Act 1978 : ಹೋರಾಟದ ಹಾದಿಯಲ್ಲಿ ಕಣ್ಣೀರ ಕಹಾನಿ


Team Udayavani, Nov 21, 2020, 12:59 PM IST

ಹೋರಾಟದ ಹಾದಿಯಲ್ಲಿ ಕಣ್ಣೀರ ಕಹಾನಿ

ಚಿತ್ರ: ಆಕ್ಟ್ 1978

ನಿರ್ಮಾಣ: ದೇವರಾಜ್‌ ಆರ್‌

ನಿರ್ದೇಶನ: ಮಂಸೋರೆ

ತಾರಾಗಣ: ಯಜ್ಞಾ ಶೆಟ್ಟಿ, ಬಿ.ಸುರೇಶ್‌, ಅಚ್ಯುತ್‌ ಕುಮಾರ್‌, ಪ್ರಮೋದ್‌ ಶೆಟ್ಟಿ, ಅವಿನಾಶ್‌, ಶ್ರುತಿ, ಶೋಭರಾಜ್‌ ಮತ್ತಿತರರು.

ಅಸಹಾಯಕತೆ, ನೋವು, ಜಿದ್ದು, ವ್ಯವಸ್ಥೆಯ ವಿರುದ್ಧ ಆಕ್ರೋಶ, ಬದಲಾವಣೆ ತರುವಕನಸು- ಇವೆಲ್ಲವನ್ನು ಒಟ್ಟು ಸೇರಿಸಿದರೆ ನಿಮಗೆ ಆಕ್ಟ್ 1978 ಸಿಗುತ್ತದೆ. ಲಾಕ್‌ಡೌನ್‌ ನಂತರ ಬಿಡುಗಡೆಯಾದ ಮೊದಲ ಹೊಸ ಚಿತ್ರ “ಆಕ್ಟ್ 1978′. ಒಂದು ವಿಭಿನ್ನ ಕಥಾ ವಸ್ತುವಿನೊಂದಿಗೆ ಹೊಸ ಸಿನಿಮಾಗಳ ಬಿಡುಗಡೆಯಾಗಬೇಕೆಂಬುದು ಸಿನಿಮಾ ಮಂದಿಯ ಹಾಗೂ ಪ್ರೇಕ್ಷಕರ ಕನಸಾಗಿತ್ತು. ಆ ಕನಸು ಈಡೇರಿದೆ ಎನ್ನಬಹುದು. ಆ ಮಟ್ಟಿಗೆ “ಆಕ್ಟ್ 1978′ ಒಂದು ವಿಭಿನ್ನ ಕಥಾಹಂದರ ಹೊಂದಿರುವಚಿ ತ್ರವಾಗಿ ಗಮನ ಸೆಳೆಯುತ್ತದೆ.

ಈ ಚಿತ್ರದ ಬಗ್ಗೆ ಒಂದೇ ಮಾತಲ್ಲಿ ಹೇಳುವುದಾದರೆ ವ್ಯವಸ್ಥೆಯ ವಿರುದ್ಧದ ಹೋರಾಟ ಎನ್ನಬಹುದು. ಸಿನಿಮಾ ಪ್ರೇಕ್ಷಕನಿಗೆ ಹೆಚ್ಚು ಹತ್ತಿರವಾಗಲು ಕಾರಣ ಸರಳ ಕಥೆ ಮತ್ತು ಪ್ರೇಕ್ಷಕನೇ ಚಿತ್ರದ ಪ್ರಮುಖ ಪಾತ್ರಧಾರಿಯಾಗಿದ್ದಾನೋ ಎಂಬ ಭಾವ. ಆ ಕಾರಣದಿಂದ ಚಿತ್ರ ತುಂಬಾ ಸಲೀಸಾಗಿ ನೋಡಿಸಿಕೊಂಡು ಹೋಗುತ್ತದೆ. ಈ ಮೂಲಕ ನಿರ್ದೇಶಕ ಮಂಸೋರೆ ಮತ್ತೂಮ್ಮೆ ಹೊಸ ಬಗೆಯ ಚಿತ್ರ ನೀಡಿದ್ದಾರೆ. ಮೊದಲೇ ಹೇಳಿದಂತೆ ಚಿತ್ರದ ಕಥೆ ತುಂಬಾ ಸರಳ. ಸರ್ಕಾರಿ ಕಚೇರಿಗೆ ಅಲೆದಾಡಿ, ಅಧಿಕಾರಿಗಳ ಲಂಚಾವತಾರದಿಂದ ಬೇಸತ್ತ ಹೆಣ್ಣು ಮಗಳೊಬ್ಬಳು ಯಾವ ರೀತಿ ಸಿಡಿದೇಳುತ್ತಾಳೆ, ಅಧಿಕಾರಿಗಳಿಗೆ ಶಿಕ್ಷೆ ಕೊಡಲು ಆಕೆ ಹುಡುಕುವ ಮಾರ್ಗವೇನು ಎಂಬುದು ಚಿತ್ರದ ಒನ್‌ಲೈನ್‌.

