ಚಿತ್ರಮಂದಿರಕ್ಕೆ ಮತ್ತೆ ಬನ್ನಿ ಸಂಭ್ರಮಿಸೋಣ : ಪ್ರೇಕ್ಷಕರನ್ನು ಸೆಳೆಯಲು ಮುಂದುವರೆದ ಕಸರತ್ತು

ಸ್ಯಾಂಡಲ್‌ವುಡ್‌ ತಾರೆಯರ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ

Team Udayavani, Nov 18, 2020, 12:29 PM IST

ಚಿತ್ರಮಂದಿರಕ್ಕೆ ಮತ್ತೆ ಬನ್ನಿ ಸಂಭ್ರಮಿಸೋಣ : ಪ್ರೇಕ್ಷಕರನ್ನು ಸೆಳೆಯಲು ಮುಂದುವರೆದ ಕಸರತ್ತು

ಸಿನಿಪ್ರಿಯರನ್ನು ಮತ್ತೆ ಥಿಯೇಟರ್‌ಗಳು- ಮಲ್ಟಿಪ್ಲೆಕ್ಸ್‌ಗಳತ್ತಕರೆತರಲು ಸ್ವತಃ ಕನ್ನಡ ಚಿತ್ರರಂಗದ ತಾರೆಯರೇ ಅಖಾಡಕ್ಕೆ ಇಳಿದಿದ್ದಾರೆ. ಇದರ ಭಾಗವಾಗಿ “ಚಿತ್ರಮಂದಿರಕ್ಕೆ ಮತ್ತೆ ಬನ್ನಿ ಸಂಭ್ರಮಿಸೋಣ’ ಎನ್ನುವ ಹೆಸರಿನಲ್ಲಿ ಕಲಾವಿದರು ಒಂದು ಅಭಿಯಾನವನ್ನೇ ಪ್ರಾರಂಭಿಸಿದ್ದಾರೆ.

ಕೋವಿಡ್ ಲಾಕ್‌ಡೌನ್‌ನಿಂದಾಗಿ ಬಂದ್‌ ಆಗಿದ್ದ, ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಪುನಃ ಸಿನಿಮಾಗಳ ಪ್ರದರ್ಶನಕ್ಕೆ ಸರ್ಕಾರ ಶರತ್ತುಬದ್ಧ ಅನುಮತಿ ನೀಡಿದೆ. ಇದೇ ಖುಷಿಯಲ್ಲಿ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ಕೂಡ ಭರ್ಜರಿಯಾಗಿಯೇ ಪುನಾರಂಭಗೊಂಡು ಪ್ರೇಕ್ಷಕರ ಸ್ವಾಗತಕ್ಕೆ ನಿಂತಿವೆ. ಅದರ ಭಾಗವಾಗಿ ಈಗಾಗಲೇ ಸೂಪರ್‌ ಹಿಟ್‌ ಆದ ಒಂದಷ್ಟು ಸ್ಟಾರ್‌ ನಟರ ಸಿನಿಮಾಗಳು ರೀ-ರಿಲೀಸ್‌ ಆಗಿದ್ದವು. ಆದರೆ ಥಿಯೇಟರ್‌ಗಳು – ಮಲ್ಟಿಪ್ಲೆಕ್ಸ್‌ಗಳು ತೆರೆದು ಒಂದು ತಿಂಗಳಾಗುತ್ತ ಬಂದರೂ, ಅಂದುಕೊಂಡಂತೆ ಪ್ರೇಕ್ಷಕ ಪ್ರಭುಗಳು ನಿರೀಕ್ಷಿತ ಸಂಖ್ಯೆಯಲ್ಲಿ ಥಿಯೇಟರ್‌ಗಳಕಡೆಗೆ ಮುಖ ಮಾಡುತ್ತಿಲ್ಲ. ಇದು ಸಹಜವಾಗಿಯೇ ಚಿತ್ರರಂಗದ ಮಂದಿಯ ಆತಂಕ, ಬೇಸರ ಎರಡಕ್ಕೂ ಕಾರಣವಾಗಿದೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಚಿತ್ರೋದ್ಯಮದ ಮಂದಿ ಪ್ರೇಕ್ಷಕರನ್ನು ಥಿಯೇಟರ್‌ಗಳು – ಮಲ್ಟಿಪ್ಲೆಕ್ಸ್‌ ಗಳತ್ತಕರೆತರುವಕರಸತ್ತು ಮುಂದುವರೆಸಿದ್ದಾರೆ.

ಹೌದು, ಕೋವಿಡ್ ಆತಂಕದಿಂದ ಬೆಚ್ಚಿ, ಮನೆಯಲ್ಲೇ ಬೆಚ್ಚಗೇಕುಳಿತ ಸಿನಿಪ್ರಿಯರನ್ನು ಮತ್ತೆ ಥಿಯೇಟರ್‌ಗಳು – ಮಲ್ಟಿಪ್ಲೆಕ್ಸ್‌ಗಳತ್ತ ಕರೆತರಲು ಸ್ವತಃಕನ್ನಡ ಚಿತ್ರರಂಗದ ತಾರೆಯರೇ ಅಖಾಡಕ್ಕೆ ಇಳಿದಿದ್ದಾರೆ. ಅದರ ಭಾಗವಾಗಿ ಈಗ ಸೋಶಿಯಲ್‌ ಮೀಡಿಯಾಗಳನ್ನು ವೇದಿಕೆಗಳನ್ನಾಗಿ ಬಳಸಿಕೊಳ್ಳಲಾಗುತ್ತಿದ್ದು, “ಚಿತ್ರಮಂದಿರಕ್ಕೆ ಮತ್ತೆ ಬನ್ನಿ ಸಂಭ್ರಮಿಸೋಣ’ ಎನ್ನುವ ಹೆಸರಿನಲ್ಲಿಕನ್ನಡದಕಲಾವಿದರು ಒಂದು ಅಭಿಯಾನವನ್ನೇ ಪ್ರಾರಂಭಿಸಿದ್ದಾರೆ.

