ಆಕ್ಟ್ 1978 ಚಿತ್ರಕ್ಕೆ ಅದ್ಧೂರಿ ಸ್ವಾಗತ

ಎಂಟು ತಿಂಗಳ ಬಳಿಕ ಚಿತ್ರಮಂದಿರದಲ್ಲಿ ಹೊಸ ಸಿನಿಮಾ

Team Udayavani, Nov 21, 2020, 12:04 PM IST

ಆಕ್ಟ್ 1978 ಚಿತ್ರಕ್ಕೆ ಅದ್ಧೂರಿ ಸ್ವಾಗತ

ಲಾಕ್‌ಡೌನ್‌ ನಂತರ ಹೊಸ ಚಿತ್ರವಾಗಿ ಚಿತ್ರಮಂದಿರದಲ್ಲಿ ತೆರೆಕಂಡ "ಆಕ್ಟ್ 1978' ಚಿತ್ರ ವೀಕ್ಷಣೆಗೆ ಬಂದ ನಟಿಯರುಖುಷಿಯಿಂದ ತೆಗೆದುಕೊಂಡ ಸೆಲ್ಫಿ.

ಬೆಂಗಳೂರು: ಲಾಕ್‌ಡೌನ್‌ ನಂತರ ಹೊಸ ಚಿತ್ರವಾಗಿ ಚಿತ್ರಮಂದಿರದಲ್ಲಿ ತೆರೆಕಂಡ “ಆಕ್ಟ್ 1978′ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಎಂಟು ತಿಂಗಳ ನಂತರ ಹೊಸ ಚಿತ್ರವೊಂದು ಚಿತ್ರಮಂದಿರದಲ್ಲಿ ತೆರೆಕಂಡಿರುವುದರಿಂದ ಶುಕ್ರವಾರ ಸಿನಿಮಾ ಪ್ರೇಮಿಗಳು ಫ‌ಸ್ಟ್‌ ಡೇ ಫ‌ಸ್ಟ್‌ ಶೋ ಕಣ್ತುಂಬಿಕೊಂಡು ಖುಷಿಪಟ್ಟರು. ಆ ಸಂಭ್ರಮ ಸೋಶಿಯಲ್‌ ಮೀಡಿಯಾ, ವಾಟ್‌ ಆ್ಯಪ್‌ಗಳಲ್ಲೂ ಕಾಣಿಸಿತ್ತು. ಅನೇಕರು ತಮ್ಮ ಟಿಕೆಟ್‌ ನೊಂದಿಗೆ ಹಾಗೂ ಟೈಟಲ್‌ ಕಾರ್ಡ್‌ನ ಫೋಟೋವನ್ನು ಶೇರ್‌ಮಾಡುವ ಜೊತೆಗೆ ಸಿನಿಮಾದ ಒನ್‌ಲೈನ್‌ ವಿಮರ್ಶೆ ಮಾಡಿ ಸಂಭ್ರಮಿಸಿದ್ದು ಕಂಡು ಬಂತು.

100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ: “ಆಕ್ಟ್ 1978′ ಚಿತ್ರವೂ ಸುಮಾರು 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಯಾಗಿದೆ.60 ಸಿಂಗಲ್‌ ಸ್ಕ್ರೀನ್‌ ಹಾಗೂ 40 ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರದರ್ಶ ನವಾಗುತ್ತಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಚಿತ್ರ ಬಿಡುಗಡೆಯಾಗಿ ಉತ್ತಮ ಪ್ರದರ್ಶ ಕಾಣುತ್ತಿದೆ. ಶುಕ್ರವಾರ ಬೆಂಗಳೂರಿನ ವೀರೇಶ್‌ ಚಿತ್ರಮಂದಿರದ ಬೆಳಗಿನ ಪ್ರದರ್ಶನ ಹೌಸ್‌ಫ‌ುಲ್‌ ಆಗುವ ಮೂಲಕ ಚಿತ್ರ ಹೊಸ ಭರವಸೆ ಮೂಡಿಸಿತು. ಫ್ಯಾಮಿಲಿ ಆಡಿಯನ್ಸ್‌ ಕೂಡಾ ಸಿನಿಮಾದತ್ತ ಮುಖ ಮಾಡಿ, ಸಿನಿಮಾವನ್ನು ಕಣ್ತುಂಬಿಕೊಂಡರು.  ಚಿತ್ರ ಪ್ರದರ್ಶನವಾಗುತ್ತಿರುವ ಎಲ್ಲ ಚಿತ್ರಮಂದಿರ ಗಳಲ್ಲೂಶೇ 30 ರಿಂದ 35 ಭಾಗದಷ್ಟು ಪ್ರೇಕ್ಷಕರು ತುಂಬಿದ್ದು ಸಿನಿಮಾ ಮಂದಿಯ ಭರವಸೆ ಹೆಚ್ಚಿಸಿತು.

