ಮರ್ಡರ್‌ ಮಿಸ್ಟ್ರಿ ಹೇಳೋಕೆ ಅಕ್ಷರಾ ಗೌಡ ರೆಡಿ

ಹೇಮಂತ್‌ ಹೆಗ್ಡೆ ನಿರ್ದೇಶನದ ಚಿತ್ರ

Team Udayavani, Sep 10, 2019, 3:05 AM IST

Akshara-Gowda

ಯೋಗರಾಜ್‌ ಭಟ್ಟರ “ಪಂಚತಂತ್ರ’ ಚಿತ್ರದ ಮೂಲಕ ಕನ್ನಡ ಸಿನಿಪ್ರಿಯರಿಗೆ ಹತ್ತಿರವಾಗಿದ್ದ ನಟಿ ಅಕ್ಷರಾ ಗೌಡ ಶೀಘ್ರದಲ್ಲಿಯೇ ಮರ್ಡರ್‌ ಮಿಸ್ಟ್ರಿಯೊಂದಿಗೆ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, ಬೋಲ್ಡ್‌ ಬೆಡಗಿ ಅಕ್ಷರಾ ಗೌಡ, ಹೇಮಂತ್‌ ಹೆಗ್ಡೆ ನಿರ್ದೇಶನದ ಹೊಸಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಚಿತ್ರದಲ್ಲಿ ಗುರುನಂದನ್‌ ನಾಯಕನಾಗಿದ್ದು, ಅವರಿಗೆ ಜೋಡಿಯಾಗಿ ಅಕ್ಷರಾ ಗೌಡ ತೆರೆಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ಇನ್ನು ಹೆಸರಿಡದ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಇದೇ ತಿಂಗಳ ಅಂತ್ಯಕ್ಕೆ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನು ಚಿತ್ರತಂಡದ ಮೂಲಗಳ ಪ್ರಕಾರ ಅಕ್ಟೋಬರ್‌ ಎರಡನೇ ವಾರದಿಂದ ಚಿತ್ರದ ಚಿತ್ರೀಕರಣ ನಡೆಯಲಿದ್ದು, ಚಿತ್ರದ ಬಹುಭಾಗ ಚಿತ್ರೀಕರಣ ಬೆಂಗಳೂರು, ನಾರ್ವೆ ಸುತ್ತಮುತ್ತ ನಡೆಸಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಹೇಮಂತ್‌ ಹೆಗ್ಡೆ, ಇದೊಂದು ಸಸ್ಪೆನ್ಸ್‌-ಮರ್ಡರ್‌ ಮಿಸ್ಟ್ರಿ ಚಿತ್ರ. ಇದರಲ್ಲಿ ಕಾಮಿಡಿ, ಥ್ರಿಲ್ಲರ್‌ ಹೀಗೆ ಹಲವು ಅಂಶಗಳು ಇರಲಿವೆ. ಕನ್ನಡದಲ್ಲಿ ಇಲ್ಲಿಯವರೆಗೂ ಯಾರೂ ಮುಟ್ಟದ ಎಲಿಮೆಂಟ್‌ ಒಂದನ್ನು ಇದರಲ್ಲಿ ಹೇಳಲು ಹೊರಟಿದ್ದೇವೆ. ಅದೇನು ಅನ್ನೋದನ್ನ ಚಿತ್ರದಲ್ಲೇ ನೋಡಬೇಕು. ಪದ್ಮಲತಾ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು, ಸದ್ಯ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಅಂತಿಮ ಆಯ್ಕೆ ನಡೆಯುತ್ತಿದೆ.

ಶೀಘ್ರದಲ್ಲಿ ಚಿತ್ರತಂಡದ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತೇವೆ ಎನ್ನುತ್ತಾರೆ. ಇನ್ನು ಕನ್ನಡದಲ್ಲಿ ಇತ್ತೀಚೆಗೆ ಹೊಸತರದ ಚಿತ್ರಗಳು ಮತ್ತು ಪಾತ್ರಗಳು ತಮ್ಮನ್ನು ಹುಡುಕಿಕೊಂಡು ಬರುತ್ತಿರುವುದರ ಬಗ್ಗೆ ನಟಿ ಅಕ್ಷರಾ ಗೌಡ ಕೂಡ ಫ‌ುಲ್‌ ಖುಷಿಯಾಗಿದ್ದಾರೆ. ಈ ಬಗ್ಗೆ ಮಾತನಾಡುವ ಅಕ್ಷರಾ ಗೌಡ “ಸದ್ಯ ಕನ್ನಡದಲ್ಲಿ ಹೊಸ ಸಬ್ಜೆಕ್ಟ್ ಚಿತ್ರಗಳಿಗೆ ಒಳ್ಳೆಯ ಆಫ‌ರ್ ಬರುತ್ತಿವೆ. ಈಗಾಗಲೇ ಹಲವು ಕಥೆಗಳನ್ನು ಕೇಳಿದ್ದೇನೆ.

ಅದರಲ್ಲಿ ಕೆಲವು ಕಥೆಗಳು ಇಷ್ಟವಾಗಿದ್ದು, ಅದರ ಬಗ್ಗೆ ಇನ್ನಷ್ಟೇ ನಿರ್ಧರಿಸಬೇಕಾಗಿದೆ. ಇನ್ನು ಹೇಮಂತ್‌ ಹೆಗ್ಡೆ ಅವರನ್ನು ನಾನು ಇಲ್ಲಿಯವರೆಗೆ ನಟನಾಗಿ ನೋಡಿದೆ. ಈಗ ಅವರ ಜೊತೆ ಕೆಲಸ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಈಗಲೇ ಅವರ ಜೊತೆಗಿನ ಹೊಸ ಚಿತ್ರದ ಬಗ್ಗೆ ಹೆಚ್ಚೇನು ಮಾಹಿತಿ ಹೇಳಲಾರೆ. ಆದ್ರೆ ಚಿತ್ರದ ಕಥೆ ಮತ್ತು ನನ್ನ ಪಾತ್ರ ಎರಡೂ ತುಂಬ ವಿಭಿನ್ನವಾಗಿದೆ ಎಂದಷ್ಟೇ ಹೇಳಬಲ್ಲೆ’ ಎನ್ನುತ್ತಾರೆ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.