ಚಿತ್ರ ವಿಮರ್ಶೆ: ಪ್ರೀತಿ, ಸ್ನೇಹ, ರಾಬರಿ


Team Udayavani, Mar 11, 2023, 1:15 PM IST

ಚಿತ್ರ ವಿಮರ್ಶೆ: ಪ್ರೀತಿ, ಸ್ನೇಹ, ರಾಬರಿ

ಬಾಲ್ಯದಿಂದಲೇ ಚುರುಕಿನ ಸ್ವಭಾವದ ಹುಡುಗನಾದ ಕೃಷ್ಣನ ತಂದೆ-ತಾಯಿ ತಾವು ಮಾಡಿರದ ರಾಬರಿ ಅಪವಾದದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಾರೆ. ತನ್ನ ಹೆತ್ತವರ ಸಾವಿನ ನಂತರ ಅವರ ಸಾವಿಗೆ ಕಾರಣವಾದ ರಾಬರಿಯನ್ನೇ ಕೃಷ್ಣ ವೃತ್ತಿಯನ್ನಾಗಿ ಮಾಡಿಕೊಂಡು ಬೆಳೆಯುತ್ತಾನೆ. ಹೀಗೆ ಚಿಕ್ಕವಯಸ್ಸಿನಲ್ಲಿಯೇ ರಾಬರಿ ಮಾಡಿಕೊಂಡು ಹಣದ ಹಿಂದೆ ಬೀಳುವ ಹುಡುಗನ ಭವಿಷ್ಯ ಮುಂದೇನಾಗುತ್ತದೆ ಎಂಬುದೇ, ಈ ವಾರ ತೆರೆಗೆ ಬಂದಿರುವ “1 ರಾಬರಿ ಕಥೆ’ ಸಿನಿಮಾದ ಕಥಾಹಂದರ.

ಸಿನಿಮಾದ ಹೆಸರೇ ಹೇಳುವ “1 ರಾಬರಿ ಕಥೆ’ ರಾಬರಿ ಕಥೆಯೊಂದರ ಸುತ್ತ ನಡೆಯುವ ಸಿನಿಮಾ. ರಾಬರಿ ಜೊತೆಗೆ ಒಂದು ಲವ್‌ಸ್ಟೋರಿ, ಅಲ್ಲಲ್ಲಿ ಕಾಮಿಡಿ, ರೊಮ್ಯಾಂಟಿಕ್‌ ದೃಶ್ಯಗಳು, ಡ್ಯುಯೆಟ್‌ ಹಾಡು, ಡ್ಯಾನ್ಸ್‌, ಆ್ಯಕ್ಷನ್‌, ಸೆಂಟಿಮೆಂಟ್‌ ಹೀಗೆ ಮಾಸ್‌ ಸಿನಿಪ್ರಿಯರಿಗೆ ಇಷ್ಟವಾಗುವಂತಹ ಒಂದಷ್ಟು ಅಂಶಗಳನ್ನು ಚಿತ್ರಕಥೆಯಲ್ಲಿ ಸೇರಿಸಿ “1 ರಾಬರಿ ಕಥೆ’ಯನ್ನು ತೆರೆಗೆ ತರಲಾಗಿದೆ.

ಸಿನಿಮಾದ ಕಥೆಯ ಎಳೆ ಚೆನ್ನಾಗಿದ್ದರೂ, ಚಿತ್ರಕಥೆಗೆ ಕೊಂಚ ವೇಗ ನೀಡಿ, ನಿರೂಪಣೆ ಮತ್ತು ಸಂಭಾಷಣೆಯ ಕಡೆಗೆ ಚಿತ್ರತಂಡ ಇನ್ನಷ್ಟು ಗಮನ ನೀಡಿದ್ದರೆ, “1 ರಾಬರಿ ಕಥೆ’ ಇನ್ನಷ್ಟು ಪರಿಣಾಮಕಾರಿಯಾಗಿ ಪ್ರೇಕ್ಷಕರ ಮನಮುಟ್ಟುವ ಸಾಧ್ಯತೆಗಳಿದ್ದವು.

ನಟ ರಣಧೀರ್‌ ಗೌಡ “1 ರಾಬರಿ ಕಥೆ’ ಸಿನಿಮಾದಲ್ಲಿ ನಾಯಕನಾಗಿ ಮಾಸ್‌ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನವ ನಟಿ

ರಿಷ್ವಿ ಭಟ್‌ ನಾಯಕಿಯಾಗಿ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಉಳಿದಂತೆ ಹಿರಿಯ ನಟ ಸುಂದರ ರಾಜ್‌, ಕರಿಸುಬ್ಬು, ತಬಲ ನಾಣಿ, ಜಹಾಂಗೀರ್‌, ಶಿವರಾಜ್‌ ಕೆ. ಆರ್‌. ಪೇಟೆ, ಸಂಪತ್‌ ಮೈತ್ರೇಯ, ಗಿರೀಶ್‌ ಶಿವಣ್ಣ, ಮೂಗು ಸುರೇಶ, ಎಂ. ಕೆ ಮಠ, ನವೀನ್‌ ಪಡೀಲ್‌ ಹೀಗೆ ಬೃಹತ್‌ ಕಲಾವಿದರ ತಾರಾಗಣವೇ ಸಿನಿಮಾದಲ್ಲಿದೆ.

ಇನ್ನು ಸಿನಿಮಾದ ಒಂದೆರಡು ಹಾಡುಗಳು ಗುನುಗುವಂತಿದ್ದು, ಚಿತ್ರದ ಛಾಯಾಗ್ರಹಣ ದೃಶ್ಯಗಳನ್ನು ಅಂದವಾಗಿಸಿದೆ. ಕೆಲ ಲೋಪಗಳನ್ನು ಬದಿಗಿಟ್ಟು ಹೇಳುವುದಾದರೆ, “1 ರಾಬರಿ ಕಥೆ’ ಒಮ್ಮೆ ನೋಡಿ ಹೊಸಬರ ಪ್ರಯತ್ನಕ್ಕೆ ಬೆನ್ನುತಟ್ಟಬಹುದಾದ ಸಿನಿಮಾ ಎನ್ನಬಹುದು.

-ಜಿಎಸ್‌ಕೆ

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.