ಮಿಸ್ಟರ್‌ ಪರ್ಫೆಕ್ಟ್ ‘ಪುರುಷೋತ್ತಮ’


Team Udayavani, May 8, 2022, 1:47 PM IST

ಮಿಸ್ಟರ್‌ ಪರ್ಫೆಕ್ಟ್ ‘ಪುರುಷೋತ್ತಮ’

ಗಂಡ ಕೇವಲ ಹೆಂಡತಿಯ ಯಜಮಾನನಾಗಿರದೇ ಆಕೆಯ ಪ್ರತಿಯೊಂದು ಭಾವನೆ, ಸಮಸ್ಯೆಗಳನ್ನು ಅರಿತು ಬದುಕು ಸಾಗಿಸಬೇಕು. ಪುರುಷ, ಹೆಣ್ಣನ್ನು ಗೌರವದಿಂದ, ವಿಶ್ವಾಸದಿಂದ ಕಂಡಾಗ ಮಾತ್ರ ಆತ “ಪುರುಷೋತ್ತಮ’ ಎನಿಸಿಕೊಳ್ಳುತ್ತಾನೆ.  ಇಂತಹ ಒಂದು ಕಥಾಹಂದರದೊಂದಿಗೆ ತೆರೆಗೆ ಬಂದಿರುವ ಚಿತ್ರ “ಪುರುಷೋತ್ತಮ’.

ಡೈವೋರ್ಸ್‌ ಲಾಯರ್‌, ಅಡ್ವೊಕೇಟ್‌ ಪುರುಷೋತ್ತಮ ಸಕಲ ಕಲಾವಲ್ಲಭ. ಈತನದ್ದು ಹೆಂಡತಿ ಮಗಳಿರುವ ಸುಂದರ ಕುಟುಂಬ. ಜಗತ್ತಿನಲ್ಲಿ ಗಂಡ – ಹೆಂಡತಿಯಷ್ಟು ಸುಂದರವಾದ ಸ್ನೇಹ ಸಂಬಂಧ ಬೇರೊಂದಿಲ್ಲಾ ಅನ್ನುವ ಪುರು, ಅಪ್ಪಟ ಗೃಹಿಣಿಯಾಗಿಯೂ ಯಕ್ಷಗಾನ ಕಲಾವಿದೆಯಾಗಿರುವ ಮನೆ ಒಡತಿ ವಾಸುಕಿ. ಎಲ್ಲರಿಗಂತಲೂ ಚೂಟಿ, ಪಟ ಪಟ ಅಂತಾ ಮಾತನಾಡುವ ಮಗಳು ಪಿಂಕಿ. ಒಂದು ಸುಂದರ ಕುಟುಂಬ ಪ್ರೀತಿಯಿಂದ ಸಾಗುತ್ತಾ ಇದೆ ಅಂದರೆ ಅದು ಚಿತ್ರ ಆಗಲಾರದು. ಅಂತಯೇ ಎಲ್ಲಾ ಚಿತ್ರಗಳಲ್ಲಿ ಬರುವಂತೆ ಈ ಕುಟುಂಬದಲ್ಲೂ ಒಂದು ಸಮಸ್ಯೆ ಎದುರಾಗುತ್ತೆ. ಏನು ಆ ಸಮಸ್ಯೆ? ಅದನ್ನು ಹೇಗೆ ಬಗೆಹರಿಸುತ್ತಾರೆ ಎಂದು ತಿಳಿದುಕೊಳ್ಳಲು ಚಿತ್ರವನ್ನು ನೋಡಬೇಕು.

