ವಿನಯ್ ಚಿತ್ರಕ್ಕೆ ಮುಹೂರ್ತ
Team Udayavani, Sep 9, 2019, 3:00 AM IST
ವಿನಯ್ ರಾಜಕುಮಾರ್ ಹೊಸ ಚಿತ್ರದಲ್ಲಿ ಬಾಕ್ಸರ್ ಆಗಿ ಕಾಣಿಸಿಕೊಳ್ಳುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಆ ಚಿತ್ರ ಮುಹೂರ್ತ ಆಚರಿಸಿಕೊಂಡಿದೆ. ಭಾನುವಾರ ಬನಶಂಕರಿಯ ಶ್ರೀ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ನಟ, ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್, ರಕ್ಷಿತ್ ಶೆಟ್ಟಿ ಸೇರಿದಂತೆ ಚಿತ್ರತಂಡ ಮುಹೂರ್ತದಲ್ಲಿ ಭಾಗಿಯಾಯಿತು.
ಈ ಚಿತ್ರವನ್ನು ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಿಸುತ್ತಿದ್ದು, ಕರಮ್ ಚಾವ್ಲಾ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ಕರಮ್ ಚಾವ್ಲಾ ಅವರು ಹಲವು ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದರು. ಇದು ಅವರ ಮೊದಲ ಚಿತ್ರ. ಚಿತ್ರದಲ್ಲಿ ವಿನಯ್ಗೆ ಜೋಡಿಯಾಗಿ ಅನುಷಾ ನಟಿಸುತ್ತಿದ್ದಾರೆ. ಚಿತ್ರಕ್ಕೆ ಶೀರ್ಷಿಕೆ ಇನ್ನಷ್ಟೇ ಅಂತಿಮವಾಗಬೇಕಿದೆ.