ಸುಂದರಿಯ ಸುಂದರ ನಗು


Team Udayavani, Jun 9, 2019, 2:59 AM IST

Suvarna-Sundari

ಕಳೆದ ವಾರ ಬಿಡುಗಡೆಯಾದ ಬಹುತೇಕ ಹೊಸ ಪ್ರತಿಭೆಗಳ “ಸುವರ್ಣ ಸುಂದರಿ’ ಚಿತ್ರ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಚಿತ್ರ ಬಿಡುಗಡೆಯ ನಂತರ ಮಾಧ್ಯಮಗಳ ಮುಂದೆ ಬಂದಿದ್ದ “ಸುವರ್ಣ ಸುಂದರಿ’ ಚಿತ್ರತಂಡ, ಬಿಡುಗಡೆಯ ನಂತರದ ಬೆಳವಣಿಗೆಗಳು ಮತ್ತು ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗಳ ಬಗ್ಗೆ ಮಾತನಾಡಿತು.

ಚಿತ್ರದ ಬಗ್ಗೆ ಮೊದಲು ಮಾತನಾಡಿದ ನಿರ್ದೇಶಕ ಎಂ.ಎಸ್‌.ಎನ್‌.ಸೂರ್ಯ, “ಚಿತ್ರ ಬಿಡುಗಡೆಯಾದ ಎಲ್ಲಾ ಕೇಂದ್ರಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಚಿತ್ರದ ಟೈಟಲ್‌ ಮತ್ತು ಸಬ್ಜೆಕ್ಟ್ ಎರಡೂ ಪ್ರೇಕ್ಷಕರಿಗೆ ಇಷ್ಟವಾಗಿದೆ. ಚಿತ್ರವನ್ನು ನೋಡಿದವರು ಮೆಚ್ಚುಗೆಯ ಮಾತುಗಳನ್ನ ಆಡುತ್ತಿರುವುದರಿಂದ, ನಮ್ಮ ಶ್ರಮ ಸಾರ್ಥಕವಾಗಿದೆ.

ಕಥೆಗೆ ಪೂರಕವಾಗಿ 50 ನಿಮಿಷ ಗ್ರಾಫಿಕ್ಸ್‌ ಇರುವುದು ಪ್ರೇಕ್ಷಕರಿಗೆ ಬೋನಸ್‌ ಆಗಿದೆ. ವಿಮರ್ಶಕರು ಕೂಡ ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ’ ಎಂದರು. ಇನ್ನು “ಸುವರ್ಣ ಸುಂದರಿ’ ಬಿಡುಗಡೆಯ ನಂತರ ಉತ್ತಮ ವಿಮರ್ಶೆಗಳು ಬಂದ ಕಾರಣ ಗಳಿಕೆಯಲ್ಲಿ ಕೂಡ ಚೇತರಿಕೆ ಕಂಡುಬರುತ್ತಿದೆಯಂತೆ. ಈ ಬಗ್ಗೆ ಮಾತನಾಡಿದ ನಿರ್ಮಾಪಕಿ ಎಮ್‌.ಎನ್‌ ಲಕ್ಷ್ಮೀ, “ಎಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಪ್ರದರ್ಶನವಾಗುತ್ತಿದೆ.

“ಸಂಗೊಳ್ಳಿ ರಾಯಣ್ಣ’ ನಂತರ ಜಯಪ್ರದ ನಟಿಸಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ. ಮೊದಲ ಚಿತ್ರ ಯಶಸ್ವಿಯಾಗಿರುವುದರಿಂದ ಮುಂದೆ ಸ್ಟಾರ್‌ ನಟರ ಸಿನಿಮಾ ನಿರ್ಮಾಣ ಮಾಡುವ ಯೋಚನೆ ಇದೆ. ಸದ್ಯದಲ್ಲೇ ಅದರ ಬಗ್ಗೆ ಮಾಹಿತಿ ನೀಡುವುದಾಗಿ’ ಹೇಳಿದರು.

ಇನ್ನು “ಸುವರ್ಣ ಸುಂದರಿ’ ಪ್ರಚಾರದ ಜವಾಬ್ದಾರಿ ವಹಿಸಿಕೊಂಡ ಸಂಸ್ಥೆಯೊಂದು ಚಿತ್ರತಂಡಕ್ಕೆ ಮೋಸ ಮಾಡಿದೆ. ಈ ಬಗ್ಗೆ ಮಾತನಾಡಿದ ನಿರ್ಮಾಪಕರು “ಪ್ರಚಾರದ ಸಲುವಾಗಿ ಎರಡು ಭಾಷೆಯಲ್ಲಿ ಜಾಹೀರಾತು ಹಾಕಲು ಖಾಸಗಿ ಸಂಸ್ಥೆಯೊಂದರ ಜೊತೆ ಒಪ್ಪಂದ ಮಾಡಿಕೊಂಡು ಮುಂಗಡವಾಗಿ ಹದಿಮೂರು ಲಕ್ಷ ನೀಡಲಾಗಿತ್ತು.

ಆದರೆ ಚಿತ್ರ ಬಿಡುಗಡೆ ವೇಳೆ ಆ ಸಂಸ್ಥೆ ಜಾಹೀರಾತು ಹಾಕದೆ ಮೋಸ ಮಾಡಿದೆ. ಇದರಿಂದ ಚಿತ್ರದ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ತಲುಪಲಿಲ್ಲ. ಈ ಬಗ್ಗೆ ವಾಣಿಜ್ಯ ಮಂಡಳಿಗೆ, ಪೊಲೀಸರಿಗೆ ದೂರು ಕೊಡಲು ನಿರ್ಧರಿಸಿದ್ದೇವೆ. ಇಂಥ ಸಂಸ್ಥೆಗಳಿಂದ ನಿರ್ಮಾಪಕರಿಗೆ ನಷ್ಟವಾಗುತ್ತಿದೆ.

ನಮಗೆ ಆದಂತೆ ಮುಂದೆ ಯಾವುದೇ ನಿರ್ಮಾಪಕರಿಗೆ ಆಗಬಾರದು. ಹಾಗಾಗಿ ಮೋಸ ಮಾಡಿದವರ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಿದ್ದೇವೆ’ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸ್ವಾತಿ, ರಾಜ್‌ ಕಿರಣ್‌, ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್‌ ಸೇರಿದಂತೆ ಚಿತ್ರದ ಕಲಾವಿದರು, ತಂತ್ರಜ್ಞರು ಹಾಜರಿದ್ದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

arjun kapikad kaljiga movie

Arjun Kapikad; ತುಳುನಾಡಿನ ಕಲ್ಜಿಗದ ಕಥೆ: ಕರಾವಳಿ ಮಂದಿಯ ಮತ್ತೊಂದು ಸಾಹಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.