ಎಂಎಂಸಿಎಚ್ ಗೆ ರೈಲ್ವೆ ಮ್ಯಾನೇಜರ್ ಹಾಡು
Team Udayavani, Mar 1, 2018, 2:22 PM IST
ಮುಸ್ಸಂಜೆ ಮಹೇಶ್ ನಿರ್ದೇಶನದ “ಎಂಎಂಸಿಎಚ್’ ಚಿತ್ರದ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಕನ್ನಡ ಚಿತ್ರರಂಗದ ನಾಲ್ವರು ಹಿರಿಯ ಕಲಾವಿದೆಯರ ಪುತ್ರಿಯರು ನಟಿಸುತ್ತಿರುವ ಈ ಚಿತ್ರ ಈಗಾಗಲೇ ಚಿತ್ರೀಕರಣ ಮುಗಿಸಿ, ಇನ್ನೇನು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದೆ. ಈಗ ಈ ಚಿತ್ರದ ಹೊಸ ಸುದ್ದಿಯೆಂದರೆ, ಇದೇ ಮೊದಲ ಬಾರಿಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಜನರಲ್ ಮ್ಯಾನೇಜರ್ ಆಗಿರುವ ದಯಾನಂದ್ ಅವರು ಹಾಡೊಂದಕ್ಕೆ ದನಿ ನೀಡಿದ್ದಾರೆ.
ಗೀತರಚನೆಕಾರ ಗೌಸ್ಪೀರ್ ಬರೆದ “ಗಾಳಿ ಬೀಸಿ ಗಾಳಿ ಬೀಸಿ ದೀಪ ಆರಿದೆ…’ ಎಂಬ ಹಾಡಿಗೆ ರಾಜಾಜಿನಗರದಲ್ಲಿರುವ ಆದರ್ಶ ಸ್ಟುಡಿಯೋದಲ್ಲಿ ದಯಾನಂದ್ ಅವರು ಹಾಡಿದ್ದಾರೆ. ಈ ಹಿಂದೆ ಹಲವು ಭಾವಗೀತೆ ಮತ್ತು ಭಕ್ತಿಗೀತೆಗಳನ್ನು ಹಾಡಿದ್ದ ದಯಾನಂದ್ ಅವರು ಇದೇ ಮೊದಲ ಸಲ ಚಿತ್ರಕ್ಕೆ ಹಾಡಿದ್ದಾರೆ.
ಚಿತ್ರಕ್ಕೆ ಶ್ರೀಧರ್ ವಿ.ಸಂಭ್ರಮ್ ಸಂಗೀತ ನೀಡಿದ್ದಾರೆ. ಈ ಚಿತ್ರವನ್ನು ಎಸ್. ಪುರುಷೋತ್ತಮ ಜಾನಕಿರಾಮ ಹಾಗೂ ಅರವಿಂದ್ ಜೊತೆಗೂಡಿ ನಿರ್ಮಾಣ ಮಾಡಿದ್ದಾರೆ. ರಜನಿಕಾಂತ್ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಕನ್ನಡ ಚಿತ್ರರಂಗದ ನಾಲ್ವರು ಹಿರಿಯ ಕಲಾವಿದೆಯರ
ಪುತ್ರಿಯರು ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಮೇಘನಾರಾಜ್ ಪ್ರಥಮಾ ಪ್ರಸಾದ್, ಸಂಯುಕ್ತಾ ಹೊರನಾಡು ಹಾಗೂ ನಕ್ಷತ್ರ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