ಚಿತ್ರದ ಕಥೆ ಅದೆಷ್ಟೋ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಘಟನೆಗಳಿಗೆ ಕನ್ನಡಿ ಹಿಡಿದಂತಿರುವುದರಿಂದ ಪ್ರೇಕ್ಷಕರಿಗೆ ಚಿತ್ರ ಹೆಚ್ಚು ಹತ್ತಿರವಾಗುತ್ತದೆ. ಚಿತ್ರದ ಪ್ರಮುಖ ಪಾತ್ರಧಾರಿ ಗೀತಾ ಪಟ್ಟಂತಹ ಕಷ್ಟವನ್ನು ಇವತ್ತಿಗೂ ಅನೇಕರು, ಅದರಲ್ಲೂ ಗ್ರಾಮೀಣ ಭಾಗದ ಮಂದಿ ಎದುರಿಸುತ್ತಿದ್ದಾರೆ. ಆದರೆ, ವ್ಯವಸ್ಥೆಯ ವಿರುದ್ಧ ಹೋಗುವ ಧೈರ್ಯದ ಕೊರತೆಯಿಂದ ಎಲ್ಲವನ್ನು ಸಹಿಸಿಕೊಂಡ, ಆ ವ್ಯವಸ್ಥೆಗೆ ಅನಿವಾರ್ಯವಾಗಿ ಒಗ್ಗಿಕೊಂಡಿದ್ದಾರೆ. ಆದರೆ, “ಆಕ್ಟ್ 1978′ ಅದೆಲ್ಲದರ ಪ್ರತಿನಿಧಿಯಾಗಿದೆ.

ಈ ಸಿನಿಮಾದಲ್ಲಿ ಹೆಚ್ಚು ಮಾತಿಲ್ಲ. ಮೌನದಲ್ಲೇ ಎಲ್ಲವನ್ನು ಹೇಳುವ ಪ್ರಯತ್ನ ಮಾಡಿದ್ದಾರೆ. ಅದರಲ್ಲೂ ಚಿತ್ರದ ಪ್ರಮುಖ ಪಾತ್ರವೊಂದು ಸಿನಿಮಾದುದ್ದಕ್ಕೆ ಸಾಗಿಬಂದರೂ ಒಂದೇ ಒಂದು ಸಂಭಾಷಣೆ ಇಲ್ಲ. ಅದಕ್ಕೊಂದು ಕಾರಣವೂ ಇದೆ.ಅದನ್ನು ಸಿನಿಮಾದಲ್ಲೇ ನೋಡಬೇಕು. ಇನ್ನು, ಅನವಶ್ಯಕ ರೋಚಕತೆಯಿಂದ ಮುಕ್ತವಾಗಿರುವ ಚಿತ್ರಕ್ಷಣ ಕ್ಷಣವೂ ಕುತೂಹಲ ಕೆರಳಿಸುತ್ತಾ ಸಾಗುತ್ತದೆ. ಕಥೆಯ ಆಶಯಕ್ಕೆ ಎಲ್ಲೂ ಧಕ್ಕೆಯಾಗದಂತೆ ಇಡೀ ಸಿನಿಮಾವನ್ನುಕಟ್ಟಿಕೊಟ್ಟಿರೋದು ಮಂಸೋರೆ ಜಾಣ್ಮೆ.

