“ಬಡವ ರಾಸ್ಕಲ್’ಗೆ ಮುಹೂರ್ತ
Team Udayavani, Aug 24, 2019, 3:00 AM IST
“ಬಡವ ರಾಸ್ಕಲ್’ ಅನ್ನೋ ಹೆಸರಿನಲ್ಲೇ ಕನ್ನಡದಲ್ಲಿ ಚಿತ್ರವೊಂದು ತಯಾರಾಗುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ನಟ ಧನಂಜಯ್, ಅಮೃತಾ ಅಯ್ಯಂಗಾರ್ ಮೊದಲಾದ ಕಲಾವಿದರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಶುಕ್ರವಾರ ನೆರವೇರಿತು.
ದುನಿಯಾ ವಿಜಯ್, ಯಶ್ ಶೆಟ್ಟಿ, ಪನ್ನಗಭರಣ ಸೇರಿದಂತೆ ಚಿತ್ರರಂಗದ ಅನೇಕರು ಸಮಾರಂಭದಲ್ಲಿ ಹಾಜರಿದ್ದು, “ಬಡವ ರಾಸ್ಕಲ್’ ಚಿತ್ರತಂಡಕ್ಕೆ ಶುಭ ಕೋರಿದರು. ಶಂಕರ್ ಗುರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ಗುಜ್ಜಲ್ ಪುರುಷೋತ್ತಮ್ ಮತ್ತು ಡಾಲಿ ಧನಂಜಯ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಪ್ರೀತಾ ಜಯರಾಮನ್ ಛಾಯಾಗ್ರಹಣ, ವಾಸುಕಿ ವೈಭವ್ ಸಂಗೀತವಿದೆ.