ಚಿತ್ರದ ಆರಂಭದಿಂದಲೇ ಒಂದು ಅಂಶ ಪ್ರೇಕ್ಷಕರನ್ನು ಯೋಚನೆಗೆ ತಳ್ಳುವಂತೆ ಮಾಡುತ್ತದೆ. ಚಿತ್ರದ ಮೊದಲ ಭಾಗ ಸರಾಗವಾಗಿ ಸಾಗಿ ಕಥೆಯ ಪ್ರಮುಖ ಘಟ್ಟಕ್ಕೆ ತಂದು ನಿಲ್ಲಿಸುತ್ತದೆ. ಆದರೆ ಎರಡನೇ ಭಾಗ ಕೆಲವು ಕಡೆ ಬೋರ್‌ ಆಗುವ ಜೊತೆಗೆ ಅತಿಯಾಗಿ ಎಳೆದಾಡಿದಂತೆ ಅನಿಸುವುದು ಉಂಟು. ಅವಶ್ಯಕತೆಗಿಂತ ಜಾಸ್ತಿ ದೃಶ್ಯಗಳನ್ನು ತುರುಕಲಾಗಿದೆ. ಆದರೂ ಚಿತ್ರದ ಕೊನೆಯವರೆಗೂ ಒಂದು ಕೂತುಹಲವನ್ನು ಹಿಡಿದಿಟ್ಟುಕೊಳ್ಳುವಲ್ಲಿ ನಿರ್ದೇಶಕ ಅಮರನಾಥ್‌ ಯಶಸ್ವಿಯಾಗಿದ್ದಾರೆ.

ಚಿತ್ರದ ಮೊದಲ ಭಾಗದಲ್ಲಿ ಹೀರೋ ಮಿಂಚಿದರೆ, ಎರಡನೇ ಭಾಗದಲ್ಲಿ ಹಿರೋಯಿನ್‌ ನಟನೆಯಲ್ಲಿ ಪಾರುಪತ್ಯ ಮೆರೆದಿದ್ದಾರೆ. ಚಿತ್ರದ ನಾಯಕನ ಪಾತ್ರ ಇಷ್ಟೆನಾ ಅನ್ನಿಸುವವರಿಗೆ ಕೊನೆಯಲ್ಲಿ ಸಿಗುವ ಟ್ವಿಸ್ಟ್‌ ಎಲ್ಲದಕ್ಕೂ ಉತ್ತರ ನೀಡುತ್ತದೆ. ಒಂದಿಷ್ಟು ಡೈಲಾಗ್‌, ಅಲ್ಲಲ್ಲಿ ಕಾಮಿಡಿ, ಪ್ರೀತಿ, ಡ್ರಾಮಾ ಹಾಗೂ ಸಪ್ಸೆನ್ಸ್‌ ಥ್ರಿಲ್ಲರ್‌ ಕೂಡಿಸಿ ಪುರುಷೋತ್ತಮನಾಗಿದ್ದಾನೆ.

ಇಲ್ಲಿತನಕ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಜಿಮ್‌ ರವಿ ನಾಯಕನಾಗಿ ಅಭಿನಯಿಸದ ಮೊದಲ ಚಿತ್ರವಾಗಿದ್ದು, ತಮ್ಮ ಡೈಲಾಗ್‌ಗಳ ಮೂಲಕವೇ ಮಿಂಚಿದ್ದಾರೆ. ಇನ್ನು ಕೇವಲ ಬಬ್ಲಿ ಪಾತ್ರಗಳಲ್ಲಿ ಅಭಿನಯಿಸಿದ್ದ ಅಪೂರ್ವ ಒಂದು ಜವಾಬ್ದಾರಿಯುತ ಪಾತ್ರ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಳಿದಂತೆ ಪಾತ್ರಧಾರಿಗಳು ಕಥೆಗೆ ಪೂರಕವಾಗಿ ಅಭಿನಯಿಸಿದ್ದಾರೆ. ಶ್ರೀಧರ್‌ ವಿ ಸಂಭ್ರಮ್‌ ಅವರ ಸಂಗೀತ ಕಥೆಗೆ ಸಾಥ್‌ ನೀಡುವಂತಿದ್ದು, ಕುಮಾರ್‌ ಎಂ ತಮ್ಮ ಕ್ಯಾಮಾರ ಮೂಲಕ ಮೈಸೂರಿನ ದರ್ಶನ ಮಾಡಿಸಿದ್ದಾರೆ.

 

– ವಾಣಿ ಭಟ್ಟ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.