ಇದನ್ನೂ ಓದಿ : ಬೈಪಾಸ್‌ ರೋಡ್‌ನ‌ಲ್ಲಿ ನಿಂತ ನೇಹಾ ಸಕ್ಸೇನಾ

ಇಲ್ಲಿ ಸರ್ಕಾರಿ ಅಧಿಕಾರಿಗಳ ಜೊತೆ ಸರ್ಕಾರದ ನಿರ್ಲಕ್ಷ ತನವನ್ನು ಸೂಕ್ಷ್ಮವಾಗಿ ಹೇಳಲಾಗಿದೆ. ಒಂದು ಉತ್ತಮ ಸಂದೇಶದೊಂದಿಗೆ ಚಿತ್ರ ತಾರ್ಕಿಕ ಅಂತ್ಯ ಕಾಣುತ್ತದೆ. ಸಿನಿಮಾ ಮುಗಿದು ಹೊರಬರುವ ಪ್ರೇಕ್ಷಕನ ಕಣ್ಣಂಚಲ್ಲಿ ಒಂದನಿ …. ಇಡೀ ಸಿನಿಮಾವನ್ನು ಆವರಿಸಿ ಕೊಂಡಿರೋದು ನಟಿ ಯಜ್ಞಾ ಶೆಟ್ಟಿ.

ಪಾತ್ರದ ಆಶಯದಿಂದ ತುಂಬಾ ನೈಜವಾಗಿ ಕಾಣಿಸಿಕೊಂಡು, ನಟಿಸಿದ್ದಾರೆ. ಹೆಚ್ಚು ಮಾತಿಲ್ಲದ ಹಾಗೂ ತೂಕವಿರುವ ಕೆಲವೇ ಕೆಲವು ಮಾತುಗಳ ಮೂಲಕ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಗರ್ಭಿಣಿಯೊಬ್ಬಳ ಅಸಹಾಯಕತೆ, ಭವಿಷ್ಯದ ಕನಸು, ವ್ಯವಸ್ಥೆ ಬದಲಾಗಬೇಕೆಂಬ ಆಶಯವನ್ನು ಪ್ರತಿನಿಧಿಸುವ ಗೀತಾಳ ಪಾತ್ರದಲ್ಲಿ ಯಜ್ಞಾ ಮಿಂಚಿದ್ದಾರೆ. ಉಳಿದಂತೆ ಬಿ.ಸುರೇಶ್‌ ಮಾತೇ ಇಲ್ಲದ, ಆದರೂ “ಪ್ರೇಕ್ಷಕರ ಜೊತೆ ಮಾತನಾಡುವ’ ಪಾತ್ರದ ಮೂಲಕ ಗಮನ ಸೆಳೆಯುತ್ತಾರೆ.

ಪ್ರಮೋದ್‌ ಶೆಟ್ಟಿ, ಸಂಚಾರಿ ವಿಜಯ್‌, ರಾಘು ಶಿವಮೊಗ್ಗ, ಅವಿನಾಶ್‌, ದತ್ತಣ್ಣ, ಶ್ರುತಿ ಸೇರಿದಂತೆ ಇತರರು ತಮ್ಮ ತಮ್ಮ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ. ಟಿ.ಕೆ.ದಯಾನಂದ್‌, ವೀರೇಂದ್ರ ಮಲ್ಲಣ್ಣ ಅವರ ಚಿತ್ರಕಥೆ, ಸಂಭಾಷಣೆ ಚಿತ್ರದ ತೂಕ ಹೆಚ್ಚಿಸಿದೆ. ಚಿತ್ರದ ಹಿನ್ನೆಲೆ ಸಂಗೀತ ಕಥೆಯ ಆಶಯಕ್ಕೆ ಪೂರಕವಾಗಿದೆ. ಸತ್ಯಹೆಗಡೆಯವರ ಛಾಯಾಗ್ರಹಣದಲ್ಲಿ “ಆಕ್ಟ್’ ಸುಂದರ

 

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.