ಈ ಬಗ್ಗೆ ಕನ್ನಡ ಚಿತ್ರರಂಗದ ನಿರ್ಮಾಪಕ ಮತ್ತು ವಿತರಕ ಕಾರ್ತಿಕ್‌ ಗೌಡ ನೇತೃತ್ವದಲ್ಲಿ ಚಿತ್ರಮಂದಿರಗಳ ಬಗ್ಗೆ ಮತ್ತೆ ಜನರನ್ನು ವಾಪಸ್‌ ಚಿತ್ರಮಂದಿರಕ್ಕೆಕರೆತರುವ ಬಗ್ಗೆ ಒಂದು ಭಾವನಾತ್ಮಕ ವಿಡಿಯೋವನ್ನು ಮಾಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. “ಕೆಆರ್‌ಜಿ ಸ್ಟುಡಿಯೋಸ್‌’ ಈ ವಿಡಿಯೋವನ್ನು ನಿರ್ಮಿಸಿದ್ದು, ನಟರಾದ ಶಿವರಾಜ್‌ಕುಮಾರ್‌, ಪುನೀತ್‌ ರಾಜಕುಮಾರ್‌, ಗಣೇಶ್‌, ಶ್ರೀಮುರಳಿ, ದುನಿಯಾ ವಿಜಯ್, ಧನಂಜಜ್ ಮೊದಲಾದ ಸ್ಟಾರ್ ಪ್ರೇಕ್ಷಕರನ್ನು ಥಿಯೇಟರ್‌ಗೆ ಬರುವಂತೆ ಆಹ್ವಾನಿಸಿದ್ದಾರೆ.

ಇನ್ನು ಈ ವಿಡಿಯೋಗೆ ಸಾಮಾಜಿಕ ತಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ವಿಡಿಯೋ ನೋಡಿ ಅನೇಕರು ಭಾವುಕರಾಗುತ್ತಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿರುವ ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್‌, “ಈ ವಿಡಿಯೋ ನೋಡಿ ಕಣ್ಣೀರು ಬಂತು. ಮೊದಲಿನ ದಿನಗಳು ಮತ್ತೆ ಬರಬೇಕು.  ಶಿಳ್ಳೆಯ ಶಬ್ದ ಮತ್ತೆಕೇಳಿಸಬೇಕು, ಸಿನಿಮಾ ಪೋಸ್ಟರ್‌ಗಳು ರಾರಾಜಿಸಬೇಕು, ಶರ್ಟ್‌ ಹರಿದು ಹೋಗುವ ರೀತಿ ಪ್ರೇಕ್ಷಕರು ಸಂಭ್ರಮಿಸುವುದನ್ನ ನೋಡಬೇಕು. ಚಿತ್ರ ಮಂದಿರಗಳು, ನಮ್ಮ ತಾಯಿ’ ಎಂದು ಭಾವುಕರಾಗಿ ಬರೆದುಕೊಂಡಿದ್ದು,ಕನ್ನಡ ಸಿನಿಮಂದಿಯ ಇಂಥದ್ದೊಂದು ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ವಿಡಿಯೋದಲ್ಲಿ ಅಂತದ್ದೇನಿದೆ? :  ಕೋವಿಡ್ ಲಾಕ್‌ಡೌನ್‌ನಿಂದಾಗಿ ಸುಮಾರು ಏಳು ತಿಂಗಳ ಬಳಿಕ ಚಿತ್ರಮಂದಿರಗಳು ಓಪನ್‌ ಆಗಿವೆ. ಈಗಲಾದರೂ ಪ್ರೇಕ್ಷಕರು ಚಿತ್ರಮಂದಿರಗಳಕಡೆಗೆ ಬರುವಂತಾಗಲಿ ಎಂದು ಚಿತ್ರರಂಗದ ಮಂದಿ ಕಾಯುತ್ತಿದ್ದಾರೆ. ಅಭಿಮಾನಿಗಳು ಮತ್ತು ಪ್ರೇಕ್ಷಕರ ಚಪ್ಪಾಳೆ, ಶಿಳ್ಳೆ, ಕೂಗು,ಕುಣಿತ, ಪಟಾಕಿ ಸೌಂಡ್‌ ಇಂಥ ಸಂಭ್ರಮವನ್ನೆಲ್ಲ ಮತ್ತೆ ನೋಡಬಹುದಾ? ಥಿಯೇಟರ್‌ಗಳಲ್ಲಿ ಮತ್ತೆ ಹಳೆಯ ದಿನಗಳು ಮರುಕಳಿಸುತ್ತಾ? ಎನ್ನುವ ಸಂಗತಿಗಳನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ­

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.