ಮಮ್ಮಿ ರಿಟರ್ನ್ಸ್


Team Udayavani, Aug 2, 2018, 11:50 AM IST

mummy.jpg

ಕನ್ನಡ ಚಿತ್ರರಂಗದಲ್ಲಿ ಅಮ್ಮನ ಪ್ರೀತಿ ಜಾಸ್ತಿಯಾಗಿದೆ. ಇದಕ್ಕೆ ಇತ್ತೀಚೆಗೆ ಒಂದರ ಹಿಂದೊಂದು ಉದಾಹರಣೆಗಳು ಸಿಗುತ್ತಿವೆ. ಈಗಾಗಲೇ ಚಿರಂಜೀವಿ ಸರ್ಜಾ ಅಭಿನಯದ “ಅಮ್ಮಾ ಐ ಲವ್‌ ಯೂ’ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ಅಮ್ಮನ ಪಾತ್ರವನ್ನು ಪ್ರಧಾನವಾಗಿಟ್ಟುಕೊಂಡು ಇನ್ನಷ್ಟು ಚಿತ್ರಗಳು ತಯಾರಾಗುತ್ತಿವೆ.

ಈ ಸಾಲಿನಲ್ಲಿ ಪ್ರಮುಖವಾಗಿ ಸಿಗುವ ಚಿತ್ರ “ತಾಯಿಗೆ ತಕ್ಕ ಮಗ’. ಇನ್ನು ಹರಿಪ್ರಿಯಾ ಅವರ 25ನೇ ಚಿತ್ರವಾದ “ಡಾಟರ್‌ ಆಫ್ ಪಾರ್ವತಮ್ಮ’ದಲ್ಲೂ ತಾಯಿ ಪಾತ್ರಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ. ಇನ್ನು ವಿನೋದ್‌ ಪ್ರಭಾಕರ್‌ ಅಭಿನಯದ “ಫೈಟರ್‌’ ಚಿತ್ರದಲ್ಲೂ ನಾಯಕನ ಪಾತ್ರಕ್ಕೆ ಮಹತ್ವ ಎಷ್ಟಿದೆಯೋ, ತಾಯಿ ಪಾತ್ರಕ್ಕೂ ಅಷ್ಟೇ ಮಹತ್ವವಿದೆಯಂತೆ.

ಅದರಲ್ಲೂ ಈ ಮೂರು ಚಿತ್ರಗಳ ಪೈಕಿ ಎರಡರಲ್ಲಿ ಸುಮಲತಾ ಅಂಬರೀಶ್‌ ಅವರು ತಾಯಿಯಾಗಿ ನಟಿಸಿರುವುದು ವಿಶೇಷ. ಹಾಗೆ ನೋಡಿದರೆ, ಕನ್ನಡದಲ್ಲಿ ತಾಯಿಯ ಮಮತೆ, ತ್ಯಾಗ, ಪ್ರೀತಿಯನ್ನು ಎತ್ತಿಹಿಡಿಯುವಂತಹ ಹಲವು ಸಿನಿಮಾಗಳು ಬಂದಿವೆ. “ತಾಯಿ ದೇವರು’, “ತಾಯಿ ಕರುಳು’, “ತಾಯಿಯ ಮಡಿಲಲ್ಲಿ’, “ತಾಯಿಯ ಆಸೆ’, “ತಾಯಿಯ ಹೊಣೆ’, “ತಾಯಿ ಕನಸು’, “ತಾಯಿಯ ನುಡಿ’,  “ಅಮ್ಮ’, “ತಾಯಿ’ ಸೇರಿದಂತೆ ಹಲವು ಚಿತ್ರಗಳು ತಾಯಿಯ ಪ್ರೀತಿ ಮತ್ತು ಮಮತೆಯ ಕುರಿತಾಗಿ ಬಿಡುಗಡೆಯಾಗಿವೆ.

ಆದರೆ, ಅದರ ನಂತರ ಒಂದು ದೊಡ್ಡ ಗ್ಯಾಪ್‌ ಆಗಿತ್ತು ಎಂದರೆ ತಪ್ಪಿಲ್ಲ. ಒಂದು ಹಂತದಲ್ಲಿ ತಾಯಿ ಪಾತ್ರ ಎಂದರೆ ಅದು ಶೋಪೀಸ್‌ ಎನ್ನುವಂತಹ ಪರಿಸ್ಥಿತಿ ಇತ್ತು. ಈ ಕುರಿತು ಕೆಲವು ಹಿರಿಯ ಪೋಷಕ ಕಲಾವಿದೆಯರು ಬಹಿರಂಗವಾಗಿಯೇ ಬೇಸರ ತೋಡಿಕೊಂಡಿದ್ದರು. ಅವಕಾಶಗಳು ಸಿಗುತ್ತಿವೆಯಾದರೂ, ಎಷ್ಟೋ ಚಿತ್ರಗಳಲ್ಲಿ ಮಾಡುವುದಕ್ಕೆ ಏನು ಕೆಲವೇ ಇರುವುದಿಲ್ಲ,

ಸುಮ್ಮನೆ ಹೀಗೆ ಬಂದು ಹಾಗೆ ಹೋಗುವುದಕ್ಕೆ ಪಾತ್ರಗಳು ಸೀಮಿತವಾಗುತ್ತಿದೆ ಎಂದು ಹೇಳಿಕೊಂಡಿದ್ದರು. ಈಗ ತಾಯಿ ಪಾತ್ರಗಳಿಗೆ ಮಹತ್ವ ಸಿಗುತ್ತಿರುವುದಷ್ಟೇ ಅಲ್ಲ, ತಾಯಿಯ ಇನ್ನೊಂದು ಮಜಲನ್ನು ತೋರಿಸಲಾಗುತ್ತಿದೆ. ಇದುವರೆಗೂ ತಾಯಿ ಎಂದರೆ ಮಮತೆ, ತ್ಯಾಗ, ಪ್ರೀತಿಗೆ ಮಾತ್ರ ಸೀಮಿತವಾಗಿತ್ತು. ಆದರೆ, ಮುಂದೆ ಬಿಡುಗಡೆಯಾಗುತ್ತಿರುವ ಚಿತ್ರಗಳಲ್ಲಿ ತಾಯಿ ಒಬ್ಬ ಹೋರಾಟಗಾರ್ತಿಯೂ ಆಗಿದ್ದಾಳೆ ಎನ್ನುವುದು ವಿಶೇಷ.

ಇಲ್ಲಿ ತಾಯಿ ಬರೀ ಮಮತಾಮಯಿಯಷ್ಟೇ ಅಲ್ಲ ಅಥವಾ ಬರೀ ಕಣ್ಣೀರು ಸುರಿಸುವುದಷ್ಟೇ ಅಲ್ಲ, ಅದರಾಚೆಗೆ ಹೋರಾಟ, ಸಂಘಟನೆ ಮಾಡುವುದರ ಜೊತೆಗೆ ಮಕ್ಕಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾಳೆ. ಎಲ್ಲಕ್ಕಿಂತ ಹೆಚ್ಚಾಗಿ, ಕೆಲವು ವರ್ಷಗಳಿಂದ ಚಿತ್ರದ ಶೀರ್ಷಿಕೆಗಳಿಂದ ದೂರವೇ ಉಳಿದಿದ್ದ ಅಮ್ಮ, ಈಗ ಶೀರ್ಷಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತೆ ಫಾರ್ಮ್ಗೆ ಬಂದಿದ್ದಾಳೆ.

ಟಾಪ್ ನ್ಯೂಸ್

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.