ಮಿಸ್‌ ನಂದಿನಿ ಪಾಠ ಪರಿಪೂರ್ಣ! : ಸರ್ಕಾರಿ ಶಾಲೆಯಲ್ಲಿ ಪ್ರಿಯಾಂಕಾ ಟೀಚರ್‌


Team Udayavani, Jun 1, 2022, 11:06 AM IST

ಮಿಸ್‌ ನಂದಿನಿ ಪಾಠ ಪರಿಪೂರ್ಣ! : ಸರ್ಕಾರಿ ಶಾಲೆಯಲ್ಲಿ ಪ್ರಿಯಾಂಕಾ ಟೀಚರ್‌

ನಟಿ ಪ್ರಿಯಾಂಕಾ ಉಪೇಂದ್ರ “ಮಿಸ್‌. ನಂದಿನಿ’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದೆ. ಅಂತಿಮ ಹಂತದಲ್ಲಿ ಬೆಂಗಳೂರಿನ ಹೊರವಲಯದ ಕಡಬಗೆರೆ ಬಳಿ ಚಿತ್ರದ ಕ್ಲೈಮ್ಯಾಕ್ಸ್‌ ದೃಶ್ಯಗಳನ್ನು ಚಿತ್ರೀಕರಿಸಿ ಚಿತ್ರತಂಡ ಕುಂಬಳಕಾಯಿ ಒಡೆದಿದೆ. ಇನ್ನುಹೆಸರೇ ಹೇಳುವಂತೆ, “ಮಿಸ್‌. ನಂದಿನಿ’ ಮಹಿಳಾ ಪ್ರಧಾನ ಚಿತ್ರವಾಗಿದ್ದು, ನಟಿ ಪ್ರಿಯಾಂಕಾಉಪೇಂದ್ರ ಇದೇ ಮೊದಲ ಬಾರಿಗೆ ಚಿತ್ರದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

“ಮಿಸ್‌. ನಂದಿನಿ’ ಚಿತ್ರದ ಚಿತ್ರೀಕರಣ ಮುಗಿಯುತ್ತಿದ್ದಂತೆ, ಮಾತಿಗೆ ಸಿಕ್ಕ ಪ್ರಿಯಾಂಕಾ, ಚಿತ್ರದ ಬಗ್ಗೆ, ತಮ್ಮ ಪಾತ್ರದ ಬಗ್ಗೆ ಮತ್ತು ಚಿತ್ರೀಕರಣದ ಅನುಭವಗಳ ಬಗ್ಗೆ ಮಾತನಾಡಿದರು. “ಮೊದಲ ಬಾರಿಗೆ ಇಂಥದ್ದೊಂದು ಸಬ್ಜೆಕ್ಟ್‌ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಖುಷಿಯಾಗುತ್ತಿದೆ. ನಮ್ಮ ಮಕ್ಕಳು ಗೌರ್ನಮೆಂಟ್‌ ಸ್ಕೂಲ್‌ನಲ್ಲಿ ಓದಬೇಕಾ ಅಥವಾ ಪ್ರೈವೇಟ್‌ ಸ್ಕೂಲ್‌ನಲ್ಲಿ ಓದಬೇಕಾ ಅಂಥಡಿಸ್ಕಷನ್‌ ಸುತ್ತಮುತ್ತ ಆಗಾಗ್ಗೆ ನಡೆಯುತ್ತಿರುತ್ತದೆ. ಇಂಥ ವಿಷಯವನ್ನ ಯಾರೂ ಸೀರಿಯಸ್‌ ಆಗಿ ತೆಗೆದುಕೊಂಡಿರುವುದಿಲ್ಲ. ಇದೇ ಸಬೆjಕ್ಟ್ ಇಟ್ಟುಕೊಂಡು ಈ ಸಿನಿಮಾ ಬರುತ್ತಿದೆ. ಇದರಲ್ಲಿ ನನ್ನದು ಪ್ರೈಮೆರಿ ಸ್ಕೂಲ್‌ ಟೀಚರ್‌ ಪಾತ್ರ. ತುಂಬ ಎಮೋಶನ್‌ ಸೀನ್‌ಗಳು ಇದರಲ್ಲಿದೆ. ನಾನೂ ಟೀಚರ್‌ ಆಗ್ಬೇಕು ಅಂಥಅಂದುಕೊಂಡಿದ್ದೆ. ಆದ್ರೆ ನಿಜ ಜೀವನದಲ್ಲಿ ಅದು ಆಗಿರಲಿಲ್ಲ. ಈಗ ಸಿನಿಮಾದಮೂಲಕ ಆ ಕನಸು ನನಸಾಗುತ್ತಿದೆ. ಒಳ್ಳೆಯ ಟೀಮ್‌ ವರ್ಕ್‌ನಿಂದ ಇಡೀಸಿನಿಮಾ ತುಂಬ ಚೆನ್ನಾಗಿ ಬರುತ್ತಿದೆ. ಪ್ರೇಕ್ಷಕರಿಗೆ ತುಂಬ ಇಷ್ಟವಾಗುತ್ತದೆ’ ಎಂಬ ಭರವಸೆ ವ್ಯಕ್ತಪಡಿಸಿದರು.

