, ಮೇಘನಾರಾಜ್‌ ಕಾಂತ ಕನ್ನಲ್ಲಿ ನಿರ್ದೇಶನದ “ಇರುವುದೆಲ್ಲವ ಬಿಟ್ಟು’ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ನಿರ್ದೇಶಕ ಕಾಂತ ಕನ್ನಲ್ಲಿ ಅವರು “ಜಲ್ಸಾ’ ಬಳಿಕ ನಿರ್ದೇಶಿಸುತ್ತಿರುವ ಎರಡನೇ ಸಿನಿಮಾ ಇದು. ಈ ಚಿತ್ರಕ್ಕೆ ಶ್ರೀ ನಾಯಕರಾಗಿದ್ದಾರೆ. ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ನೀಲಿ’ ಧಾರಾವಾಹಿಯ ನಾಯಕನಾಗಿರುವ ಶ್ರೀ ಅವರಿಗೆ ಇದು ಮೊದಲ ಚಿತ್ರ. ಡ್ರಾಮಾ ಜೂನಿಯರ್ನ ಅಭಿಷೇಕ್‌ ರಾಯಣ್ಣ ಸೇರಿದಂತೆ ಚಿತ್ರದಲ್ಲಿ ಅನೇಕ ಕಲಾವಿದರು ನಟಿಸುತ್ತಿದ್ದಾರೆ.

ಸದ್ಯಕ್ಕೆ ತಿಲಕ್‌ ಅವರನ್ನು ಸಂಪರ್ಕಿಸಿದ್ದು, ಅವರೂ ಸಹ ಕಥೆ, ಪಾತ್ರ ಕೇಳಿ ನಟಿಸುವುದಾಗಿ ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ. ಈ ಚಿತ್ರವನ್ನು ದೇವರಾಜ್‌ ದಾವಣಗೆರೆ ನಿರ್ಮಾಣ ಮಾಡುತ್ತಿದ್ದಾರೆ. ಇವರಿಗೂ ಇದು ಮೊದಲ ಸಿನಿಮಾ. ಈಗಾಗಲೇ ಚಿತ್ರಕ್ಕೆ ಪೂಜೆ ನಡೆದಿದ್ದು, ನವೆಂಬರ್‌ 2 ರಿಂದ ಚಿತ್ರದ ಚಿತ್ರೀಕರಣ ಶುರುವಾಗಲಿದೆ.

ನ.7 ರಿಂದ ನಾಯಕಿ ಮೇಘನಾರಾಜ್‌ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಅವರಿಲ್ಲಿ ಕಾರ್ಪೋರೇಟ್‌ ಜಗತ್ತಿನಲ್ಲಿ ಕೆಲಸ ಮಾಡುವ ಪಾತ್ರ ನಿರ್ವಹಿಸುತ್ತಿದ್ದಾರೆ. ಸಾಫ್ಟ್ವೇರ್‌ ರಂಗದಲ್ಲಿ ದೊಡ್ಡ ಹೆಸರು ಮಾಡಬೇಕು ಎಂಬ ಆಸೆ ಹೊತ್ತು ಬಂದಿರುವ ಪಾತ್ರವದು. ಇಲ್ಲಿ ನಾಯಕ ಅನಾಥನಾಗಿದ್ದು, ಸಂಬಂಧಗಳೇ ಗೊತ್ತಿಲ್ಲದ ಅವನಿಗೆ, ಸುಂದರ ಕುಟುಂಬ ಕಟ್ಟಿಕೊಂಡು ಅಲ್ಲೇ ಪ್ರೀತಿ ಕಾಣುವ ಹಂಬಲ ವ್ಯಕ್ತಪಡಿಸುವಂತಹ ವ್ಯಕ್ತಿತ್ವದವನು.

ಈ ಮಧ್ಯೆ ಏನೇನೆಲ್ಲಾ ಆಗಿಹೋಗುತ್ತೆ ಎಂಬುದನ್ನಿಲ್ಲಿ ತೋರಿಸುವ ಪ್ರಯತ್ನ ಮಾಡಲಿದ್ದಾರಂತೆ ನಿರ್ದೇಶಕರು. “ಇರುವುದೆಲ್ಲವ ಬಿಟ್ಟು’ ಈ ಶೀರ್ಷಿಕೆಗೆ “ಇರುವೆ ಬಿಟ್ಟುಕೊಳ್ಳುವುದೇ ಜೀವನ’ ಎಂಬ ಅಡಿಬರಹ ಕೂಡ ಇದೆ. ಅಂದಹಾಗೆ, ಇದೊಂದು ವಾಸ್ತವತೆಯ ಸಿನಿಮಾ ಎನ್ನುವ ನಿರ್ದೇಶಕರು, “ನಮ್ಮದೆಲ್ಲವನ್ನೂ ಬಿಟ್ಟು ಹೊಸ ಬದುಕು ಕಟ್ಟಿಕೊಳ್ಳಲು ಹೊರಟಾಗ, ಆಗುವ ಸಮಸ್ಯೆಗಳು, ಅನುಭವಿಸುವ ನೋವುಗಳು ಚಿತ್ರದ ಹೈಲೈಟ್‌.

ಈಗಿನ ಶೋಕಿ ಜೀವನ ಅಳವಡಿಸಿಕೊಳ್ಳಲು ಹೋಗಿ, ತಮ್ಮ ಸಂಬಂಧಗಳನ್ನು ಹೇಗೆ ಕಳೆದುಕೊಂಡು, ನೋವು ಪಡುತ್ತಾರೆ, ತಮ್ಮ ಮುಂದಿನ ಗುರಿ, ಭವಿಷ್ಯದ ಕನಸು ಕಟ್ಟಿಕೊಂಡು ಹೋಗುವ ಮಂದಿ, ಪೋಷಕರ ಹಿತ ಕಾಯುತ್ತಾರಾ, ಅವರ ಸಂತಸಕ್ಕೆ ಕಾರಣರಾಗುತ್ತಾರಾ ಅಥವಾ ಪಶ್ಚಾತ್ತಾಪ ಪಡುತ್ತಾರಾ ಎಂಬ ಸೂಕ್ಷ್ಮ ಅಂಶಗಳು ಚಿತ್ರದಲ್ಲಿವೆ ಎನ್ನುತ್ತಾರೆ ನಿರ್ದೇಶಕರು. 

ಚಿತ್ರಕ್ಕೆ ಶ್ರೀಧರ್‌ ವಿ.ಸಂಭ್ರಮ್‌ ಸಂಗೀತ ನೀಡುತ್ತಿದ್ದಾರೆ. “ರಂಗಿತರಂಗ’ ಖ್ಯಾತಿಯ ಛಾಯಾಗ್ರಾಹಕ ವಿಲಯಮ್‌ ಡೇವಿಡ್‌ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿಯುತ್ತಿದ್ದಾರೆ. ಕೆ.ಎಂ.ಪ್ರಕಾಶ್‌ ಕತ್ತರಿ ಪ್ರಯೋಗಿಸುತ್ತಿದ್ದಾರೆ. ಸುಮಾರು 45 ದಿನಗಳ ಕಾಲ ಬೆಂಗಳೂರು ಸೇರಿದಂತೆ ಹೊಸ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.