ಇದನ್ನೂ ಓದಿ : Act 1978 : ಹೋರಾಟದ ಹಾದಿಯಲ್ಲಿ ಕಣ್ಣೀರ ಕಹಾನಿ

ಪ್ರೀಮಿಯರ್‌ ಶೋಗೆ ಜನವೋ ಜನ: ಗುರುವಾರವೀರೇಶ್‌ ಚಿತ್ರಮಂದಿರದಲ್ಲಿ ನಡೆದ ಚಿತ್ರದ ಪ್ರೀಮಿಯರ್‌ ಶೋಗೆ ಸಿನಿಮಾ ಪ್ರೇಮಿಗಳು ಆಗಮಿಸಿ, ಬಿಡುಗಡೆಯ ಒಂದು ದಿನ ಮುಂಚೆನೇ ಸಿನಿಮಾ ಕಣ್ತುಂಬಿಕೊಂಡರು. ಎಂಟು ತಿಂಗಳ ನಂತರ ತೆರೆ ಕಾಣುತ್ತಿರುವ ಚಿತ್ರವಾದ್ದರಿಂದ ಇಡೀ ಚಿತ್ರ ಮಂದಿರವನ್ನು ಕಲರ್‌ಫ‌ುಲ್‌ ಆಗಿ ಅಲಂಕರಿಸಲಾಗಿತ್ತು. ಇದು ಸಿನಿಮಾ ಪ್ರೇಮಿಗಳ ಉತ್ಸಾಹವನ್ನು ಹೆಚ್ಚಿಸಿತು. ಇನ್ನು, ಚಿತ್ರಕ್ಕೆ ಕನ್ನಡ ಚಿತ್ರರಂಗದ ನಟ, ನಟಿಯರು ಕೂಡಾ ಶುಭ ಕೋರುವ ಮೂಲಕ ಬೆಂಬಲಿಸುತ್ತಿದ್ದಾರೆ. ಈಗಾಗಲೇ ಸಿನಿಮಾ ನೋಡಿರುವ ಸುದೀಪ್‌ ಸಿನಿಮಾದಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಉಳಿದಂತೆ ರಕ್ಷಿತ್‌ ಶೆಟ್ಟಿ, ಶಿವರಾಜ್‌ಕುಮಾರ್‌, ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್‌, ಪವನ್‌ ಒಡೆಯರ್‌ ಸೇರಿದಂತೆ ಅನೇಕರು ಚಿತ್ರಕ್ಕೆ ಶುಭಕೋರಿದ್ದಾರೆ. ನಟ ದುನಿಯಾ ವಿಜಯ್‌ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡಲು ಮುಂದಾಗಿದ್ದಾರೆ.

ಚಿತ್ರವನ್ನು ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಿಧಾನವಾಗಿ ಪ್ರೇಕ್ಷಕರು ಕೂಡಾ ಚಿತ್ರಮಂದಿರದತ್ತ ಬರುತ್ತಿದ್ದಾರೆ. ಮುಂದೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ದೇವರಾಜ್‌ ಆರ್‌, ನಿರ್ಮಾಪಕ, ಆಕ್ಟ್ 1978

ಬಿಡುಗಡೆಯಾದ ಎಲ್ಲಾ ಕೇಂದ್ರಗಳಲ್ಲೂ ಸಿನಿಮಾಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ವೀಕೆಂಡ್‌ನ‌ಲ್ಲಿ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ನಿರೀಕ್ಷಿಸುತ್ತಿದ್ದೇವೆ. ಕಾರ್ತಿಕ್‌ ಗೌಡ, ಕೆಆರ್‌ಜಿ ಸ್ಟುಡಿಯೋ

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.