ಹಿರಿಯ ನಟಿ ಭವ್ಯಾ “ಮಿಸ್‌. ನಂದಿನಿ’ ಚಿತ್ರದಲ್ಲಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಹುಡುಗಿಯೊಬ್ಬಳ ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಈ ಸಿನಿಮಾದ ಸಬ್ಜೆಕ್ಟ್ ಕೇಳುತ್ತಿದ್ದಂತೆ, ತುಂಬ ಇಷ್ಟವಾಯ್ತು. ಇದು ನಮ್ಮ ನಡುವೆಯೇ ನಡೆಯಯವಂಥ ಕಥೆ. ಪ್ರತಿಯೊಂದು ಪಾತ್ರಗಳು ಮತ್ತು ದೃಶ್ಯಗಳು ನೈಜವಾಗಿ ಮೂಡಿಬರುತ್ತಿದೆ. ಬಹಳ ದಿನಗಳ ನಂತರ ಒಂದೊಳ್ಳೆತಂಡದ ಜೊತೆ ಕೆಲಸ ಮಾಡಿದ್ದು ಖುಷಿಕೊಟ್ಟಿದೆ’ ಎನ್ನುವುದು ಭವ್ಯಾ ಮಾತು.

ಚಿತ್ರದಲ್ಲಿ ನಟ ಡ್ಯಾನಿ ಕುಟ್ಟಪ್ಪ ಎಸ್‌ಡಿಎಂಸಿ ಅಧ್ಯಕ್ಷನಾಗಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. “ಒಂದು ಸರ್ಕಾರಿ ಶಾಲೆಯನ್ನು ಹೇಗೆ ಹಾಳು ಮಾಡಬಹುದು ಎಂದು ತೋರಿಸುವಂಥ ಪಾತ್ರ ನನ್ನದು. ತುಂಬ ಚೆನ್ನಾಗಿ ಸಿನಿಮಾ ಮೂಡಿಬರುತ್ತಿದೆ. ಪ್ರತಿಯೊಬ್ಬ ಪೋಷಕರು ನೋಡಬೇಕಾದ ಸಿನಿಮಾ ಇದು’ ಎನ್ನುತ್ತಾರೆ ಡ್ಯಾನಿ ಕುಟ್ಟಪ್ಪ.

“ಮಿಸ್‌. ನಂದಿನಿ’ ಚಿತ್ರದ ನಿರ್ದೇಶಕ ಗುರುದತ್‌, ಸಂಗೀತ ನಿರ್ದೇಶಕ ಸಾಯಿ ಸರ್ವೇಶ್‌ ಮತ್ತಿತರರು ಚಿತ್ರೀಕರಣದ ಅನುಭವ ಹಂಚಿಕೊಂಡರು. “ಆರ್‌.ಕೆ ಫಿಲಂಸ್‌’ಬ್ಯಾನರ್‌ ಅಡಿಯಲ್ಲಿ ರಾಮ್‌ ಕುಮಾರ್‌ ಕತ್ತಿ “ಮಿಸ್‌. ನಂದಿನಿ’ ಚಿತ್ರಕ್ಕೆ ಬಂಡವಾಳ ಹೂಡಿನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಪ್ರಿಯಾಂಕಾ ಜೊತೆಗೆ ಅಪರ್ಣಾ, ಕೆ.ಪಿ ಶ್ರೀಧರ್‌, ಸೂರಜ್‌,ಅನಮೋಲ್‌, ಮಹೇಂದ್ರ, ಮಲ್ಲಿಕಾ, ರಾಕೇಶ್‌, ಶಶಿಧರ್‌ ಗೌಡ ಮೊದಲಾದವರು ಇತರಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ ಶೂಟಿಂಗ್‌ ಮುಗಿಸಿರುವ ಚಿತ್ರತಂಡ ಜುಲೈ ವೇಳೆಗೆ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.