ಅವಕಾಶಗಳು ಕಡಿಮೆಯಾಗಿದ್ದಕ್ಕೆ #MeToo ಕಾರಣವೆಂದು ಹೇಳಲಾರೆ


Team Udayavani, Dec 26, 2018, 11:21 AM IST

shruthi2-copy.jpg

ಮಿಟೂ ವಿವಾದ ತಾರಕ್ಕಕೇರಿದ ಬಳಿಕ ಪತ್ರಕರ್ತರು ಮತ್ತು ಮಾಧ್ಯಮಗಳ ಮೇಲೆ ಹರಿಹಾಯ್ದು, ಕೆಲಕಾಲ ಯಾರ ಕೈಗೂ ಸಿಗದೇ ದೂರವುಳಿದಿದ್ದ ನಟಿ ಶ್ರುತಿ ಹರಿಹರನ್‌ ನಿನ್ನೆ (ಡಿ. 25) ನಡೆದ “ನಾತಿಚರಾಮಿ’ ಚಿತ್ರದ ಬಿಡುಗಡೆ ಪೂರ್ವ ಪತ್ರಿಕಾಗೋಷ್ಠಿಗೆ ಆಗಮಿಸಿದ್ದರು. “ನಾತಿಚರಾಮಿ’ ಚಿತ್ರದ ಬಗ್ಗೆ, ತಮ್ಮ ಪಾತ್ರ ಬಗ್ಗೆ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಹಂಚಿಕೊಂಡ ಬಳಿಕ ಶೃತಿ ಹರಿಹರನ್‌ಗೆ, ಮತ್ತೆ ಮಿಟೂ ಪ್ರಶ್ನೆಗಳು ಎದುರಾದವು.

ಆದರೆ ಆರಂಭದಲ್ಲಿ ಮಿಟೂ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಶ್ರುತಿ, ಪತ್ರಕರ್ತರಿಂದ ತೂರಿಬಂದ ಪ್ರಶ್ನೆಗಳಿಂದ ಹೆಚ್ಚು ಹೊತ್ತು ತಪ್ಪಿಸಿಕೊಳ್ಳಲಾಗದೆ ಮತ್ತೆ ಒಂದಷ್ಟು ವಿಷಯಗಳನ್ನು ತೆರೆದಿಟ್ಟರು. “ಸದ್ಯ ನಮ್ಮ ಪ್ರಕರಣ ಕೋರ್ಟ್‌ನಲ್ಲಿದೆ. ಹಾಗಾಗಿ ಈ ಬಗ್ಗೆ ಹೆಚ್ಚೇನು ಹೇಳಲಾರೆ. ನಾನು ಹೇಳಿರುವುದು ಎಷ್ಟರ ಮಟ್ಟಿಗೆ ಸತ್ಯ ಎನ್ನುವುದನ್ನು ನಾನು ಕೋರ್ಟ್‌ನಲ್ಲೇ ಸಾಬೀತುಪಡಿಸುತ್ತೇನೆ. ಮಿಟೂ ಆರೋಪದ ಬಳಿಕ ಸಿನಿಮಾದಲ್ಲಿ ಅವಕಾಶಗಳು ಕಡಿಮೆಯಾಗಿವೆ.

ಹಾಗಂತ ಅದಕ್ಕೆಲ್ಲಾ ಮಿಟೂ ಬಗ್ಗೆ ಮಾತನಾಡಿದ್ದೇ ಕಾರಣ ಎಂದು ಹೇಳಲಾರೆ. ಅವಕಾಶ ಕಡಿಮೆಯಾಗಿದ್ದಕ್ಕಾಗಲಿ ಅಥವಾ ಮಿಟೂ ಬಗ್ಗೆ ಮಾತನಾಡಿದ್ದಕ್ಕೆ ಆಗಲಿ, ನನಗೆ ಬೇಸರವಿಲ್ಲ. ನಾನು ಮಾತನಾಡಿದ್ದು ತಪ್ಪು ಅಂತಾನೂ ಅನಿಸಿಲ್ಲ. ಎಲ್ಲವನ್ನೂ ಕಾಲ ನಿರ್ಣಯಿಸುತ್ತೆ. ನಾನು ಸಿನಿಮಾರಂಗದಲ್ಲಿ ಹೆಚ್ಚು ಕೆಲಸ ಮಾಡಬೇಕೋ ಬೇಡವೋ ಅನ್ನೋದನ್ನೂ ಕಾಲವೇ ನಿರ್ಧರಿಸಲಿದೆ’ ಎಂದು ನಟಿ ಶ್ರುತಿ  ಹರಿಹರನ್‌ ತಿಳಿಸಿದ್ದಾರೆ.

“ಸದ್ಯ ಚಿತ್ರದಲ್ಲಿ ನಟಿಸುವ ಅವಕಾಶಗಳು ಕಮ್ಮಿಯಾಗಿರಬಹು. ನಾವು ಎಲ್ಲವನ್ನೂ ಮಾಡೋದು ಜನರಿಗೋಸ್ಕರ. ಹೀಗಾಗಿ ಜನರೇ ಅದನ್ನು ನಿರ್ಧರಿಸಬೇಕು. ಆದ್ರೆ ಕಾಲ ಹೀಗೆ ಇರೋದಿಲ್ಲ’ ಎಂದು ಮಾರ್ಮಿಕವಾಗಿ ನುಡಿದರು. ಇನ್ನು ಮಿಟೂ ಪ್ರಕರಣದ ನಂತರ ಬೆಳವಣಿಗೆಗಳ ಬಗ್ಗೆ ಹಲವು ಗೊಂದಲಗಳಿವೆ  ಈ ಕುರಿತು ಮಾತನಾಡಲು ಶೀಘ್ರದಲ್ಲೇ ಮಾಧ್ಯಮಗಳ ಮುಂದೆ ಬರುವುದಾಗಿ ಶ್ರುತಿ  ತಿಳಿಸಿದರು. 

ಸದ್ಯ ಎಷ್ಟು ಸಿನಿಮಾದಲ್ಲಿ ನಟಿಸುತ್ತಿದ್ದೀರಿ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶ್ರುತಿ, ಇತ್ತೀಚೆಗೆ ಯಾವ ಹೊಸಚಿತ್ರಗಳನ್ನೂ ಒಪ್ಪಿಕೊಂಡಿಲ್ಲ. ಚೈತನ್ಯ ಅವರ ನಿರ್ದೇಶನದಲ್ಲಿ, ಚಿರಂಜೀವಿ ಸರ್ಜಾ ಹಾಗೂ ಸಂಗೀತಾ ಭಟ್‌ ಕೂಡ ಅಭಿನಯಿಸುತ್ತಿರುವ “ಆದ್ಯ’ ಅನ್ನೋ ಒಂದು ಚಿತ್ರದಲ್ಲಿ ಅಭಿನಯಿಸಿದ್ದೇನೆ. ಆ ಚಿತ್ರ ರಿಲೀಸ್‌ ಆಗಲು ರೆಡಿಯಾಗಿದೆ. ಇದರ ಜೊತೆಗೆ ಮಂಜು ಸ್ವರಾಜ್‌ ನಿರ್ದೇಶನದ ಹಾರರ್‌ ಚಿತ್ರವೊಂದರಲ್ಲೂ ಅಭಿನಯಿಸುತ್ತಿದ್ದೇನೆ ಎಂದರು. 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.