ಇದು ಓಲ್ಡ್‌  ಅಲ್ಲ, ಯಂಗ್‌ ಮಾಂಕ್‌!: ಹೊಸಬರಿಗೆ ಸಾಥ್ ನೀಡಿದ ರಿಷಭ್ ಶೆಟ್ಟಿ


Team Udayavani, Aug 6, 2022, 3:01 PM IST

monk the young kannada movie

ಒಂದರ ಮೇಲೊಂದು ಹೊಸಬರ ಚಿತ್ರ ತಯಾರಾಗುತ್ತಲೇ ಇವೆ. ಇದೀಗ “ಮಾಂಕ್‌ ದಿ ಯಂಗ್‌’ ಎಂಬ ವಿಭಿನ್ನ ಶೀರ್ಷಿಕೆಯೊಂದಿಗೆ ಚಿತ್ರವೊಂದು ತಯಾರಾಗುತ್ತಿದೆ.

ಮಾಶ್ಚಿತ್‌ ಸೂರ್ಯ ಚಿತ್ರ ನಿರ್ದೇಶನದ ಜೊತೆಗೆ ಕಥೆ, ಚಿತ್ರ ಕಥೆ, ಸಂಭಾಷಣೆಯನ್ನು ಬರೆದಿದ್ದಾರೆ. “ವೊಲ್‌ಕೆನೋ ಪ್ರೊಡಕ್ಷನ್‌’ ಬ್ಯಾನರ್‌ನಲ್ಲಿ , ಕರ್ನಲ್‌ ಎ ರಾಜೇಂದ್ರ, ಲಾಲ್‌ ಚಂದ್‌ ಕಟರ್‌, ವಿನಯ್‌ ರೆಡ್ಡಿ, ಗೋಪಿಚಂದ್‌, ಸರೋವರ್‌ ಐದು ಜನ ಚಿತ್ರ ನಿರ್ಮಾಣ ಮಾಡಿದ್ದಾರೆ. ವಿಶೇಷವೆಂದರೆ ಐದು ಜನ ನಿರ್ಮಾಪಕರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಕರ್ನಾಟಕ ಚಲನಚಿತ್ರ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್‌, ನಟ ರಿಷಭ್‌ ಶೆಟ್ಟಿ “ಮಾಂಕ್‌ ದಿ ಯಂಗ್‌’ ಚಿತ್ರದ ಪೋಸ್ಟರ್‌ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಚಿತ್ರ ನಿರ್ದೇಶಕ ಮಾಶ್ಚಿತ್‌ ಸೂರ್ಯ ಮಾತನಾಡಿ, “ಒಂದು ಕಿರುಚಿತ್ರ ಮಾಡುವ ಚಿಂತನೆಯಲ್ಲಿ ಪ್ರಾರಂಭವಾದ ಈ ಚಿತ್ರ, ಇಂದು ಸಿನಿಮಾವಾಗಿದೆ. ವಿಂಟೆಜ್‌ ಫ್ಯಾಂಟಸಿ ಥ್ರಿಲ್ಲರ್‌ ಕಥಾಹಂದರದ ಚಿತ್ರ ಇದಾಗಿದೆ. ವಿಸ್ಕಿ ಹಾಗೂ ವೈನ್‌ ಕಥೆಯುಳ್ಳ ಚಿತ್ರ ಇದಾಗಿದ್ದು , ಬ್ರಿಟಿಷ್‌ ಕಾಲದ ವಿಂಟೆಜ್‌ ಲುಕ್‌ನ ಸಂದರ್ಭಗಳನ್ನು ಕಾಣಬಹುದು. ಚಿತ್ರದಲ್ಲಿ ವಿಂಟೆಜ್‌ ಲುಕ್‌ ಜೊತೆಗೆ ಅದೇ ಥರದ ಸಾಹಸಮಯ ಸನ್ನಿವೇಶಗಳು ಇವೆ. ಚಿತ್ರಕ್ಕೆ ಅನೂಕುಲವಾಗುವಂತೆ ಹಳೆ ಶೈಲಿಯ ಫೈಟಿಂಗ್‌ ದೃಶ್ಯಗಳನ್ನು ಚಿತ್ರೀಕರಿಸಿದ್ದೇವೆ ಎಂದರು.

ನಿರ್ಮಾಪಕರಲ್ಲೊಬ್ಬರಾದ ಕರ್ನಲ್‌ ಎ ರಾಜೇಂದ್ರ ಮಾತನಾಡಿ, “ನಾನು ನನ್ನ 17 ನೇ ವಯಸ್ಸಿಗೆ ಸೇನೆಗೆ ಸೇರಿದ್ದೆ, 57 ನೇ ವಯಸ್ಸಿಗೆ ನಿವೃತ್ತಿ ಹೊಂದಿದಾಗ ಭಿನ್ನವಾಗಿ ಏನನ್ನಾದರೂ ಮಾಡುವ ಆಲೋಚನೆ ಇತ್ತು. ಆಗ ಚಿತ್ರವೊಂದರಲ್ಲಿ ನಟಿಸಿದ್ದೆ. ಅದನ್ನು ಗುರುತಿಸಿ ನಿರ್ದೇಶಕ ಸೂರ್ಯ ನನಗೆ ಒಂದು ರೋಲ್‌ ನೀಡಿದರು. ಮೊದಲು ಕೇವಲ ನಟನಾಗಿ ಬಂದಿದ್ದ ನಾನು ನಂತರ ಚಿತ್ರಕ್ಕೆ ಬಂಡವಾಳವನ್ನು ಹಾಕಿ ನಿರ್ಮಾಪಕನಾದೆ. ಕನ್ನಡ ಮಣ್ಣಲ್ಲಿ ಜೀವಿಸುವ ನಾನು ಕನ್ನಡಕ್ಕಾಗಿ ಒಂದು ಚಿತ್ರ ಮಾಡುವ ಆಸೆಯಿಂದ ಈ ಚಿತ್ರತಂಡದ ಭಾಗವಾದೆ’ ಎಂದರು.

ಚಿತ್ರದಲ್ಲಿ ನೂತನ ಪ್ರತಿಭೆ ಸರೋವರ್‌ ಹಾಗೂ ಸೌಂದರ್ಯ ಗೌಡ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಉಷಾ ಭಂಡಾರಿ, ಪ್ರಣಯ ಮೂರ್ತಿ, ಕರ್ನಲ್‌ ಎ ರಾಜೇಂದ್ರ ಮುಂತಾದವರು ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಕಾರ್ತಿಕ್‌ ಶರ್ಮಾ ಛಾಯಾಗ್ರಹಣ, ಥ್ರಿಲ್ಲರ್‌ ಮಂಜು ಸಾಹಸ ನಿರ್ದೇಶನವಿದೆ. ಇನ್ನು ಮಾಂಕ್‌ ದಿ ಯಂಗ್‌ ಚಿತ್ರವನ್ನು ಪಶ್ಚಿಮ ಬಂಗಾಳ, ಉಡುಪಿ, ಮಂಗಳೂರು, ಬೆಂಗಳೂರು ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಚಿತ್ರೀಕರಣವನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ.

ಟಾಪ್ ನ್ಯೂಸ್

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.