![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
Sandalwood actress: ‘ಟಗರುʼ ಪುಟ್ಟಿಗೆ ಕೂಡಿಬಂತು ಕಂಕಣ ಭಾಗ್ಯ; ವರ ಯಾರು?
Team Udayavani, Apr 12, 2024, 1:25 PM IST
![Sandalwood actress: ‘ಟಗರುʼ ಪುಟ್ಟಿಗೆ ಕೂಡಿಬಂತು ಕಂಕಣ ಭಾಗ್ಯ; ವರ ಯಾರು?](https://www.udayavani.com/wp-content/uploads/2024/04/8-6-620x372.jpg)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ʼಟಗರು ಪುಟ್ಟಿʼ ಎಂದೇ ಫೇಮ್ ಆಗಿರುವ ನಟಿ ಮಾನ್ವಿತಾ ಕಾಮತ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಶೀಘ್ರದಲ್ಲಿ ಅವರು ದಾಂಪತ್ಯ ಜೀವನಕ್ಕೆ ಕಾಲಿಡುವುದಾಗಿ ಮದುವೆಯ ದಿನಾಂಕವನ್ನು ವಿಶಿಷ್ಟವಾಗಿ ಹಂಚಿಕೊಂಡಿದ್ದಾರೆ.
ಆರ್ ಜೆಯಾಗಿ ಗುರುತಿಸಿಕೊಂಡಿದ್ದ ಮಾನ್ವಿತಾ ದುನಿಯಾ ಸೂರಿ ಅವರ ʼಕೆಂಡಸಂಪಿಗೆʼ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರಿಗೆ ಮತ್ತಷ್ಟು ಹೆಸರು ಹಾಗೂ ಅವಕಾಶ ತಂದುಕೊಟ್ಟದ್ದು ಶಿವರಾಜ್ ಕುಮಾರ್ ಅವರ ʼಟಗರುʼ ಸಿನಿಮಾದ ಪುಟ್ಟಿ ಪಾತ್ರ. ಒಂದಷ್ಟು ಸಿನಿಮಾದ ಮೂಲಕ ಚಂದನವನದಲ್ಲಿ ಬೇಡಿಕೆಯ ನಟಿಯಾಗಿ ಕಾಣಿಸಿಕೊಂಡ ಮಾನ್ವಿತಾ ಹಸೆಮಣೆ ಏರಲು ಸಜ್ಜಾಗಿರುವ ವಿಚಾರವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಕುಮಾರ್ ಅವರೊಂದಿಗೆ ಮಾನ್ವಿತಾ ಮೇ.1 ರಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕೊಂಕಣಿ ಸಂಪ್ರದಾಯದಂತೆ ವಿವಾಹ ನಡೆಯಲಿದೆ. ಏಪ್ರಿಲ್ 29ಕ್ಕೆ ಮೆಹಂದಿ ಕಾರ್ಯಕ್ರಮ ಜರುಗಿದರೆ, ಏಪ್ರಿಲ್ 30ರಂದು ಸಂಗೀತ್ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಆರತಕ್ಷತೆ ಬಗ್ಗೆ ಸದ್ಯ ಯಾವ ಮಾಹಿತಿಯನ್ನು ಅವರು ಹಂಚಿಕೊಂಡಿಲ್ಲ.
ಜೊತೆಯಲ್ಲಿ ಜೊತೆ ಜೊತೆಯಲ್ಲಿ ಹಾಡಿನೊಂದಿಗೆ ಬಹಳ ಕ್ರಿಯೇಟಿವ್ ಆಗಿ ತಮ್ಮ ಮದುವೆ ಆಮಂತ್ರಣವನ್ನು ಅಭಿಮಾನಿಗಳೊಂದಿಗೆ ಮಾನ್ವಿತಾ ಹಂಚಿಕೊಂಡಿದ್ದಾರೆ.
ದುನಿಯಾ ವಿಜಯ್ ನಟನೆಯ ‘ಕನಕ’, ‘ಚೌಕ’, ‘ತಾರಕಾಸುರ’, ‘ರಿಲ್ಯಾಕ್ಸ್ ಸತ್ಯ’, ‘ಇಂಡಿಯಾ ವರ್ಸಸ್ ಇಂಗ್ಲೆಂಡ್’, ‘ಶಿವ 143’ ಮುಂತಾದ ಸಿನಿಮಾಗಳಲ್ಲಿ ಮಾನ್ವಿತಾ ನಟಿಸಿದ್ದಾರೆ. ಸದ್ಯ ಅವರ ‘ಅಪ್ಪಾ ಐ ಲವ್ ಯೂ’ ಸಿನಿಮಾ ತೆರೆಕಂಡಿದ್ದು, ಕೈಯಲ್ಲಿ ಇನ್ನೂ ‘ಹ್ಯಾಪಿಲಿ ಮ್ಯಾರೀಡ್’ , ‘ಬ್ಯಾಡ್’, ‘ರಾಜಸ್ಥಾನ್ ಡೈರೀಸ್’, ಸಿನಿಮಾಗಳು ಬಿಡುಗಡೆಯಾಗಬೇಕಿದೆ.
ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ಮಾನ್ವಿತಾ ಅವರಿಗೆ ಅನೇಕರು ಶುಭ ಹಾರೈಸಿದ್ದಾರೆ.
View this post on Instagram
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.